AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀ ಡೀ ಡಿಕ್ಕಿ.. ಮುಖದಲ್ಲಿ ಮುಗುಳ್ನಗು, ತುಂಟಾಟ, ಜಾದೂ, ಮುಗ್ಧ ಮನಸ್ಸುಗಳೊಂದಿಗೆ ಮಗುವಾದ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ಮಕ್ಕಳೊಂದಿಗೆ ಸಮಯ ಕಳೆಯುವ ಸದವಕಾಶವನ್ನು ಎಂದೂ ಮಿಸ್ ಮಾಡಿಕೊಳ್ಳುವುದಿಲ್ಲ, ಮಕ್ಕಳ ಜತೆ ಮಕ್ಕಳಾಗಿಯೇ ನಡೆದುಕೊಳ್ಳುತ್ತಾರೆ. ಪ್ರಧಾನಿ ಮೋದಿಯವರು ಇನ್​ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಮಕ್ಕಳೊಂದಿಗೆ ಕಳೆದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಮಕ್ಕಳನ್ನು ತನ್ನ ಸ್ನೇಹಿತರು ಎಂದು ಬಣ್ಣಿಸಿದ್ದಾರೆ.

ಡೀ ಡೀ ಡಿಕ್ಕಿ.. ಮುಖದಲ್ಲಿ ಮುಗುಳ್ನಗು, ತುಂಟಾಟ, ಜಾದೂ, ಮುಗ್ಧ ಮನಸ್ಸುಗಳೊಂದಿಗೆ ಮಗುವಾದ ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Nov 16, 2023 | 12:17 PM

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ಮಕ್ಕಳೊಂದಿಗೆ ಸಮಯ ಕಳೆಯುವ ಸದವಕಾಶವನ್ನು ಎಂದೂ ಮಿಸ್ ಮಾಡಿಕೊಳ್ಳುವುದಿಲ್ಲ, ಮಕ್ಕಳ ಜತೆ ಮಕ್ಕಳಾಗಿಯೇ ನಡೆದುಕೊಳ್ಳುತ್ತಾರೆ. ಪ್ರಧಾನಿ ಮೋದಿಯವರು ಇನ್​ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಮಕ್ಕಳೊಂದಿಗೆ ಕಳೆದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಮಕ್ಕಳನ್ನು ತನ್ನ ಸ್ನೇಹಿತರು ಎಂದು ಬಣ್ಣಿಸಿದ್ದಾರೆ. ಮೋದಿ ಎಂದರೆ ಕೇವಲ ದೊಡ್ಡವರಿಗೆ ಮಾತ್ರವಲ್ಲ ಮಕ್ಕಳಿಗೂ ಅಚ್ಚುಮೆಚ್ಚು.

ಈ ವಿಡಿಯೋದಲ್ಲಿ ಮಕ್ಕಳು ಅವರವರೇ ಜಗಳವಾಡುವುದನ್ನು ಕಾಣಬಹುದು, ಆಗ ಎರಡು ಮಕ್ಕಳ ತಲೆಯನ್ನು ಹತ್ತಿರ ತೆಗೆದುಕೊಂಡು ಹೋಗಿ ನಿಧಾನವಾಗಿ ಡಿಕ್ಕಿ ಹೊಡೆಸುತ್ತಾರೆ. ಬಳಿಕ ಹಣೆಯ ಮೇಲೆ ನಾಣ್ಯವನ್ನು ಅಂಟಿಸಿ ಜಾದೂ ಮಾಡುತ್ತಾರೆ. ಮಕ್ಕಳೊಂದಿಗೆ ಕಳೆದ ಅವಿಸ್ಮರಣೀಯ ಕ್ಷಣಗಳು ಎಂದು ಅದಕ್ಕೆ ಶೀರ್ಷಿಕೆ ನೀಡಲಾಗಿದೆ.

ಪ್ರಧಾನಿ ಮೋದಿ ಮಕ್ಕಳೊಂದಿಗೆ ಸಮಯ ಕಳೆಯುತ್ತಿರುವುದು ಇದೇ ಮೊದಲಲ್ಲ, ಈ ಹಿಂದೆಯೂ ಹಲವು ಸಂದರ್ಭಗಳಲ್ಲಿ ಅವರು ಮಕ್ಕಳೊಂದಿಗೆ ನಗುತ್ತಾ, ಕಾಲ ಕಳೆದಿದ್ದಾರೆ. ಈ ವರ್ಷ ರಾಷ್ಟ್ರೀಯ ಶಿಕ್ಷಣ ನೀತಿ ಮೂರು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಅಖಿಲ ಭಾರತ ಶಿಕ್ಷಣ ಸಮಾಗಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಕ್ಕಳನ್ನು ಭೇಟಿ ಮಾಡಿದ್ದರು.

ಮಕ್ಕಳೊಂದಿಗಿನ ಚಿತ್ರಗಳನ್ನು ಹಂಚಿಕೊಂಡಿದ್ದು ಅದರಲ್ಲಿ ಮುಗ್ಧ ಮಕ್ಕಳೊಂದಿಗೆ ಕಳೆದ ಅದ್ಭುತ ಕ್ಷಣಗಳು ಎಂದು ಬರೆದುಕೊಂಡಿದ್ದಾರೆ. ಅವರ ಶಕ್ತಿ ಮತ್ತು ಉತ್ಸಾಹವು ಮನಸ್ಸಲ್ಲಿ ಉತ್ಸಾಹವನ್ನು ತುಂಬುತ್ತದೆ ಎಂದು ಬರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:14 pm, Thu, 16 November 23

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್