Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜತೆ ಮೋದಿ ಮಾತುಕತೆ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿ, ಇಸ್ರೇಲ್-ಹಮಾಸ್ ಸಂಘರ್ಷ ಕುರಿತು ಚರ್ಚೆ

ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಭದ್ರತೆ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಇಬ್ಬರೂ ದೂರವಾಣಿ ಮಾತುಕತೆ ವೇಳೆ ಚರ್ಚಿಸಿದ್ದಾರೆ. ಇದಲ್ಲದೆ, ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿ, ವಿಶೇಷವಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜತೆ ಮೋದಿ ಮಾತುಕತೆ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿ, ಇಸ್ರೇಲ್-ಹಮಾಸ್ ಸಂಘರ್ಷ ಕುರಿತು ಚರ್ಚೆ
ಬ್ರಿಟನ್ ಪ್ರಧಾನಿ ರಿಷಿ ಸುನಕ್ & ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on: Nov 04, 2023 | 10:52 AM

ನವದೆಹಲಿ, ನವೆಂಬರ್ 4: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak) ಶುಕ್ರವಾರ ಸಂಜೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ವೇಳೆ, ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಿದ್ದಾರೆ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಸಾಧಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಅಧಿಕಾರಾವಧಿಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಸುನಕ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ಬ್ರಿಟನ್ ಪ್ರಧಾನಿಯೊಂದಿಗೆ ರಿಷಿ ಸುನಕ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸುವ ಕುರಿತು ಚರ್ಚಿಸಲಾಗಿದೆ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು. ಭಯೋತ್ಪಾದನೆ ಮತ್ತು ಹಿಂಸಾಚಾರಕ್ಕೆ ಅವಕಾಶವಿಲ್ಲ ಎಂಬುದನ್ನು ನಾವು ಒತ್ತಿಹೇಳಿದ್ದೇವೆ. ನಾಗರಿಕರ ಸಾವು ಗಂಭೀರ ಕಳವಳಕಾರಿಯಾಗಿದೆ. ಪ್ರಾದೇಶಿಕ ಶಾಂತಿ, ಭದ್ರತೆ, ಸ್ಥಿರತೆ ಮತ್ತು ನಿರಂತರ ಮಾನವೀಯ ನೆರವಿಗಾಗಿ ಕೆಲಸ ಮಾಡಬೇಕಾಗಿದೆ’ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನೇಪಾಳ ಭೂಕಂಪದಲ್ಲಿ ಮಡಿದವರಿಗಾಗಿ ಪ್ರಧಾನಿ ಸಂತಾಪ: ನೆರವಿಗೆ ಭಾರತ ಸಿದ್ಧ ಎಂದ ಮೋದಿ

ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಭದ್ರತೆ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಇಬ್ಬರೂ ದೂರವಾಣಿ ಮಾತುಕತೆ ವೇಳೆ ಚರ್ಚಿಸಿದ್ದಾರೆ. ಭಾರತ ಮತ್ತು ಬ್ರಿಟನ್ ವ್ಯಾಪಾರ-ಸಂಬಂಧಿತ ಒಪ್ಪಂದದ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿವೆ. ಇದಲ್ಲದೆ, ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿ, ವಿಶೇಷವಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

ಭಯೋತ್ಪಾದನೆ, ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ಅಮಾಯಕರ ಜೀವಹಾನಿಯ ಬಗ್ಗೆ ಇಬ್ಬರೂ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯ ಪ್ರಾಮುಖ್ಯತೆಯನ್ನು ಉಲ್ಲೇಖಿಸಿದ ಅವರು, ಪೀಡಿತ ಪ್ರದೇಶಗಳಲ್ಲಿ ನಿರಂತರ ಮಾನವೀಯ ನೆರವಿನ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ