AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಪ್ರಧಾನಿ ಮೋದಿ

ಈ ವರ್ಷ ನಡೆದ ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವ 2021, ಡಿಸೆಂಬರ್ 23, 2020ಇಂದ ಆರಂಭವಾಗಿದ್ದು, ಜನವರಿ 12ಕ್ಕೆ ಪೂರ್ಣಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ 23 ಲಕ್ಷಕ್ಕೂ ಹೆಚ್ಚು ಯುವಕರು ಭಾಗಿಯಾಗಿದ್ದರು.

ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ಮೋದಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 9:30 PM

Share

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನವರಿ 12 ರಂದು ಬೆಳಿಗ್ಗೆ 10:30ಕ್ಕೆ ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಇದೇ ವೇಳೆ ಉತ್ಸವದ ಮೂವರು ವಿಜೇತರು ಪ್ರಧಾನಿ ಮೋದಿ ಎದುರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಿದ್ದಾರೆ.

ಈ ವರ್ಷ ನಡೆದ ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವ 2021, ಡಿಸೆಂಬರ್ 23, 2020ಇಂದ ಆರಂಭವಾಗಿದ್ದು, ಜನವರಿ 12ಕ್ಕೆ ಪೂರ್ಣಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ 23 ಲಕ್ಷಕ್ಕೂ ಹೆಚ್ಚು ಯುವಕರು ಭಾಗಿಯಾಗಿದ್ದರು.

ಸಾರ್ವಜನಿಕ ಸೇವೆ ಒಳಗೊಂಡಂತೆ ವಿವಿಧ ವೃತ್ತಿಗಳಿಗೆ ಸೇರುವ 18 ರಿಂದ 25 ವಯೋಮಾನದ ಯುವಜನತೆಯ ಧ್ವನಿಯನ್ನು ಆಲಿಸುವುದು ರಾಷ್ಟ್ರೀಯ ಯುವ ಸಂಸತ್ ಉತ್ಸವದ ಉದ್ದೇಶವಾಗಿದೆ. 2017 ರ ಡಿಸೆಂಬರ್ 31 ರಂದು ಪ್ರಧಾನಿಯವರು ತಮ್ಮ ಮನ್ ಕಿ ಬಾತ್ ನಲ್ಲಿ ಯುವ ಸಂಸತ್ತು ಉತ್ಸವ (ಎನ್‌ವೈಪಿಎಫ್) ಆರಂಭಿಸಲು ಸಲಹೆ ನೀಡಿದ್ದರು. ಅಂತೆಯೇ ಮೊದಲ ಬಾರಿಗೆ 2019 ರಂದು ಈ ಕಾರ್ಯಕ್ರಮ ಆರಂಭಿಸಲಾಗಿತ್ತು.

ರಾಷ್ಟ್ರೀಯ ಯುವಜನೋತ್ಸವ ರಾಷ್ಟ್ರೀಯ ಯುವಜನೋತ್ಸವವನ್ನು ಪ್ರತಿವರ್ಷ ಜನವರಿ 12 ರಿಂದ 16 ರವರೆಗೆ ಆಚರಿಸಲಾಗುತ್ತದೆ. ಜನವರಿ 12 ಸ್ವಾಮಿ ವಿವೇಕಾನಂದರ ಜನ್ಮ ದಿನವಾದ್ದರಿಂದ ಇದನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷ, ರಾಷ್ಟ್ರೀಯ ಯುವ ಉತ್ಸವದ ಜೊತೆಗೆ ಎನ್‌ವೈಪಿಎಫ್ ಸಹ ಆಯೋಜಿಸಲಾಗುತ್ತಿದೆ.

ದೇಶದ ಯುವಕರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಒಗ್ಗೂಡಿಸುವುದು ರಾಷ್ಟ್ರೀಯ ಯುವ ಉತ್ಸವದ ಉದ್ದೇಶವಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ, 24 ನೇ ರಾಷ್ಟ್ರೀಯ ಯುವ ಉತ್ಸವವನ್ನು ವರ್ಚುವಲ್ ಮಾದರಿಯಲ್ಲಿ ನಡೆಸಲಾಗುತ್ತಿದೆ. 24 ನೇ ರಾಷ್ಟ್ರೀಯ ಯುವ ಉತ್ಸವದ ಸಮಾರೋಪ ಸಮಾರಂಭವು 2021 ರ ಜನವರಿ 16 ರಂದು ನವದೆಹಲಿಯ ಡಾ.ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಗೋಏರ್ ಪೈಲಟ್ ವಜಾ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More