AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ದೆಹಲಿ ವಿಶ್ವವಿದ್ಯಾಲಯಕ್ಕೆ ಮೆಟ್ರೋ ಮೂಲಕ ತೆರಳಿದ ಪ್ರಧಾನಿ ನರೇಂದ್ರ ಮೋದಿ

ದೆಹಲಿ ಜನತೆಗೆ ಮುಂಜಾನೆಯೇ ಪ್ರಧಾನಿ ಮೋದಿ ಸರ್ಪ್ರೈಸ್ ನೀಡಿದ್ದಾರೆ. ಮೋದಿಯನ್ನು ದೆಹಲಿಯ ಮೆಟ್ರೋ(Metro)ದಲ್ಲಿ ಕಂಡು ಜನರು ಆಶ್ಚರ್ಯ ವ್ಯಕ್ತಪಡಿಸಿದರು.

ನಯನಾ ರಾಜೀವ್
|

Updated on:Jun 30, 2023 | 12:00 PM

Share

ದೆಹಲಿ ಜನತೆಗೆ ಮುಂಜಾನೆಯೇ ಪ್ರಧಾನಿ ನರೇಂದ್ರ ಮೋದಿ(Narendra Modi) ಸರ್ಪ್ರೈಸ್ ನೀಡಿದ್ದಾರೆ. ಮೋದಿಯನ್ನು ದೆಹಲಿಯ ಮೆಟ್ರೋ(Metro)ದಲ್ಲಿ ಕಂಡು ಜನರು ಆಶ್ಚರ್ಯ ವ್ಯಕ್ತಪಡಿಸಿದರು. ದೆಹಲಿಯ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಲೋಕ ಕಲ್ಯಾಣ ಮಾರ್ಗದಲ್ಲಿ ಪ್ರಧಾನಿ ಮೋದಿ ಕೌಂಟರ್​ನಲ್ಲಿ ಟಿಕೆಟ್ ಟೋಕನ್ ಪಡೆದು ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಪ್ರಧಾನಿ ಮೆಟ್ರೋದಲ್ಲಿ ಪ್ರಯಾಣದಿಂದ ಸಹ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ದೆಹಲಿ ವಿಶ್ವವಿದ್ಯಾಲಯವು 100 ವರ್ಷಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೆಹಲಿ ವಿಶ್ವವಿದ್ಯಾಲಯವನ್ನು ಬ್ರಿಟಿಷರ ಆಳ್ವಿಕೆಯ ಸಂದರ್ಭದಲ್ಲಿ ಮೇ1 1922 ರಲ್ಲಿ ಸ್ಥಾಪಿಸಲಾಯಿತು.

ಪ್ರಧಾನಿ ಮೋದಿ ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಪಡೆದಿದ್ದಾರೆ. 1978 ರಲ್ಲಿ, PM DU ನಿಂದ BA ಮಾಡಿದರು. ದೆಹಲಿ ಮೆಟ್ರೋದಲ್ಲಿ ಸಾಮಾನ್ಯರಂತೆ ಕುಳಿತು ಪ್ರಧಾನಿ ಮೋದಿ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ವಿಶ್ವವಿದ್ಯಾಲಯದವರೆಗೆ ಹಳದಿ ಮಾರ್ಗದ ಮೆಟ್ರೋದಲ್ಲಿ ಪ್ರಯಾಣಿಸಿದರು, ಎಎಫ್​ಸಿ ಗೇಟ್​ನಿಂದ ಟೋಕನ್ ಮೂಲಕ ನಿಲ್ದಾಣ ಪ್ರವೇಶಿಸಿದ್ದರು.

ಮತ್ತಷ್ಟು ಓದಿ: Video Viral: ದೆಹಲಿ ಮೆಟ್ರೋವನ್ನು ರಣರಂಗ ಮಾಡಿಕೊಂಡ ಇಬ್ಬರು ವ್ಯಕ್ತಿಗಳು, ಇವರ ಗುದ್ದಾಟಕ್ಕೆ ಇತರ ಪ್ರಯಾಣಿಕರು ಹೈರಾಣ

ಆರಂಭದಲ್ಲಿ ಪ್ರಧಾನಿ ಮೋದಿ ಅವರ ಸುತ್ತ ಯಾರೂ ಇರಲಿಲ್ಲ. ಆದಾಗ್ಯೂ, ಕ್ರಮೇಣ ಪ್ರಧಾನಿ ಮೋದಿ ವಿದ್ಯಾರ್ಥಿಗಳು ಸುತ್ತುವರೆದರು. ಈ ವೇಳೆ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಿದರು. ಪ್ರಧಾನಿ ಮೋದಿ ಅವರು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ, ಪಿಎಂ ಮೋದಿ ಅವರು ಕಂಪ್ಯೂಟರ್ ಸೆಂಟರ್ ಮತ್ತು ಫ್ಯಾಕಲ್ಟಿ ಆಫ್ ಟೆಕ್ನಾಲಜಿಯಲ್ಲಿನ ಅಕಾಡೆಮಿಕ್ ಬ್ಲಾಕ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ದೆಹಲಿ ವಿಶ್ವವಿದ್ಯಾಲಯವನ್ನು 1 ಮೇ 1922 ರಂದು ಸ್ಥಾಪಿಸಲಾಯಿತು. ದೆಹಲಿ ವಿಶ್ವವಿದ್ಯಾಲಯವು 46 ವಿಭಾಗಗಳು, 90 ಕಾಲೇಜುಗಳು ಮತ್ತು 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ. ಪ್ರಧಾನಮಂತ್ರಿ ಅವರನ್ನು ಸ್ವಾಗತಿಸಲು ಕ್ರೀಡಾ ಆವರಣವನ್ನು ಸಿದ್ಧಪಡಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:54 am, Fri, 30 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ