AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನ ಲಖ್​ಪತ್​​ ಸಾಹೀಬ್​​ನಲ್ಲಿ ​​ಇಂದು ಗುರುಪುರಬ್​ ಆಚರಣೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಈ ಗುರುದ್ವಾರ 2001ರ ಭೂಕಂಪದಲ್ಲಿ ಹಾನಿಗೊಳಗಾಗಿತ್ತು. ಆಗ ನರೇಂದ್ರ ಮೋದಿಯವರು ಗುಜರಾತ್​​ನ ಮುಖ್ಯಮಂತ್ರಿಯಾಗಿದ್ದರು. ಗುರುದ್ವಾರವನ್ನು ಕೆಲವೇ ದಿನಗಳಲ್ಲಿ, ಅತ್ಯಂತ ಶೀಘ್ರವಾಗಿಯೇ ದುರಸ್ತಿ ಮಾಡಿಸಿದ್ದರು.

ಗುಜರಾತ್​​ನ ಲಖ್​ಪತ್​​ ಸಾಹೀಬ್​​ನಲ್ಲಿ ​​ಇಂದು ಗುರುಪುರಬ್​ ಆಚರಣೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತು
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on: Dec 25, 2021 | 10:41 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗುಜರಾತ್​​ನ​  ಕಚ್​​ನಲ್ಲಿರುವ ಗುರುದ್ವಾರ ಲಖ್​ಪತ್​​ ಸಾಹೀಬ್​​ನಲ್ಲಿ ನಡೆಯಲಿರುವ ಗುರು ನಾನಕ್​ ಅವರ ಗುರುಪುರಬ್​ ಆಚರಣೆಯಲ್ಲಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. ಇಂದು ಮಧ್ಯಾಹ್ನ 12.30ರ ಹೊತ್ತಿಗೆ ಪ್ರಧಾನಿ ಮೋದಿ (PM Narendra Modi) ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಲಿದ್ದಾರೆ ಎಂದು ಪಿಎಂಒ ತಿಳಿಸಿದೆ.  ಸಿಖ್​ ಧರ್ಮವನ್ನು ಸ್ಥಾಪಿಸಿದ ಗುರುನಾನಕರ ಜನ್ಮದಿನವಾದ ಗುರುಪುರಬ್​ನ್ನು ಆಚರಿಸಲು ಪ್ರತಿವರ್ಷವೂ ಡಿ.23-25 ರವರೆಗೆ ಗುಜರಾತ್​ನ ಗುರುದ್ವಾರ ಲಖ್ಪತ್​ ಸಾಹೀಬ್​​ನಲ್ಲಿ ಸಿಖ್ಖರು ಸೇರುತ್ತಾರೆ.  ಗುರುನಾನಕ್ ದೇವ್​ ಅವರು ತಮ್ಮ ಪ್ರಯಾಣದ ಸಂದರ್ಭದಲ್ಲಿ ಇಲ್ಲಿಯೇ ತಂಗಿದ್ದರು ಎಂದು ಹೇಳಲಾಗಿದೆ.  ಲಖ್​ಪತ್​​ ಸಾಹೀಬ್​ ಎಂಬುದು ಅವರ ಮರದ ಪಾದರಕ್ಷೆಗಳು, ತೊಟ್ಟಿಲು, ಹಸ್ತಪ್ರತಿಗಳು ಮತ್ತು ಗುರುಮುಖಿಯ ಗುರುತು ಲಿಪಿಗಳನ್ನೊಳಗೊಂಡಿದೆ ಎಂದೂ ಪಿಎಂಒ ಮಾಹಿತಿ ನೀಡಿದೆ. 

ಈ ಗುರುದ್ವಾರ 2001ರ ಭೂಕಂಪದಲ್ಲಿ ಹಾನಿಗೊಳಗಾಗಿತ್ತು. ಆಗ ನರೇಂದ್ರ ಮೋದಿಯವರು ಗುಜರಾತ್​​ನ ಮುಖ್ಯಮಂತ್ರಿಯಾಗಿದ್ದರು. ಗುರುದ್ವಾರವನ್ನು ಕೆಲವೇ ದಿನಗಳಲ್ಲಿ, ಅತ್ಯಂತ ಶೀಘ್ರವಾಗಿಯೇ ದುರಸ್ತಿ ಮಾಡಿಸಿದ್ದರು.  ಗುರುನಾನಕ್​ ದೇವ್​ ಜಿ ಅವರ 550ನೇ ಪ್ರಕಾಶ ಪುರಬ್​, ಗುರು ಗೋವಿಂದ್​ ಸಿಂಗ್​ ಜಿ ಅವರ 350ನೇ ಪ್ರಕಾಶ ಪುರಬ್​ ಮತ್ತು ಗುರು ತೇಗ್​ ಬಹದ್ದೂರ್​ ಅವರ 400ನೇ ಪ್ರಕಾಶ ಪುರಬ್​ ಆಚರಣೆ ಅವರು ಕ್ರಮ ಕೈಗೊಂಡಿದ್ದಾರೆ. ಇದೆಲ್ಲ ಪ್ರಧಾನಿ ಮೋದಿಯವರು ಸಿಖ್​ ಧರ್ಮದ ಮೇಲೆ ಇಟ್ಟ ಅಪಾರ ಗೌರವವನ್ನು ಸೂಚಿಸುತ್ತದೆ ಎಂದೂ ಪಿಎಂಒ ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ಮೊದಲು ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ನಿಮಿತ್ತ, ಟ್ವೀಟ್ ಮಾಡಿ ಗೌರವ ಸಲ್ಲಿಸಿದ್ದಾರೆ. ಇಡೀ ದೇಶದ ಅಭಿವೃದ್ಧಿಗೆ ತಮ್ಮಿಡೀ ಜೀವನವನ್ನು ಮುಡಿಪಾಗಿಟ್ಟ ಅಟಲ್​ ಜೀ ಅವರಿಗೆ ಕೋಟಿ ಕೋಟಿ ನಮನಗಳು ಎಂದು ಹೇಳಿದ್ದಾರೆ. ಹಾಗೇ, ಸಮಾಜ ಸುಧಾರಕ ಮದನ್ ಮೋಹನ್​ ಮಾಳವಿಯಾ ಜನ್ಮದಿನಕ್ಕೂ ಶುಭಾಶಯ ಕೋರಿದ್ದಾರೆ. ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ, ಪಂಡಿತ್​ ಮದನ್ ಮೋಹನ್ ಮಾಳವಿಯಾ ಅವರ ಜನ್ಮದಿನದಂದು ಗೌರವಪೂರ್ವಕ ಶುಭಾಶಯಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಹಾಗೇ, ಕ್ರಿಸ್​ಮಸ್​ ಸಂಭ್ರಮದಲ್ಲಿರುವ ಕ್ರಿಶ್ಚಿಯನ್ ಸಮುದಾಯಕ್ಕೂ ಕೂಡ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷೆ ಅಲ್ಲ; ಆಕೆಯ ಗಂಡನ ಕಾರುಬಾರು – ಮಿಡಿಗೇಶಿ ಗ್ರಾಮಸ್ಥರಿಂದ ಪ್ರತಿಭಟನೆ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!