AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ ಮಹೋತ್ಸವದ ಅಧಿವೇಶನ ಇದು, ಸಂಸತ್ತಿನ ಘನತೆ ಹೆಚ್ಚಿಸುವ ವರ್ತನೆ ಇರಲಿ: ನರೇಂದ್ರ ಮೋದಿ

‘ನಾವೀಗ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂಭ್ರಮದಲ್ಲಿದ್ದೇವೆ. ದೇಶಕ್ಕೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸಂಸತ್ತಿನ ಹಿರಿಮೆ ಹೆಚ್ಚಿಸಲು ಎಲ್ಲರೂ ಶ್ರಮಿಸಬೇಕು’ ಎಂದು ತಿಳಿಸಿದರು.

ಅಮೃತ ಮಹೋತ್ಸವದ ಅಧಿವೇಶನ ಇದು, ಸಂಸತ್ತಿನ ಘನತೆ ಹೆಚ್ಚಿಸುವ ವರ್ತನೆ ಇರಲಿ: ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
TV9 Web
| Edited By: |

Updated on:Jul 18, 2022 | 10:09 AM

Share

ದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ (Monsoon Session) ಇಂದಿನಿಂದ (ಜುಲೈ 18) ಆರಂಭವಾಗಲಿದ್ದು, ಸಂಸತ್ ಭವನದ (Parliament) ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ‘ಸಂಸತ್ತು ಎನ್ನುವುದು ಪವಿತ್ರ ಸ್ಥಳ. ಯಾವುದೇ ವಿಷಯವನ್ನು ಚರ್ಚಿಸೋಣ, ಇಲ್ಲಿ ಅತ್ಯುತ್ತಮ ವಿಚಾರಗಳು ಚರ್ಚೆಯಾಗಬೇಕು. ಚರ್ಚೆಗಳಲ್ಲಿ ವಿರೋಧ ಪಕ್ಷಗಳು ಸಹ ಸಕ್ರಿಯವಾಗಿ ಭಾಗಿಯಾಗಬೇಕು. ಅರ್ಥಪೂರ್ಣ ಸಂವಾದ ನಡೆಸೋಣ. ಬೇಕಿದ್ದ ವಾದ-ವಿವಾದಗಳು ನಡೆಯಲಿ’ ಎಂದು ಸಲಹೆ ಮಾಡಿದರು.

ಈ ಬಾರಿಯ ಅಧಿವೇಶನವು ಹಲವು ಕಾರಣಗಳಿಂದ ಮಹತ್ವ ಪಡೆದುಕೊಂಡಿದೆ ಎಂದ ಮೋದಿ, ಇದೇ ಅಧಿವೇಶನದಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ನಾವೀಗ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂಭ್ರಮದಲ್ಲಿದ್ದೇವೆ. ದೇಶಕ್ಕೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸಂಸತ್ತಿನ ಹಿರಿಮೆ ಹೆಚ್ಚಿಸಲು ಎಲ್ಲರೂ ಶ್ರಮಿಸಬೇಕು’ ಎಂದು ತಿಳಿಸಿದರು.

ದೇಶದ ಸ್ವಾತಂತ್ರ್ಯ ಹೋರಾಟವನ್ನು ಮತ್ತು ಅಭಿವೃದ್ಧಿಯನ್ನು ನೆನಪಿಸಿಕೊಳ್ಳುವ ಕಾಲಘಟ್ಟ ಇದು. ನಾವು ಈ ಹಂತಕ್ಕೆ ಹೇಗೆ ಬಂದೆವು ಎಂದು ಯೋಚಿಸಬೇಕು. ದೇಶಕ್ಕೆ ಸಂಸತ್ತು ಮಾರ್ಗದರ್ಶನ ಮಾಡಬೇಕು. ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು, ಹೊಸ ಉತ್ಸಾಹ ತುಂಬಲು ಸಂಸತ್ತು ಶ್ರಮಿಸಬೇಕು ಎಂದು ಸಲಹೆ ಮಾಡಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ತ್ಯಾಗ ಮತ್ತು ಬಲಿದಾನಗಳನ್ನು ನಾವೆಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳೋಣ. ಅವರ ಆಶಯಗಳಿಗೆ ದಕ್ಕೆಯಾಗದಂತೆ ವರ್ತಿಸೋಣ ಎಂದು ಕರೆ ನೀಡಿದರು.

ಸದನವನ್ನು ಸಂವಾದದ ಸತ್ಸಂಗದ ಕ್ಷೇತ್ರ, ತೀರ್ಥಕ್ಷೇತ್ರ ಎಂದುಕೊಳ್ಳಬೇಕು. ಯಾವುದೇ ವಿಷಯಗಳ ಬಗ್ಗೆ ಉತ್ತಮ ವಿಶ್ಲೇಷಣೆಗಳು ನಡೆಯಬೇಕು. ನೀತಿ ಮತ್ತು ನಿರ್ಣಯಗಳ ಬಗ್ಗೆ ನಿಮ್ಮ ಆಲೋಚನೆ ಹಂಚಿಕೊಳ್ಳಿ. ಸಕಾರಾತ್ಮಕ ಚಿಂತನೆಗೆ ಆದ್ಯತೆ ಇರಲಿ ಎಂದು ಸಲಹೆ ಮಾಡಿದರು.

Published On - 10:08 am, Mon, 18 July 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ