AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ರಾಷ್ಟ್ರ: ಡಿಕೆ ಸುರೇಶ್​ ಹೇಳಿಕೆ ಪ್ರಸ್ತಾಪಿಸಿ ಹಿಗ್ಗಾಮುಗ್ಗಾ ಜಾಡಿಸಿದ ಮೋದಿ!

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ ಲೋಕಸಭೆಯ ಕೊನೆಯ ಭಾಷಣದಲ್ಲಿ ಪ್ರಸ್ತಾಪಿಸಿ ಟಾಂಗ್ ಕೊಟ್ಟಿದ್ದಾರೆ. ದೇಶವನ್ನು ಇನ್ನೆಷ್ಟು ತುಂಡು ಮಾಡಬೇಕು ಅಂದುಕೊಂಡಿದ್ದೀರಿ. ಇಷ್ಟು ಒಡೆದಿರುವುದು ಸಾಕಾಗಿಲ್ಲವೇ, ಇನ್ನೆಷ್ಟು ಭಾಗಬೇಕು ಎಂದು ಕಿಡಿಕಾರಿದ್ದಾರೆ.

ಪ್ರತ್ಯೇಕ ರಾಷ್ಟ್ರ: ಡಿಕೆ ಸುರೇಶ್​ ಹೇಳಿಕೆ ಪ್ರಸ್ತಾಪಿಸಿ ಹಿಗ್ಗಾಮುಗ್ಗಾ ಜಾಡಿಸಿದ ಮೋದಿ!
ನರೇಂದ್ರ ಮೋದಿ, ಡಿಕೆ ಸುರೇಶ್
ರಮೇಶ್ ಬಿ. ಜವಳಗೇರಾ
|

Updated on:Feb 05, 2024 | 7:50 PM

Share

ನವದೆಹಲಿ, (ಫೆಬ್ರವರಿ 05): ಪ್ರತ್ಯೇಕ ರಾಷ್ಟ್ರದ ಬೇಡಿಕೆ ಕುರಿತು ಡಿಕೆ ಹೇಳಿಕೆಯನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ ಕರ್ನಾಟಕದಲ್ಲಿ ಪ್ರತಿಭಟನೆ ಮಾಡಿದ್ದು, ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಕಾಂಗ್ರೆಸ್​ ವಿರುದ್ಧ ಬಿಜೆಪಿ ನಾಯಕರು ಹರಿಹಾಯುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಹ ಇಂದು (ಸೋಮವಾರ) ಈ ಬಾರಿ ಲೋಕಸಭೆಯ ಕೊನೆಯ ಭಾಷಣದಲ್ಲಿ ಸಂಸದ ಡಿಕೆ ಸುರೇಶ್(DK Suresh)​ ಪ್ರತ್ಯೇಕ ರಾಷ್ಟ್ರ ಹೇಳಿಕೆಯನ್ನು ಪ್ರಸ್ತಾಪಿಸಿ, ಬಹಿರಂಗವಾಗಿ ದೇಶ ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಒಗ್ಗೂಡಿಸುವುದು ಇರಲಿ. ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಮೋದಿ, ಇನ್ನೂ ಭಾರತ ದೇಶವನ್ನು ಎಷ್ಟು ತುಂಡು ಗಳನ್ನಾಗಿ ಮಾಡುತ್ತಿರಾ? ಇಷ್ಟು ಒಡೆದಿರುವುದು ಸಾಕಾಗಿಲ್ವಾ. ದೇಶವನ್ನು ಇನ್ನೆಷ್ಟು ತುಂಡು ಮಾಡಬೇಕು ಅಂದುಕೊಂಡಿದ್ದೀರಿ. ಕಾಂಗ್ರೆಸ್​​ನವರು ಎಂದೂ ಕೂಡ ದೇಶವನ್ನು ಜೋಡಿಸಿಲ್ಲ. ಜವಾಹರಲಾಲ್ ನೆಹರು ತಪ್ಪಿನಿಂದ ಕಾಶ್ಮೀರ ಸಮಸ್ಯೆ ಸೃಷ್ಟಿಯಾಯಿತು. ನೆಹರು ಹೊರಟು ಹೋದ್ರು, ಆದ್ರೆ ದೇಶ ನೋವು ಅನುಭವಿಸುತ್ತಿದೆ. ಇಂದು ನಾವು ಜಮ್ಮು-ಕಾಶ್ಮೀರ ಅಭಿವೃದ್ಧಿ ಮಾಡಿದ್ದೇವೆ ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: PM Modi on President’s speech: ನೆಹರು ಯಾವತ್ತೂ ಜನರ ಸಾಮರ್ಥ್ಯವನ್ನು ನಂಬಲಿಲ್ಲ: ಮೋದಿ

ಇನ್ನು ಸಂಸದ ಡಿ.ಕೆ.ಸುರೇಶ್ ಇತ್ತೀಚೆಗೆ ಬಜೆಟ್ ಕುರಿತು ಟೀಕಿಸುತ್ತಾ ಆಡಿದ ಪ್ರತ್ಯೇಕ ರಾಷ್ಟ್ರದ ಮಾತು ಕಾಂಗ್ರೆಸ್ ಬಿಜೆಪಿ ಮಧ್ಯೆ ಮತ್ತೊಂದು ಜಟಾಪಟಿಗೆ ಕಾರಣವಾಗಿದೆ. ಪ್ರತ್ಯೇಕ ರಾಷ್ಟ್ರದ ಬೇಡಿಕೆ ಕುರಿತು ಡಿಕೆ ಸುರೇಶ್​ ಹೇಳಿಕೆಯನ್ನೇ ಅಸ್ತ್ರ ಮಾಡಿಕೊಂಡು ಕರ್ನಾಟಕ ಬಿಜೆಪಿ ನಾಯಕರು ಹೋದಲ್ಲಿ ಬಂದಲ್ಲಿ ಖಂಡಿಸುತ್ತಿದ್ದಾರೆ. ಅಲ್ಲದೇ ಡಿಕೆ ಸುರೇಶ್ ಅವರ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದರು.

ರಾಜ್ಯಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯವಾಗುತ್ತಿದೆ. ದಕ್ಷಿಣದ ರಾಜ್ಯಗಳಿಗೆ ತಾರತಮ್ಯ ಆಗುತ್ತಿದೆ ಎಂದು ಡಿಕೆ ಸುರೇಶ್ ಹೇಳಿದ್ದರು. ಅದನ್ನೇ ಇಟ್ಟುಕೊಂಡು ಇದೀಗ ರಾಜ್ಯ ಕಾಂಗ್ರೆಸ್ ನಾಯಕರು ಇದೇ ಫೆಬ್ರವರಿ 97ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:25 pm, Mon, 5 February 24

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!