AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮೋದಿ ಮಾತು; ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ

ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಹೆಚ್.ಇ. ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರು  ಸಾವಿಗೀಡಾಗಿದ್ದು, ಅದಕ್ಕೆ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೆಸ್ತೀನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿರುವುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮೋದಿ ಮಾತು; ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Oct 19, 2023 | 7:18 PM

Share

ದೆಹಲಿ ಅಕ್ಟೋಬರ್ 19: ಈಗ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ (Israel-Hamas conflict) ಮಧ್ಯೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಪ್ಯಾಲೆಸ್ತೀನ್ (Palestine) ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು, ಗಾಜಾದ ಅಲ್-ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕ ಜೀವಗಳನ್ನು ಕಳೆದುಕೊಂಡಿರುವ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಭಾರತವು ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ಕಳುಹಿಸುತ್ತದೆ ಎಂದು ಭರವಸೆ ನೀಡಿದ ಪ್ರಧಾನಿ ಮೋದಿ, ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವಗಳ ನಿಲುವನ್ನು ಪುನರುಚ್ಚರಿಸಿದರು.

ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಹೆಚ್.ಇ. ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರು  ಸಾವಿಗೀಡಾಗಿದ್ದು, ಅದಕ್ಕೆ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೆಸ್ತೀನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ. ಭಯೋತ್ಪಾದನೆಯ ಆತಂಕದ ಬಗ್ಗೆಯೂ ಮಾತನಾಡಿದ್ದು, ಈ ಪ್ರದೇಶದಲ್ಲಿ ಹಿಂಸಾಚಾರ ಮತ್ತು ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವದ ನಿಲುವನ್ನು ಪುನರುಚ್ಚರಿಸಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಅನಿರೀಕ್ಷಿತ ಆಕ್ರಮಣದ ನಂತರ ಇಸ್ರೇಲ್-ಹಮಾಸ್ ಯುದ್ಧ ಭುಗಿಲೆದ್ದ ನಂತರ ಪ್ರಧಾನಿ ಮೋದಿ ಪ್ಯಾಲೆಸ್ತೀನ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು ಇದೇ ಮೊದಲು.

ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮೊದಲು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಗಾಜಾದ ಆಸ್ಪತ್ರೆಯೊಂದರ ಮೇಲೆ ನಡೆದ ದಾಳಿಯಲ್ಲಿ ಸಾವಿರಾರು ಮಂದಿ ಸಾವನ್ನಪ್ಪಿದ ವರದಿಯ ನಂತರ ನಡೆಯುತ್ತಿರುವ ಸಂಘರ್ಷದ ನಾಗರಿಕ ಸಾವುನೋವುಗಳ ಬಗ್ಗೆ ಪ್ರಧಾನಿ ಮೋದಿ ಬುಧವಾರ ಆಘಾತ ಮತ್ತು ಕಳವಳ ವ್ಯಕ್ತಪಡಿಸಿದರು.

ಇಸ್ರೇಲ್ ಮತ್ತು ಯುಎಸ್ ಭಯೋತ್ಪಾದಕ ಎಂದು ಬ್ರಾಂಡ್ ಮಾಡಿದ ಪ್ಯಾಲೆಸ್ತೀನಿಯದ ಇಸ್ಲಾಮಿಕ್ ಜಿಹಾದ್‌ನ ಮಿಸ್‌ಫೈರ್ ರಾಕೆಟ್‌ನಿಂದ ಈ ದಾಳಿ ನಡೆದಿದೆ ಎಂದು ಸಾಬೀತುಪಡಿಸಲು ಇಸ್ರೇಲಿ ರಕ್ಷಣಾ ಪಡೆಗಳು ವಿಶ್ಲೇಷಣಾ ವರದಿಯನ್ನು ಉಲ್ಲೇಖಿಸಿದ್ದರೂ ಯಾರೂ ದಾಳಿಯ ಜವಾಬ್ದಾರಿಯನ್ನು ತೆಗೆದುಕೊಂಡಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Thu, 19 October 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ