AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ವಾರಾಣಸಿಯ ಬೀದಿಯಲ್ಲಿ ಕಾರು ನಿಲ್ಲಿಸಿ, ಜನರಿಂದ ಉಡುಗೊರೆ ಸ್ವೀಕರಿಸಿದ ಪ್ರಧಾನಿ ಮೋದಿ

Narendra Modi in Varanasi: ನರೇಂದ್ರ ಮೋದಿಯವರ ಅಭಿಮಾನಿಯೊಬ್ಬರು ವಾರಾಣಸಿಯ ಬೀದಿಯಲ್ಲಿ ಮೋದಿಯ ಕಾರು ಸಾಗುತ್ತಿದ್ದಾಗ ಪ್ರಧಾನಿ ಮೋದಿಗೆ ಕಡುಗೆಂಪು ಬಣ್ಣದ ಪಗ್ಡಿ ಮತ್ತು ಕೇಸರಿ ಸ್ಕಾರ್ಫ್ ನೀಡಲು ಪ್ರಯತ್ನಿಸಿದರು. ಅದಕ್ಕೆ ಭದ್ರತಾ ಸಿಬ್ಬಂದಿ ಬಿಡಲಿಲ್ಲ. ನಂತರ ಮೋದಿಯವರೇ ಖುದ್ದಾಗಿ ಆ ಉಡುಗೊರೆಗಳನ್ನು ಸ್ವೀಕರಿಸಿದರು.

Narendra Modi: ವಾರಾಣಸಿಯ ಬೀದಿಯಲ್ಲಿ ಕಾರು ನಿಲ್ಲಿಸಿ, ಜನರಿಂದ ಉಡುಗೊರೆ ಸ್ವೀಕರಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Dec 13, 2021 | 3:40 PM

Share

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ವಾರಾಣಸಿಗೆ ಆಗಮಿಸಿ, ಕಾಶಿ ವಿಶ್ವನಾಥ ಕಾರಿಡಾರ್ (Kashi Vishwanath Corridor project) ಉದ್ಘಾಟನೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ತೆರಳಲು ವಾರಾಣಸಿಯ (Varanasi) ಬೀದಿಯಲ್ಲಿ ಬಿಗಿ ಭದ್ರತೆಯೊಂದಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ನಿಲ್ಲಿಸಿ, ಅಲ್ಲಿನ ಜನರಿಂದ ಪಗ್ಡಿ ಮತ್ತು ಸ್ಕಾರ್ಫ್ ಸ್ವೀಕರಿಸಿದ್ದಾರೆ. ಸಣ್ಣದಾದ ರಸ್ತೆಯಲ್ಲಿ ನರೇಂದ್ರ ಮೋದಿಯವರ (Narendra Modi) ಕಾರು ಸಾಗುತ್ತಿತ್ತು. ಆಗ ಅಕ್ಕಪಕ್ಕದ ಮನೆ, ಅಂಗಡಿಗಳಲ್ಲಿ ಕಿಕ್ಕಿರಿದು ಸೇರಿದ್ದ ಜನರು ಮೋದಿಜೀ ಮೋದಿಜೀ ಎಂದು ಜೈಕಾರ ಹಾಕುತ್ತಿದ್ದರು. ಅಷ್ಟರಲ್ಲಿ ಕೆಲವರು ರಸ್ತೆಗೆ ಓಡಿಬಂದು ಪ್ರಧಾನಿ ಮೋದಿ ಕುಳಿತಿದ್ದ ಕಾರಿನ ಕಿಟಕಿಯ ಬಳಿ ಬಂದು ಸ್ಕಾರ್ಫ್​ ಹಾಗೂ ವಾರಾಣಸಿಯ ಸಾಂಪ್ರದಾಯಿಕ ಪಗ್ಡಿಯನ್ನು ನೀಡಲು ಪ್ರಯತ್ನಿಸಿದರು. ಆದರೆ, ಅವರನ್ನು ಪ್ರಧಾನಿ ಮೋದಿಯವರ ಭದ್ರತಾ ಸಿಬ್ಬಂದಿ ತಡೆದರು. ಬಳಿಕ ಮೋದಿಯವರೇ ಕಾರಿನ ಬಾಗಿಲನ್ನು ತೆರೆಯಲು ಸೂಚಿಸಿ, ಅಲ್ಲಿನ ಜನರು ನೀಡಿದ ಉಡುಗೊರೆಯನ್ನು ತೆಗೆದುಕೊಂಡರು.

ಕಾರು ಸಾಗುತ್ತಿದ್ದ ಬೀದಿಗೆ ಹೂವಿನ ಪಕಳೆಗಳನ್ನು ಹಾಕುತ್ತಾ ಜನರು ನರೇಂದ್ರ ಮೋದಿಯವರನ್ನು ಸ್ವಾಗತಿಸುವುದನ್ನು ವಿಡಿಯೋದಲ್ಲಿ ನೋಡಬಹುದು. ನರೇಂದ್ರ ಮೋದಿಯವರ ಅಭಿಮಾನಿಯೊಬ್ಬರು ಪ್ರಧಾನಿ ಮೋದಿಗೆ ಕಡುಗೆಂಪು ಬಣ್ಣದ ಪಗ್ಡಿ ಮತ್ತು ಕೇಸರಿ ಸ್ಕಾರ್ಫ್ ನೀಡಲು ಪ್ರಯತ್ನಿಸಿದರು. ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ಹಿಂದಕ್ಕೆ ತಳ್ಳಿದಾಗ, ಪ್ರಧಾನಿ ಮೋದಿಯವರೇ ಕಾರು ನಿಲ್ಲಿಸಿ ಆತ ಕೊಟ್ಟ ಉಡುಗೊರೆಗಳನ್ನು ಕೊಡುವಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಿದರು. ಆಗ ಆ ವ್ಯಕ್ತಿ ಪ್ರಧಾನಿ ಮೋದಿಯವರ ತಲೆಗೆ ಪಗ್ಡಿಯನ್ನು ಹಾಕಿ, ಅವರ ಹೆಗಲ ಮೇಲೆ ಸ್ಕಾರ್ಫ್​ ಹಾಕುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋ ನೋಡಿದ ನೆಟ್ಟಿಗರು ಖುಷಿಯಾಗಿದ್ದಾರೆ. ಜನಸಾಮಾನ್ಯರೊಂದಿಗೆ ಸಾಮಾನ್ಯ ವ್ಯಕ್ತಿಯಂತೆ ನಡೆದುಕೊಳ್ಳುವ ಪ್ರಧಾನಮಂತ್ರಿ ನರೇಂದ್ರ ಮೋದಿ ನಿಜಕ್ಕೂ ಆದರ್ಶ ವ್ಯಕ್ತಿತ್ವ ಉಳ್ಳವರು ಎಂದಿದ್ದಾರೆ.

ಕಾಶಿ ವಿಶ್ವನಾಥ ದೇವಾಲಯವನ್ನು ಗಂಗಾ ಘಾಟ್‌ಗಳೊಂದಿಗೆ ಸಂಪರ್ಕಿಸಲು ಮೆಗಾ ಕಾರಿಡಾರ್ ಅನ್ನು ಪ್ರಾರಂಭಿಸುವ ಮೊದಲು ಪ್ರಧಾನಿ ಮೋದಿ ಇಂದು ಬೆಳಿಗ್ಗೆ ಉತ್ತರ ಪ್ರದೇಶದ ತಮ್ಮ ಕ್ಷೇತ್ರವಾದ ವಾರಾಣಸಿಯ ಕಾಲ ಭೈರವ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಕಾಶಿ ವಿಶ್ವನಾಥ ಧಾಮವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ ಡಬಲ್ ಡೆಕ್ಕರ್ ದೋಣಿಯಲ್ಲಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಪ್ರಯಾಣಿಸಿದರು. ಈ ಯೋಜನೆಗೆ ಸುಮಾರು 339 ಕೋಟಿ ರೂ. ವೆಚ್ಚವಾಗಿದೆ.

ಇದನ್ನೂ ಓದಿ: Kashi Vishwanath corridor ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Video: ವಾರಾಣಸಿಯ ಕಾಲ ಭೈರವ ಮಂದಿರದಲ್ಲಿ ಆರತಿ ಸಲ್ಲಿಸಿ, ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ

Published On - 3:35 pm, Mon, 13 December 21

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ