AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G7 Summit 2021: ಜಿ7 ಶೃಂಗಸಭೆಯಲ್ಲಿ ‘ಒಂದು ಭೂಮಿ, ಒಂದು ಆರೋಗ್ಯ’ ಮಂತ್ರ ಉಚ್ಛರಿಸಿದ ಪ್ರಧಾನಿ ನರೇಂದ್ರ ಮೋದಿ

PM Modi in G7 Summit: ಜರ್ಮನ್​ನ ಚಾನ್ಸೆಲರ್ ಮರ್ಕೆಲ್ ಪ್ರಧಾನಿ ಮೋದಿ ಹೇಳಿದ ‘ಒನ್ ಅರ್ಥ್, ಒನ್ ಹೆಲ್ತ್’ ಪರಿಕಲ್ಪನೆಯನ್ನು ಪ್ರತ್ಯೇಕವಾಗಿ ಉಲ್ಲೇಖಿಸಿ ತಮ್ಮ ಸಂಪೂರ್ಣ ಬೆಂಬಲವನ್ನು ತಿಳಿಸಿದರು.

G7 Summit 2021: ಜಿ7 ಶೃಂಗಸಭೆಯಲ್ಲಿ ‘ಒಂದು ಭೂಮಿ, ಒಂದು ಆರೋಗ್ಯ’ ಮಂತ್ರ ಉಚ್ಛರಿಸಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Jun 12, 2021 | 11:14 PM

Share

ದೆಹಲಿ: ಕೊವಿಡ್-19 ಸಂಕಷ್ಟಕ್ಕೆ ವಿಶ್ವದ ಬಹುತೇಕ ರಾಷ್ಟ್ರಗಳು ಒಳಗಾಗಿರುವ ಈ ಸಂದರ್ಭದಲ್ಲಿ, ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ‘ಒನ್ ಅರ್ಥ್, ಒನ್ ಹೆಲ್ತ್’ ಎಂಬ ಪರಿಕಲ್ಪನೆಯನ್ನು ನೀಡಿದರು. ದಕ್ಷಿಣ ಆಫ್ರಿಕಾ, ದಕ್ಷಿಣ ಕೊರಿಯಾ ಮತ್ತು ಆಸ್ಟ್ರೇಲಿಯಾ ದೇಶಗಳೊಂದಿಗೆ ಭಾರತವೂ ಕೂಡ ಯುನೈಟೆಡ್ ಕಿಂಗ್ಡಮ್​ನಲ್ಲಿ ನಡೆಯುತ್ತಿರುವ ಜಿ7 ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನ ಪಡೆದಿತ್ತು. ಪ್ರಧಾನಿ ಮೋದಿ ಕೂಡ ಈ ಶೃಂಗಸಭೆಯಲ್ಲಿ ವರ್ಚುವಲ್ ವಿಧಾನದ ಮೂಲಕ ಭಾಗವಹಿಸಿದರು.

ಜರ್ಮನ್​ನ ಚಾನ್ಸೆಲರ್ ಮರ್ಕೆಲ್ ಪ್ರಧಾನಿ ಮೋದಿ ಹೇಳಿದ ‘ಒನ್ ಅರ್ಥ್, ಒನ್ ಹೆಲ್ತ್’ ಪರಿಕಲ್ಪನೆಯನ್ನು ಪ್ರತ್ಯೇಕವಾಗಿ ಉಲ್ಲೇಖಿಸಿ ತಮ್ಮ ಸಂಪೂರ್ಣ ಬೆಂಬಲವನ್ನು ತಿಳಿಸಿದರು.

ಶೃಂಗಸಭೆಯಲ್ಲಿ ಭಾರತ, ದಕ್ಷಿಣ ಆಫ್ರಿಕಾ ವಿಶ್ವ ವ್ಯಾಪಾರ ಸಂಸ್ಥೆಗೆ (ಡಬ್ಲ್ಯುಟಿಒ) ಮಾಡಿದ್ದ ಕೊವಿಡ್ ಲಸಿಕೆಯ ಮೇಲಿನ ಕಾಪಿರೈಟ್ ತೆರೆಯುವಿಕೆಯ ಪ್ರಸ್ತಾಪವಾಯಿತು. ಈ ವೇಳೆ, ನರೇಂದ್ರ ಮೋದಿ ಜೊತೆಗಿನ ಮಾತುಕತೆಯನ್ನು ಉಲ್ಲೇಖಿಸಿದ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಕೂಡ ಕೊವಿಡ್-19 ವಿರುದ್ಧದ ಲಸಿಕೆಯ ಮೇಲಿನ ಕಾಪಿರೈಟ್ ತೆರೆಯುವಿಕೆ ವಿಚಾರಕ್ಕೆ ಬೆಂಬಲ ಸೂಚಿಸಿದರು.

ಫ್ರಾನ್ಸ್ ಪ್ರಧಾನಿ ಮಾಕ್ರೊನ್ ಇಮ್ಯಾನುಯೆಲ್ ಕೊವಿಡ್ ಲಸಿಕೆಗೆ ಬೇಕಾದ ಕಚ್ಚಾವಸ್ತುಗಳನ್ನು ಭಾರತದಂತಹ ದೇಶಗಳಿಗೆ ಹೆಚ್ಚು ಕಳಿಸಬೇಕು. ಇದರಿಂದ ಲಸಿಕೆ ಉತ್ಪಾದನೆ ಪ್ರಮಾಣ ಹೆಚ್ಚಲಿದೆ ಎಂದು ತಿಳಿಸಿದರು.

ಇಂಗ್ಲೆಂಡ್ ಆಹ್ವಾನದ ಮೇರೆಗೆ ವರ್ಚುವಲ್ ವಿಧಾನದ ಮೂಲಕ ಭಾಗಿ ಜಿ7 ರಾಷ್ಟ್ರಗಳ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಇಂದು, ನಾಳೆ ನಡೆಯಲಿರುವ ಜಿ7 ರಾಷ್ಟ್ರಗಳ ಸಮಾವೇಶದಲ್ಲಿ ಮೋದಿ ಪಾಲ್ಗೊಂಡಿದ್ದಾರೆ. ಜಿ7 ರಾಷ್ಟ್ರಗಳಿಂದ 2003ರಿಂದ ಭಾರತಕ್ಕೆ ವಿಶೇಷ ಆಹ್ವಾನ ನೀಡಲಾಗುತ್ತಿದೆ. ಶೃಂಗಸಭೆಯಲ್ಲಿ ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ, ಡಾ. ಮನಮೋಹನ್ ಸಿಂಗ್ ಭಾಗಿಯಾಗಿದ್ದರು.

ಇದನ್ನೂ ಓದಿ: Carbis Bay Declaration: ಭವಿಷ್ಯದಲ್ಲಿ ಕಾಡಬಹುದಾದ ಸಾಂಕ್ರಾಮಿಕ ರೋಗಗಳ ವಿರುದ್ಧ ಜಿ7 ನಾಯಕರ ಅಸ್ತ್ರ ಸಿದ್ಧತೆ; ಮಹತ್ವಾಕಾಂಕ್ಷಿ ಘೋಷಣೆಗೆ ಸಹಿ

Cabinet Expansion: ಶೀಘ್ರದಲ್ಲೇ ವಿಸ್ತರಣೆಯಾಗಲಿದೆ ಕೇಂದ್ರ ಸಚಿವ ಸಂಪುಟ; ಪ್ರಧಾನಿ ಮೋದಿ-ಅಮಿತ್​ ಶಾ ಉನ್ನತ ಸಭೆ

Published On - 11:04 pm, Sat, 12 June 21

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ