AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi ಕೆನಡಾದ ಮಾರ್ಕಾಮ್ ಸನಾತನ ಮಂದಿರದಲ್ಲಿರುವ ಸರ್ದಾರ್ ಪಟೇಲ್ ಪ್ರತಿಮೆ ಎರಡು ದೇಶಗಳ ನಡುವಿನ ಬಾಂಧವ್ಯದ ಸಂಕೇತ: ಮೋದಿ

ಒಬ್ಬ ಭಾರತೀಯನು ಪ್ರಪಂಚದ ಯಾವುದೇ ಭಾಗದಲ್ಲಿ ಹಲವು ತಲೆಮಾರುಗಳವರೆಗೆ ವಾಸಿಸಬಹುದು. ಆದರೆ ಅವನ ಭಾರತೀಯತೆ ಮತ್ತು ಭಾರತದ ಮೇಲಿನ ಭಕ್ತಿ ಸ್ವಲ್ಪವೂ ಕಡಿಮೆಯಾಗುವುದಿಲ್ಲ. ಅವರು ಯಾವುದೇ ರಾಷ್ಟ್ರದಲ್ಲಿ ನೆಲೆಸಿದ್ದರೂ, ಅವರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾರೆ.

PM Modi ಕೆನಡಾದ ಮಾರ್ಕಾಮ್ ಸನಾತನ ಮಂದಿರದಲ್ಲಿರುವ ಸರ್ದಾರ್ ಪಟೇಲ್ ಪ್ರತಿಮೆ ಎರಡು ದೇಶಗಳ ನಡುವಿನ ಬಾಂಧವ್ಯದ ಸಂಕೇತ: ಮೋದಿ
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:May 01, 2022 | 9:48 PM

Share

ಭಾರತವು ಒಂದು ದೊಡ್ಡ ಸಂಪ್ರದಾಯ, ಸೈದ್ಧಾಂತಿಕ ಸ್ಥಾಪನೆ, ಸಂಸ್ಕೃತಿಯ ಗುಚ್ಛ ಮತ್ತು ದೇಶವಾಗಿರುವುದರಿಂದ ಇದು ಸಂಭವಿಸುತ್ತದೆ. ಇದು ವಸುಧೈವ ಕುಟುಂಬಕಂನ ಪರಮೋಚ್ಚ ಚಿಂತನೆಯಾಗಿದೆ. ಭಾರತವು ಇತರಿಗೆ ಕೆಡುಕನ್ನುಂಟು ಮಾಡಿ ಉನ್ನತಿಯ ಕನಸು ಕಾಣುವುದಿಲ್ಲ. ಭಾರತ ಇಡೀ ಪ್ರಪಂಚದ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ. ಕೆನಡಾದ ಮಾರ್ಕಾಮ್​​ನ (Markham) ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರದಲ್ಲಿ ಸರ್ದಾರ್ ಪಟೇಲ್ ಪ್ರತಿಮೆ (Statue of Sardar Patel) ಅನಾವರಣ ಕಾರ್ಯಕ್ರಮವನ್ನುದ್ದೇಶಿಸಿ ಮೋದಿ ಮಾತನಾಡಿದ್ದಾರೆ. ಒಬ್ಬ ಭಾರತೀಯನು ಪ್ರಪಂಚದ ಯಾವುದೇ ಭಾಗದಲ್ಲಿ ಹಲವು ತಲೆಮಾರುಗಳವರೆಗೆ ವಾಸಿಸಬಹುದು. ಆದರೆ ಅವನ ಭಾರತೀಯತೆ ಮತ್ತು ಭಾರತದ ಮೇಲಿನ ಭಕ್ತಿ ಸ್ವಲ್ಪವೂ ಕಡಿಮೆಯಾಗುವುದಿಲ್ಲ. ಅವರು ಯಾವುದೇ ರಾಷ್ಟ್ರದಲ್ಲಿ ನೆಲೆಸಿದ್ದರೂ, ಅವರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾರೆ. ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಭಾರತದಿಂದ ಅವರ ಪೂರ್ವಜರು ನಡೆಸಿದ ಕರ್ತವ್ಯ ಪ್ರಜ್ಞೆಯು ಅವರ ಹೃದಯದ ಮೂಲೆಯಲ್ಲಿ ಇದ್ದೇ ಇರುತ್ತದೆ.  ಸನಾತನ ಮಂದಿರದಲ್ಲಿರುವ ಸರ್ದಾರ್ ವಲ್ಲಭಭಾಯಿ ಅವರ ಪ್ರತಿಮೆಯು ನಮ್ಮ ಸಾಂಸ್ಕೃತಿಕ ಮೌಲ್ಯಗಳನ್ನು ಬಲಪಡಿಸುವುದಲ್ಲದೆ ಎರಡು ದೇಶಗಳ ನಡುವಿನ ಬಾಂಧವ್ಯದ ಸಂಕೇತವೂ ಆಗಲಿದೆ ಎಂದಿದ್ದಾರೆ ಮೋದಿ.

ಈ ಪ್ರತಿಮೆಯು ಏಕತೆಯ ಪ್ರತಿಮೆಯ ಪ್ರತಿರೂಪವಾಗಿದೆ ಇದು ಭಾರತಕ್ಕೆ ಸ್ಫೂರ್ತಿಯಾಗಿದೆ. “ಸ್ವಾತಂತ್ರ್ಯದ ನಂತರ, ಸರ್ದಾರ್ ಪಟೇಲ್ ಅವರು ಸೋಮನಾಥ ದೇವಾಲಯವನ್ನು ಮರುಸ್ಥಾಪಿಸಿದರು, ಭಾರತವು ಹೊಸ ನೆಲೆಯಲ್ಲಿ ನಿಂತಿರುವ ಸಾವಿರಾರು ವರ್ಷಗಳ ಪರಂಪರೆಯನ್ನು ನೆನಪಿಸುತ್ತದೆ” ಎಂದು ಮೋದಿ ಹೇಳಿದ್ದಾರೆ. ಭಾರತವು ಇಡೀ ಮಾನವಕುಲದ ಮತ್ತು ಇಡೀ ಇಡೀ ಕಲ್ಯಾಣವನ್ನು ಬಯಸುತ್ತದೆ ಎಂದು ಅವರು ಹೇಳಿದರು.

ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆಯಂತಹ ವಿಷಯಗಳಲ್ಲಿ, ಭಾರತದ ಧ್ವನಿಯು ಇಡೀ ಮಾನವೀಯತೆಯನ್ನು ಪ್ರತಿನಿಧಿಸುತ್ತದೆ. “ನಮ್ಮ ಶ್ರಮವು ನಮಗಾಗಿ ಮಾತ್ರವಲ್ಲ. ಇಡೀ ಮಾನವಕುಲದ ಕಲ್ಯಾಣವು ಭಾರತದ ಪ್ರಗತಿಯೊಂದಿಗೆ ಸಂಬಂಧ ಹೊಂದಿದೆ” ಎಂದು ಪ್ರಧಾನಿ ಒತ್ತಿ ಹೇಳಿದರು.

ಸನಾತನ ಮಂದಿರ ಕಲ್ಚರಲ್ ಸೆಂಟರ್ (SMCC) ದೇವಾಲಯವಾಗಿದ್ದು, ಗ್ರೇಟರ್ ಟೊರೊಂಟೊ ಪ್ರದೇಶದ ಹಿಂದೂ ಸಮುದಾಯಕ್ಕೆ ಸೇವೆ ಸಲ್ಲಿಸುವ ಸಾಂಸ್ಕೃತಿಕ ಕೇಂದ್ರವಾಗಿದೆ. ಎಸ್ಎಂಸಿಸಿ ಪ್ರಕಾರ ಗುಜರಾತಿ ಮತ್ತು ಸಂಸ್ಕೃತಿಗೆ ಸಹಾಯ ಮಾಡಲು, ಉತ್ತೇಜಿಸಲು ಮತ್ತು ಸಂರಕ್ಷಿಸಲು 1985 ರಲ್ಲಿ ಟೊರೊಂಟೊದ ಗುಜರಾತ್ ಸಮಾಜದಿಂದ SMCC ಯೋಜನೆಯನ್ನು ಪ್ರಾರಂಭಿಸಲಾಯಿತು.ಮುಂದಿನ ಪೀಳಿಗೆಗೆ ನಮ್ಮ ಮೌಲ್ಯಗಳು ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸಲು, ಎಲ್ಲಾ ವಯಸ್ಸಿನವರಿಗೆ ಶಿಕ್ಷಣ, ಧಾರ್ಮಿಕ ಆರಾಧನೆ ಮತ್ತು ಸಾಮಾಜಿಕ ಕಾರ್ಯಗಳಿಗೆ ಸನಾತನ ಮಂದಿರ ಕಲ್ಚರಲ್ ಸೆಂಟರ್ ಸೌಲಭ್ಯಗಳನ್ನು ಒದಗಿಸುತ್ತದೆ ಎಂದು ಅದರ ವೆಬ್‌ಸೈಟ್​​ನಲ್ಲಿದೆ.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Sun, 1 May 22

Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ