AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

No Money for Terror: ಭಯೋತ್ಪಾದನೆ ಬೇರು ಸಮೇತ ಕಿತ್ತು ಹಾಕದೆ ವಿರಮಿಸಲ್ಲ; ಪ್ರಧಾನಿ ಮೋದಿ

No Money for Terror; ಭಯೋತ್ಪಾದನೆಗೆ ನೀಡುವ ಹಣಕಾಸು ನೆರವಿಗೆ ತಡೆಯೊಡ್ಡಬೇಕು. ಅವರ ಹಣಕಾಸಿನ ಮೂಲಕ್ಕೆ ಅಡ್ಡಿ ಮಾಡಬೇಕು. ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವವರೆಗೂ ನಾವು ವಿರಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

No Money for Terror: ಭಯೋತ್ಪಾದನೆ ಬೇರು ಸಮೇತ ಕಿತ್ತು ಹಾಕದೆ ವಿರಮಿಸಲ್ಲ; ಪ್ರಧಾನಿ ಮೋದಿ
PM Narendra Modi to Inagurate two day national office bearers meet of BJP in New Delhi Today Image Credit source: ANI
TV9 Web
| Updated By: Ganapathi Sharma|

Updated on:Nov 18, 2022 | 11:17 AM

Share

ನವದೆಹಲಿ: ಭಯೋತ್ಪಾದನೆಯಿಂದಾಗಿ (Terrorism) ನಾವು ಸಾವಿರಾರು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಭಯೋತ್ಪಾದನೆಯು ಇಡೀ ಮಾನವೀಯತೆಯ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ದೆಹಲಿಯ ತಾಜ್ ಪ್ಯಾಲೇಸ್​ ಹೊಟೇಲ್​ನಲ್ಲಿ ನಡೆಯುತ್ತಿರುವ ‘ಭಯೋತ್ಪಾದನೆಗೆ ಹಣಕಾಸು ಬೇಡ’ (NMFT) ಎಂಬ ವಿಷಯಾಧಾರಿತ ಮೂರನೇ ಜಾಗತಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಕೆಲವು ದಶಕಗಳಿಂದ ಭಯೋತ್ಪಾದನೆಯು ಹಲವು ಹೆಸರುಗಳಿಂದ ಜಗತ್ತಿನ ಹಲವೆಡೆ ವ್ಯಾಪಿಸಿದೆ. ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸುತ್ತಿರುವ ದೇಶವೊಂದರ ಜತೆ ಸಂವಹನಕ್ಕೆ ನಿಮಗೆಲ್ಲ ಅವಕಾಶ ದೊರೆತಿದೆ ಎಂದು ಸಮ್ಮೇಳನದಲ್ಲಿ ಭಾಗವಹಿಸಿದ ಪ್ರತಿನಿಧಿಗಳನ್ನು ಉದ್ದೇಶಿಸಿ ಪ್ರಧಾನಿ ಹೇಳಿದರು.

ಭಯೋತ್ಪಾದನೆಗೆ ಹಣಕಾಸು ನೆರವು ಬೇಡ

ಭಯೋತ್ಪಾದನೆಗೆ ಹಣಕಾಸು ನೆರವು ನೀಡುವುದು ಎಲ್ಲ ಕ್ಷೇತ್ರಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಒಬ್ಬ ಭಯೋತ್ಪಾದಕನನ್ನು ಶಸ್ತ್ರಾಸ್ತ್ರಗಳ ಮೂಲಕ ನಾಶಗೊಳಿಸಬಹುದು. ಆದರೆ, ಇದು ಕೇವಲ ತಾತ್ಕಾಲಿಕ ಕ್ರಮವಾಗಬಹುದಷ್ಟೆ. ಇದರಿಂದ ಭಯೋತ್ಪಾದನೆಯ ಸಂಪೂರ್ಣ ನಾಶ ಅಸಾಧ್ಯ. ಭಯೋತ್ಪಾದನೆಗೆ ನೀಡುವ ಹಣಕಾಸು ನೆರವಿಗೆ ತಡೆಯೊಡ್ಡಬೇಕು. ಅವರ ಹಣಕಾಸಿನ ಮೂಲಕ್ಕೆ ಅಡ್ಡಿ ಮಾಡಬೇಕು. ಅವರಿಗೆ ಹಣಕಾಸು ನೆರವು ನೀಡುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮೋದಿ ಕರೆ ನೀಡಿದರು.

ಎಲ್ಲಾ ಭಯೋತ್ಪಾದಕ ದಾಳಿಗಳು ಸಮಾನ ಆಕ್ರೋಶಕ್ಕೆ ಅರ್ಹವಾಗಿವೆ. ಎಲ್ಲಿ ದಾಳಿ ನಡೆದಿದೆ, ಯಾರ ಮೇಲೆ ನಡೆದಿದೆ ಎಂಬುದು ಪ್ರಶ್ನೆಯಲ್ಲ. ಭಯೋತ್ಪಾದಕ ದಾಳಿಗಳ ವಿರುದ್ಧ ಇಡೀ ವಿಶ್ವ ಒಂದಾಗಿ ಹೋರಾಡಬೇಕಿದೆ. ಉಗ್ರರಿಂದ ನಡೆಯುವ ಒಂದೇ ಒಂದು ದಾಳಿಯನ್ನೂ ನಾವು ಹಲವಾರು ಎಂದೇ ಪರಿಗಣಿಸುತ್ತೇವೆ. ಒಂದೇ ಒಂದು ಜೀವ ಕಳೆದು ಹೋದರೂ ಅದರ ಬೆಲೆ ಅಮೂಲ್ಯ. ಹಾಗಾಗಿ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವವರೆಗೂ ನಾವು ವಿರಮಿಸುವುದಿಲ್ಲ ಎಂದು ಮೋದಿ ಹೇಳಿದರು.

ಪಾಕಿಸ್ತಾನದ ವಿರುದ್ಧ ಮೋದಿ ವಾಗ್ದಾಳಿ

ಭಯೋತ್ಪಾದಕ ಸಂಘಟನೆಗಳು ಹಲವಾರು ಮೂಲಗಳಿಂದ ಹಣವನ್ನು ಪಡೆಯುತ್ತವೆ. ಈ ಪೈಕಿ ಪ್ರಮುಖವಾದದ್ದು ಕೆಲವು ದೇಶಗಳ ಬೆಂಬಲ. ಆ ದೇಶಗಳು ತಮ್ಮ ವಿದೇಶಾಂಗ ನೀತಿಯ ಭಾಗವಾಗಿ ಭಯೋತ್ಪಾದನೆಯನ್ನು ಬೆಂಬಲಿಸುತ್ತವೆ. ಭಯೋತ್ಪಾದಕರಿಗೆ ರಾಜಕೀಯ, ಸೈದ್ಧಾಂತಿಕ ಮತ್ತು ಆರ್ಥಿಕ ಬೆಂಬಲವನ್ನು ನೀಡುತ್ತವೆ ಎಂದು ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು. ಉಗ್ರವಾದ ಮತ್ತು ತೀವ್ರವಾದದ ಸಮಸ್ಯೆಯನ್ನು ನಾವು ಜಂಟಿಯಾಗಿ ಆಮೂಲಾಗ್ರವಾಗಿ ಪರಿಹರಿಸಬೇಕಿದೆ. ಭಯೋತ್ಪಾದನೆಯನ್ನು ಬೆಂಬಲಿಸುವವರಿಗೆ ಯಾವ ದೇಶದಲ್ಲಿಯೂ ಜಾಗ ಇರಕೂಡದು ಎಂದು ಅವರು ಹೇಳಿದರು.

‘ಭಯೋತ್ಪಾದನೆಗೆ ಹಣಕಾಸು ಬೇಡ (No Money for Terror)’ ಜಾಗತಿಕ ಸಮ್ಮೇಳನ ಇಂದು (ನವೆಂಬರ್ 18) ಮತ್ತು ನಾಳೆ ನಡೆಯುತ್ತಿದೆ. 75 ದೇಶಗಳ ಪ್ರತಿನಿಧಿಗಳು ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸು ನೆರವು ಸಂಬಂಧಿತ ವಿವಿಧ ವಿಷಯಗಳ ಕುರಿತು ಚರ್ಚಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 am, Fri, 18 November 22

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್