AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann ki Baat: ಇಂದು ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿಯವರ ಮನ್​ ಕೀ ಬಾತ್​​; ಎಲ್ಲೆಲ್ಲಿ ವೀಕ್ಷಿಸಬಹುದು? ಇಲ್ಲಿದೆ ಮಾಹಿತಿ..

ಪ್ರಧಾನಿ ನರೇಂದ್ರ ಮೋದಿಯವರ ಮನ್​ ಕೀ ಬಾತ್​ ಕಾರ್ಯಕ್ರಮ ಇಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಆಲ್​ ಇಂಡಿಯಾ ರೇಡಿಯೋ (AIR)ದ ಎಲ್ಲ ನೆಟ್​ವರ್ಕ್​​ಗಳಲ್ಲಿ ಇದು ಪ್ರಸಾರವಾಗಲಿದೆ.

Mann ki Baat: ಇಂದು ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿಯವರ ಮನ್​ ಕೀ ಬಾತ್​​; ಎಲ್ಲೆಲ್ಲಿ ವೀಕ್ಷಿಸಬಹುದು? ಇಲ್ಲಿದೆ ಮಾಹಿತಿ..
ನರೇಂದ್ರ ಮೋದಿ
TV9 Web
| Edited By: |

Updated on: Oct 24, 2021 | 9:29 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು 82ನೇ ಆವೃತ್ತಿಯ ಮನ್​ ಕೀ ಬಾತ್​​​ (Mann ki Baat) ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಅವರು ತಮ್ಮ ತಿಂಗಳ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡುವರು.  ಸಾಮಾನ್ಯವಾಗಿ ಪ್ರತಿತಿಂಗಳ ಕೊನೇ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯವರ ಮನ್​ ಕೀ ಬಾತ್​ ಕಾರ್ಯಕ್ರಮ ಇರುತ್ತದೆ. ಇದರಲ್ಲಿ ಅವರು ರಾಜಕೀಯ ಹೊರತಾದ ಮಾತುಗಳನ್ನು ಆಡುತ್ತಾರೆ. ಸಾಧಕರನ್ನು ಶ್ಲಾಘಿಸುತ್ತಾರೆ. ಈ ವಾರದ ಪ್ರಾರಂಭದಲ್ಲಿ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಈ ತಿಂಗಳ ಮನ್​ ಕೀ ಬಾತ್​ ಅಕ್ಟೋಬರ್​ 24ರಂದು ನಡೆಯಲಿದೆ. ಈ ಬಗ್ಗೆ ಸಾರ್ವಜನಿಕರೂ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಿ ಎಂದು ಕೇಳಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ಮನ್​ ಕೀ ಬಾತ್​ ಕಾರ್ಯಕ್ರಮ ಇಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಆಲ್​ ಇಂಡಿಯಾ ರೇಡಿಯೋ (AIR)ದ ಎಲ್ಲ ನೆಟ್​ವರ್ಕ್​​ಗಳಲ್ಲಿ, ದೂರದರ್ಶನ, ಎಐಆರ್ ನ್ಯೂಸ್​ ಮತ್ತು ಅವುಗಳ ಮೊಬೈಲ್​ ಆ್ಯಪ್​​ಗಳಲ್ಲಿ ಮನ್​ ಕೀ ಬಾತ್​ ವೀಕ್ಷಿಸಬಹುದು. ಅದರ ಹೊರತಾಗಿ ಬಿಜೆಪಿಯ ಯೂಟ್ಯೂಬ್​ ಚಾನಲ್​​ಗಳು, ಪ್ರಧಾನಮಂತ್ರಿ ಕಚೇರಿಯ ಅಧಿಕೃತ ವೆಬ್​​ಸೈಟ್​​ಗಳಲ್ಲಿ ಪ್ರಸಾರವಾಗುತ್ತದೆ.  ಇನ್ನು ಮನ್​ ಕೀ ಬಾತ್​ ಮೂಲ ಆವೃತ್ತಿ ಹಿಂದಿಯಲ್ಲಿ ಪ್ರಸಾರವಾಗಲಿದೆ. ಅಂದರೆ ನರೇಂದ್ರ ಮೋದಿ ಹಿಂದಿಯಲ್ಲಿ ಮಾತನಾಡಲಿದ್ದಾರೆ. ಅದಾದ ಬಳಿಕ ಆಲ್ ಇಂಡಿಯಾ ರೇಡಿಯೋ ಸಂಜೆ 8 ಗಂಟೆ ಹೊತ್ತಿಗೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡಲಿದೆ.

ಪ್ರತಿ ಮನ್​ ಕೀ ಬಾತ್​ ವೇಳೆಗೂ ಸಹ ಪ್ರಧಾನಿ ನರೇಂದ್ರ ಮೋದಿ ಯಾವ ವಿಚಾರ ಮಾತನಾಡಬಹುದು ಎಂಬ ಕುತೂಹಲ ಇದ್ದೇ ಇರುತ್ತದೆ. ಅದರಲ್ಲೂ ಈಗ ಭಾರತ 100 ಕೋಟಿ ಡೋಸ್​ ಲಸಿಕೆ ಮೈಲಿಗಲ್ಲು ಮುಟ್ಟಿದೆ. ಈ ಬಗ್ಗೆ ನರೇಂದ್ರ ಮೋದಿ ತುಂಬ ಸಂತೋಷ ವ್ಯಕ್ತಪಡಿಸಿದ್ದಾರೆ. ಅದನ್ನೂ ಮನ್​ ಕೀ ಬಾತ್​​​ನಲ್ಲಿ ಉಲ್ಲೇಖಿಸಬಹುದು ಎಂಬ ನಿರೀಕ್ಷೆಯಂತೂ ಇದ್ದೇ ಇದೆ.  ಕಳೆದ ತಿಂಗಳು ನಡೆಸಿದ್ದ ಮನ್​ ಕೀ ಬಾತ್​​ನಲ್ಲಿ ಮಹಾತ್ಮ ಗಾಂಧಿಯವರ ತತ್ವಗಳನ್ನು ಜನರು ಅನುಸರಿಸಬೇಕು ಎಂದು ಕರೆ ನೀಡಿದ್ದರು. ಹಾಗೇ ನದಿಗಳ ದಿನಾಚರಣೆಯನ್ನು ನೆನಪಿಸಿ, ಜೀವ ಕೊಡುವ ನದಿಗಳ ಸ್ವಚ್ಛತೆ ಆದ್ಯತೆಯಾಗಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: Shocking News: ಮಹಿಳೆಯ ಕಿವಿಯೊಳಗೆ ರಾತ್ರಿಯಿಡೀ ವಾಸವಿದ್ದ ಜೇಡರ ಹುಳು; ಅಪರೂಪದ ಕೇಸ್​ ಕಂಡು ವೈದ್ಯರಿಗೇ ಶಾಕ್!

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ