AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Chennai Visit: ತಮಿಳುನಾಡಿನಲ್ಲಿ ಎಐಎಡಿಎಂಕೆ ಬಣ ರಾಜಕೀಯ; ನರೇಂದ್ರ ಮೋದಿ ಚೆನ್ನೈ ಭೇಟಿ ಹಿಂದಿದೆ ಹಲವು ರಾಜಕೀಯ ಲೆಕ್ಕಾಚಾರ

42nd Convocation of Anna University: ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದಾರೆ.

PM Modi Chennai Visit: ತಮಿಳುನಾಡಿನಲ್ಲಿ ಎಐಎಡಿಎಂಕೆ ಬಣ ರಾಜಕೀಯ; ನರೇಂದ್ರ ಮೋದಿ ಚೆನ್ನೈ ಭೇಟಿ ಹಿಂದಿದೆ ಹಲವು ರಾಜಕೀಯ ಲೆಕ್ಕಾಚಾರ
ಚೆನ್ನೈನಲ್ಲಿ ಚೆಸ್ ಒಲಿಂಪಿಯಾಡ್ ಉದ್ಘಾಟಿಸಿದ ನರೇಂದ್ರ ಮೋದಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jul 29, 2022 | 7:40 AM

Share

ಚೆನ್ನೈ: ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾಲಯದ 42ನೇ ಘಟಿಕೋತ್ಸವ (Anna University Convocation) ಚೆನ್ನೈನಲ್ಲಿ ಶುಕ್ರವಾರ (ಜುಲೈ 29) ನಡೆಯಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) 69 ಸಾಧಕ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಮತ್ತು ಪ್ರಮಾಣಪತ್ರ ನೀಡಲಿದ್ದಾರೆ. ಪ್ರಧಾನಿ ತಮಿಳುನಾಡು ಭೇಟಿಯ ಬಗ್ಗೆ ರಾಷ್ಟ್ರ ರಾಜಕೀಯ ವಲಯದಲ್ಲಿ ಕುತೂಹಲ ವ್ಯಕ್ತವಾಗಿದೆ.

ಚೆನ್ನೈ ಭೇಟಿಯ ವೇಳೆ ನರೇಂದ್ರ ಮೋದಿ ಅವರು ಎಐಎಡಿಎಂಕೆಯ ಎರಡು ಪ್ರತ್ಯೇಕ ಬಣಗಳ ನಾಯಕರಾದ ಒ.ಪನ್ನೀರ್​ಸೆಲ್ವಂ ಮತ್ತ ಇ.ಪಳನಿಸ್ವಾಮಿ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಇಬ್ಬರೂ ನಾಯಕರು ಇತ್ತೀಚೆಗಷ್ಟೇ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಯತ್ನಿಸಿದ್ದರು. ಆದರೆ ಬಿಜೆಪಿ ಈ ಭೇಟಿಗೆ ಅವಕಾಶ ನೀಡಿರಲಿಲ್ಲ.

ಒಪಿಎಸ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯ ಅವಕಾಶ ಸಿಕ್ಕಿತ್ತು. ರಾಷ್ಟ್ರಪತಿ ಚುನಾವಣೆ ಸಂದರ್ಭ ತಮ್ಮ ಬೆಂಬಲ ಘೋಷಿಸಿ, ಶಿಷ್ಟಾಚಾರದ ಸೌಹಾರ್ದ ಮಾತುಗಳನ್ನು ಆಡಿ ರಾಜ್ಯಕ್ಕೆ ಹಿಂದಿರುಗಿದ್ದರು. ಇಪಿಎಸ್​ಗೆ ಚೆನ್ನೈಗೆ ಹಿಂದುರಿಗಿದ ವೇಳೆ ಅವರ ಬಗ್ಗೆ ವ್ಯಂಗ್ಯವಾಡಿದ್ದ ಒಪಿಎಸ್ ಬಣ, ‘ಬಿಜೆಪಿಯ ಬೆಂಬಲ ಇಪಿಎಸ್​ಗೆ ಇಲ್ಲ’ ಎಂದು ಹೇಳಿಕೊಂಡಿತ್ತು.

ಎರಡು ಬಣಗಳ ಪೈಕಿ ಯಾವ ಬಣ ನಿಜವಾದ ಎಐಡಿಎಂಕೆ ಎನ್ನಿಸಿಕೊಳ್ಳುತ್ತದೆ ಎನ್ನುವುದನ್ನು ನಿರೂಪಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿಯ ಬೆಂಬಲ ನಿರ್ಣಾಯಕಪಾತ್ರ ವಹಿಸುತ್ತದೆ ಎಂಬ ಅರಿವು ಅವರಿಬ್ಬರಿಗೂ ಇದೆ. ಹೀಗಾಗಿಯೇ ತಮಿಳುನಾಡು ಭೇಟಿಯ ವೇಳೆ ಮೋದಿ ಉರುಳಿಸುವ ದಾಳದ ಬಗ್ಗೆ ಕುತೂಹಲ ವ್ಯಕ್ತವಾಗಿದೆ.

ತಮಿಳುನಾಡಿನ ಬಣ ರಾಜಕೀಯದಲ್ಲಿ ಮೋದಿ ಅವರು ಯಾರೊಬ್ಬರ ಪರ ವಹಿಸುವ ಸಾಧ್ಯತೆ ಕಡಿಮೆ ಎಂದೇ ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಎಐಎಡಿಎಂಕೆಯಲ್ಲಿ ಬಿರುಕು ಹೆಚ್ಚಾಗಿ ಅದು ದುರ್ಬಲವಾದಷ್ಟೂ ಡಿಎಂಕೆ ವಿರೋಧಿ ಮತಗಳು ಬಿಜೆಪಿಯತ್ತ ಒಲಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಎಐಡಿಎಂಕೆಯ ಎರಡೂ ಬಣಗಳಿಂದ ಸಮಾನ ಅಂತರ ಕಾಪಾಡಿಕೊಂಡು, ತಮಿಳುನಾಡಿನ ದೊಡ್ಡ ಪ್ರತಿಪಕ್ಷವಾಗಿ ಹೊರಹೊಮ್ಮಲು ಬಿಜೆಪಿ ಯತ್ನಿಸಬಹುದು ಎಂದು ಹೇಳಲಾಗುತ್ತಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!