AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನ ಲಖ್​ಪತ್​​ ಸಾಹೀಬ್​​ನಲ್ಲಿ ​​ಇಂದು ಗುರುಪುರಬ್​ ಆಚರಣೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಈ ಗುರುದ್ವಾರ 2001ರ ಭೂಕಂಪದಲ್ಲಿ ಹಾನಿಗೊಳಗಾಗಿತ್ತು. ಆಗ ನರೇಂದ್ರ ಮೋದಿಯವರು ಗುಜರಾತ್​​ನ ಮುಖ್ಯಮಂತ್ರಿಯಾಗಿದ್ದರು. ಗುರುದ್ವಾರವನ್ನು ಕೆಲವೇ ದಿನಗಳಲ್ಲಿ, ಅತ್ಯಂತ ಶೀಘ್ರವಾಗಿಯೇ ದುರಸ್ತಿ ಮಾಡಿಸಿದ್ದರು.

ಗುಜರಾತ್​​ನ ಲಖ್​ಪತ್​​ ಸಾಹೀಬ್​​ನಲ್ಲಿ ​​ಇಂದು ಗುರುಪುರಬ್​ ಆಚರಣೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತು
ಪ್ರಧಾನಿ ಮೋದಿ
TV9 Web
| Edited By: |

Updated on: Dec 25, 2021 | 10:41 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗುಜರಾತ್​​ನ​  ಕಚ್​​ನಲ್ಲಿರುವ ಗುರುದ್ವಾರ ಲಖ್​ಪತ್​​ ಸಾಹೀಬ್​​ನಲ್ಲಿ ನಡೆಯಲಿರುವ ಗುರು ನಾನಕ್​ ಅವರ ಗುರುಪುರಬ್​ ಆಚರಣೆಯಲ್ಲಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. ಇಂದು ಮಧ್ಯಾಹ್ನ 12.30ರ ಹೊತ್ತಿಗೆ ಪ್ರಧಾನಿ ಮೋದಿ (PM Narendra Modi) ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಲಿದ್ದಾರೆ ಎಂದು ಪಿಎಂಒ ತಿಳಿಸಿದೆ.  ಸಿಖ್​ ಧರ್ಮವನ್ನು ಸ್ಥಾಪಿಸಿದ ಗುರುನಾನಕರ ಜನ್ಮದಿನವಾದ ಗುರುಪುರಬ್​ನ್ನು ಆಚರಿಸಲು ಪ್ರತಿವರ್ಷವೂ ಡಿ.23-25 ರವರೆಗೆ ಗುಜರಾತ್​ನ ಗುರುದ್ವಾರ ಲಖ್ಪತ್​ ಸಾಹೀಬ್​​ನಲ್ಲಿ ಸಿಖ್ಖರು ಸೇರುತ್ತಾರೆ.  ಗುರುನಾನಕ್ ದೇವ್​ ಅವರು ತಮ್ಮ ಪ್ರಯಾಣದ ಸಂದರ್ಭದಲ್ಲಿ ಇಲ್ಲಿಯೇ ತಂಗಿದ್ದರು ಎಂದು ಹೇಳಲಾಗಿದೆ.  ಲಖ್​ಪತ್​​ ಸಾಹೀಬ್​ ಎಂಬುದು ಅವರ ಮರದ ಪಾದರಕ್ಷೆಗಳು, ತೊಟ್ಟಿಲು, ಹಸ್ತಪ್ರತಿಗಳು ಮತ್ತು ಗುರುಮುಖಿಯ ಗುರುತು ಲಿಪಿಗಳನ್ನೊಳಗೊಂಡಿದೆ ಎಂದೂ ಪಿಎಂಒ ಮಾಹಿತಿ ನೀಡಿದೆ. 

ಈ ಗುರುದ್ವಾರ 2001ರ ಭೂಕಂಪದಲ್ಲಿ ಹಾನಿಗೊಳಗಾಗಿತ್ತು. ಆಗ ನರೇಂದ್ರ ಮೋದಿಯವರು ಗುಜರಾತ್​​ನ ಮುಖ್ಯಮಂತ್ರಿಯಾಗಿದ್ದರು. ಗುರುದ್ವಾರವನ್ನು ಕೆಲವೇ ದಿನಗಳಲ್ಲಿ, ಅತ್ಯಂತ ಶೀಘ್ರವಾಗಿಯೇ ದುರಸ್ತಿ ಮಾಡಿಸಿದ್ದರು.  ಗುರುನಾನಕ್​ ದೇವ್​ ಜಿ ಅವರ 550ನೇ ಪ್ರಕಾಶ ಪುರಬ್​, ಗುರು ಗೋವಿಂದ್​ ಸಿಂಗ್​ ಜಿ ಅವರ 350ನೇ ಪ್ರಕಾಶ ಪುರಬ್​ ಮತ್ತು ಗುರು ತೇಗ್​ ಬಹದ್ದೂರ್​ ಅವರ 400ನೇ ಪ್ರಕಾಶ ಪುರಬ್​ ಆಚರಣೆ ಅವರು ಕ್ರಮ ಕೈಗೊಂಡಿದ್ದಾರೆ. ಇದೆಲ್ಲ ಪ್ರಧಾನಿ ಮೋದಿಯವರು ಸಿಖ್​ ಧರ್ಮದ ಮೇಲೆ ಇಟ್ಟ ಅಪಾರ ಗೌರವವನ್ನು ಸೂಚಿಸುತ್ತದೆ ಎಂದೂ ಪಿಎಂಒ ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ಮೊದಲು ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ನಿಮಿತ್ತ, ಟ್ವೀಟ್ ಮಾಡಿ ಗೌರವ ಸಲ್ಲಿಸಿದ್ದಾರೆ. ಇಡೀ ದೇಶದ ಅಭಿವೃದ್ಧಿಗೆ ತಮ್ಮಿಡೀ ಜೀವನವನ್ನು ಮುಡಿಪಾಗಿಟ್ಟ ಅಟಲ್​ ಜೀ ಅವರಿಗೆ ಕೋಟಿ ಕೋಟಿ ನಮನಗಳು ಎಂದು ಹೇಳಿದ್ದಾರೆ. ಹಾಗೇ, ಸಮಾಜ ಸುಧಾರಕ ಮದನ್ ಮೋಹನ್​ ಮಾಳವಿಯಾ ಜನ್ಮದಿನಕ್ಕೂ ಶುಭಾಶಯ ಕೋರಿದ್ದಾರೆ. ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ, ಪಂಡಿತ್​ ಮದನ್ ಮೋಹನ್ ಮಾಳವಿಯಾ ಅವರ ಜನ್ಮದಿನದಂದು ಗೌರವಪೂರ್ವಕ ಶುಭಾಶಯಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಹಾಗೇ, ಕ್ರಿಸ್​ಮಸ್​ ಸಂಭ್ರಮದಲ್ಲಿರುವ ಕ್ರಿಶ್ಚಿಯನ್ ಸಮುದಾಯಕ್ಕೂ ಕೂಡ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷೆ ಅಲ್ಲ; ಆಕೆಯ ಗಂಡನ ಕಾರುಬಾರು – ಮಿಡಿಗೇಶಿ ಗ್ರಾಮಸ್ಥರಿಂದ ಪ್ರತಿಭಟನೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ