ಝೆಲೆನ್ಸ್ಕಿ ಜತೆ ಮೋದಿ ಮಾತು; ಭಾರತದ ನಿರಂತರ ಮಾನವೀಯ ಸಹಾಯವನ್ನು ಶ್ಲಾಘಿಸಿದ ಉಕ್ರೇನ್ ಅಧ್ಯಕ್ಷ

ಭಾರತ-ಉಕ್ರೇನ್ ಬಾಂಧವ್ಯವನ್ನು ಬಲಪಡಿಸುವ ಕ್ರಮಗಳ ಕುರಿತು ಮೋದಿ ಮತ್ತು ಝೆಲೆನ್ಸ್ಕಿ ಚರ್ಚಿಸಿದರು. ಪ್ರಧಾನಿ ಮೋದಿಯವರು ಭಾರತದ ಜನಕೇಂದ್ರಿತ ವಿಧಾನವನ್ನು ಪುನರುಚ್ಚರಿಸಿದರು ಮತ್ತು ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಕರೆ ನೀಡಿದರು” ಎಂದು ಸರ್ಕಾರ ಹೇಳಿದೆ.

ಝೆಲೆನ್ಸ್ಕಿ ಜತೆ ಮೋದಿ ಮಾತು; ಭಾರತದ ನಿರಂತರ ಮಾನವೀಯ ಸಹಾಯವನ್ನು ಶ್ಲಾಘಿಸಿದ ಉಕ್ರೇನ್ ಅಧ್ಯಕ್ಷ
ಮೋದಿ -ಝೆಲೆನ್ಸ್ಕಿ (ಸಂಗ್ರಹ ಚಿತ್ರ)
Follow us
|

Updated on:Mar 20, 2024 | 8:22 PM

ದೆಹಲಿ ಮಾರ್ಚ್ 20: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುಧವಾರ ರಷ್ಯಾದ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಗಂಟೆಗಳ ನಂತರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelenskyy) ಅವರೊಂದಿಗೆ ಮಾತನಾಡಿದ್ದಾರೆ. ಝೆಲೆನ್ಸ್ಕಿಮತ್ತು ಮೋದಿ ವಿವಿಧ ಕ್ಷೇತ್ರಗಳಲ್ಲಿ ಭಾರತ-ಉಕ್ರೇನ್ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ನಡೆಯುತ್ತಿರುವ ರಷ್ಯಾ-ಉಕ್ರೇನ್ ಸಂಘರ್ಷದ ಕುರಿತು ಚರ್ಚಿಸುತ್ತಿರುವಾಗ, ಪ್ರಧಾನಮಂತ್ರಿಯವರು ಭಾರತದ ಜನಕೇಂದ್ರಿತ ವಿಧಾನವನ್ನು ಪುನರುಚ್ಚರಿಸಿದ್ದು, ಮುಂದಿನ ಮಾರ್ಗವಾಗಿ ಮಾತುಕತೆ ಮತ್ತು ರಾಜತಾಂತ್ರಿಕ ರೀತಿಗೆ ಕರೆ ನೀಡಿದರು.

ಉಭಯ ರಾಷ್ಟ್ರಗಳ ನಡುವಿನ ಎಲ್ಲಾ ಸಮಸ್ಯೆಗಳ ಆರಂಭಿಕ ಮತ್ತು ಶಾಂತಿಯುತ ಪರಿಹಾರಕ್ಕಾಗಿ ಭಾರತವು ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸುತ್ತದೆ. ಶಾಂತಿಯುತ ಪರಿಹಾರವನ್ನು ಬೆಂಬಲಿಸಲು ಭಾರತವು ತನ್ನ ವಿಧಾನದಲ್ಲಿ ಎಲ್ಲವನ್ನೂ ಮಾಡುವುದನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಅಧ್ಯಕ್ಷ ಝೆಲೆನ್ಸ್ಕಿ ಅವರು ಉಕ್ರೇನ್ ಜನರಿಗೆ ಭಾರತದ ನಿರಂತರ ಮಾನವೀಯ ಸಹಾಯವನ್ನು ಶ್ಲಾಘಿಸಿದ್ದು, ಉಭಯ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು. ಝೆಲೆನ್ಸ್ಕಿ ಅವರೊಂದಿಗಿನ ಮಾತುಕತೆ ವೇಳೆ ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ‘ಸಂವಾದ ಮತ್ತು ರಾಜತಾಂತ್ರಿಕತೆ’ಗೆ ಪ್ರಧಾನಿ ಮೋದಿ ಕರೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಗಂಟೆಗಳ ನಂತರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದಾರೆ.

“ಭಾರತ-ಉಕ್ರೇನ್ ಪಾಲುದಾರಿಕೆಯನ್ನು ಬಲಪಡಿಸುವ ಕುರಿತು ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಉತ್ತಮ ಸಂವಾದ ನಡೆಸಿದೆ. ಶಾಂತಿಗಾಗಿ ಎಲ್ಲಾ ಪ್ರಯತ್ನಗಳಿಗೆ ಮತ್ತು ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯವನ್ನು ತರಲು ಭಾರತದ ನಿರಂತರ ಬೆಂಬಲವನ್ನು ತಿಳಿಸಿರುವೆ. ಭಾರತವು ನಮ್ಮ ಜನಕೇಂದ್ರಿತ ವಿಧಾನದಿಂದ ಮಾರ್ಗದರ್ಶಿಸಲ್ಪಟ್ಟ ಮಾನವೀಯ ನೆರವು ನೀಡುವುದನ್ನು ಮುಂದುವರಿಸುತ್ತದೆ.ಎಂದು ಪ್ರಧಾನ ಮಂತ್ರಿ ಸಾಮಾಜಿಕ ವೇದಿಕೆ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೋದಿ ಟ್ವೀಟ್

“ಭಾರತ-ಉಕ್ರೇನ್ ಬಾಂಧವ್ಯವನ್ನು ಬಲಪಡಿಸುವ ಕ್ರಮಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಿದರು. ಪ್ರಧಾನಿ ಮೋದಿಯವರು ಭಾರತದ ಜನಕೇಂದ್ರಿತ ವಿಧಾನವನ್ನು ಪುನರುಚ್ಚರಿಸಿದರು ಮತ್ತು ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಕರೆ ನೀಡಿದರು” ಎಂದು ಸರ್ಕಾರ ಹೇಳಿದೆ.

ಪುಟಿನ್ ಅವರನ್ನು ಅಭಿನಂದಿಸಿದ ಮೋದಿ

ಪಿಎಂ ಮೋದಿ ಅವರು ಪುಟಿನ್ ಅವರಿಗೆ ಫೋನ್ ಕರೆ ಮಾಡಿ ರಷ್ಯಾದ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಕ್ಕೆ ಅಭಿನಂದನೆ ತಿಳಿಸಿದ್ದಾರೆ.

“ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತನಾಡಿದ್ದು  ರಷ್ಯಾದ ಒಕ್ಕೂಟದ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದೇನೆ. ಮುಂದಿನ ವರ್ಷಗಳಲ್ಲಿ ಭಾರತ-ರಷ್ಯಾ ವಿಶೇಷ ಮತ್ತು ವಿಶೇಷ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಗಟ್ಟಿಗೊಳಿಸ ಮತ್ತು ವಿಸ್ತರಿಸಲು ನಾವು ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದೇವೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶಾಂತಿಬಯಸುವ ಭಾರತದ ಪಾತ್ರವನ್ನು ಒತ್ತಿಹೇಳುತ್ತಾ, ಇಬ್ಬರೂ ನಾಯಕರು ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಭಾರತದ ಪಾಲ್ಗೊಳ್ಳುವಿಕೆಗೆ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ಭಾರತದ ಮುಂಬರುವ ಲೋಕಸಭಾ ಚುನಾವಣೆಯ ನಂತರ ತಮ್ಮ ದೇಶಗಳಿಗೆ ಭೇಟಿ ನೀಡುವಂತೆ ಅವರು ಪ್ರಧಾನಿ ಮೋದಿಯವರಿಗೆ ಆಹ್ವಾನ ನೀಡಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ‘ಶಕ್ತಿ’ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ರಷ್ಯಾ ಚುನಾವಣೆಯಲ್ಲಿ ಪುಟಿನ್ ಭರ್ಜರಿ ಗೆಲುವು ದಾಖಲಿಸಿದ್ದು, ಈಗಾಗಲೇ ಅಧಿಕಾರದ ಮೇಲೆ ಬಿಗಿ ಹಿಡಿತ ಸಾಧಿಸಿದ್ದಾರೆ. ಚುನಾವಣೆಯಲ್ಲಿ   ಸ್ಪರ್ಧಿಸಿದ ಇತರ ಮೂವರು ಅಭ್ಯರ್ಥಿಗಳು  ಕ್ರಮವಾಗಿ- 4.31, 3.85 ಮತ್ತು 3.20 ರಷ್ಟು ಮತಗಳನ್ನು ಗೆದ್ದಿದ್ದಾರೆ.

ನಮ್ಮ ಮುಂದೆ ಹಲವು ಕಾರ್ಯಗಳಿವೆ. ಆದರೆ ನಾವು ಒಗ್ಗಟ್ಟಾಗಿದ್ದಾಗ  ಯಾರು ನಮ್ಮನ್ನು ಬೆದರಿಸಲು ಬಯಸಿದರೂ, ನಮ್ಮನ್ನು ನಿಗ್ರಹಿಸಲು ಬಯಸಿದರೂ ಯಾರೂ ಇತಿಹಾಸದಲ್ಲಿ ಯಶಸ್ವಿಯಾಗಲಿಲ್ಲ. ಅವರ ಯಶಸ್ವಿಯಾಗಲಿಲ್ಲ ಮತ್ತು ಭವಿಷ್ಯದಲ್ಲಿ ಅವರು ಎಂದಿಗೂ ಯಶಸ್ವಿಯಾಗುವುದಿಲ್ಲ ಮಾಸ್ಕೋದಲ್ಲಿ ತಮ್ಮ ಬೆಂಬಲಿಗರನ್ನುದ್ದೇಶಿ ಮಾತನಾಡಿದ ಪುಟಿನ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:15 pm, Wed, 20 March 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು