AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Natural Farming Conclave: ನೈಸರ್ಗಿಕ ಕೃಷಿಕರ ಸಮಾವೇಶದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಷಣ

Natural Farming: ಪ್ರತಿ ಹಳ್ಳಿಯಲ್ಲಿ ಕನಿಷ್ಠ 75 ರೈತರು ನೈಸರ್ಗಿಕ ವಿಧಾನದ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು.

Natural Farming Conclave: ನೈಸರ್ಗಿಕ ಕೃಷಿಕರ ಸಮಾವೇಶದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಷಣ
ನರೇಂದ್ರ ಮೋದಿ
TV9 Web
| Edited By: |

Updated on:Jul 10, 2022 | 7:11 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಜುಲೈ 10) ಬೆಳಿಗ್ಗೆ 10 ಗಂಟೆಗೆ ನೈಸರ್ಗಿಕ ಕೃಷಿಕರ ಸಮಾವೇಶ (Natural Farming Conclave) ಉದ್ಘಾಟಿಸಲಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆಯುತ್ತಿರುವ ‘ಆಜಾದಿ ಕಾ ಅಮೃತ್ ಮಹೋತ್ಸವ್’ (ಸ್ವಾತಂತ್ರ್ಯದ ಅಮೃತ ಮಹೋತ್ಸವ) (Azadi Ka Amrit Mahotsav) ವಿಶೇಷ ಕಾರ್ಯಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೈಸರ್ಗಿಕ ಕೃಷಿ ವಿಧಾನ ಅಳವಡಿಸಿಕೊಂಡಿರುವ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಕಳೆದ ಮಾರ್ಚ್ ತಿಂಗಳಲ್ಲಿ ನಡೆದಿದ್ದ ‘ಗುಜರಾತ್ ಪಂಚಾಯತ್ ಮಹಾಸಮ್ಮೇಳನ’ದಲ್ಲಿ ಮಾತನಾಡಿದ್ದ ಅವರು, ಪ್ರತಿ ಹಳ್ಳಿಯಲ್ಲಿ ಕನಿಷ್ಠ 75 ರೈತರು ನೈಸರ್ಗಿಕ ವಿಧಾನದ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ವಿಚಾರದಿಂದ ಪ್ರೇರಣೆ ಪಡೆದ ಸೂರತ್ ಜಿಲ್ಲೆಯ ರೈತ ಮುಖಂಡರು ಸತತ ಪ್ರಯತ್ನ ಮತ್ತು ಸಂಘಟನಾತ್ಮಕ ಕ್ರಮಗಳಿಂದ ರೈತರು, ಚುನಾಯಿತ ಪ್ರತಿನಿಧಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಕೃಷಿ ಉತ್ಪನ್ನ ಮಾರಾಟ ಮಂಡಳಿ ಸಮಿತಿಗಳು (Agriculture Produce Marketing Committees – APMCs), ಸಹಕಾರ ಸಂಸ್ಥೆಗಳು, ಬ್ಯಾಂಕ್​ಗಳು ಸೇರಿದಂತೆ ಕೃಷಿ ವಲಯದಲ್ಲಿ ಸಕ್ರಿಯವಾಗಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಲು ಮುಂದಾದರು. ಈ ಉಪಕ್ರಮಗಳ ಪರಿಣಾಮವಾಗಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಕನಿಷ್ಠ 75 ರೈತರನ್ನು ಗುರುತಿಸಿ ನೈಸರ್ಗಿಕ ಕೃಷಿ ವಿಧಾನ ಅನುಸರಿಸಲು ಉತ್ತೇಜನ ನೀಡಲಾಯಿತು. ನೈಸರ್ಗಿಕ ಕೃಷಿ ಪದ್ಧತಿಯನ್ನು ಜನಪ್ರಿಯಗೊಳಿಸಲೆಂದು 90 ಕ್ಲಸ್ಟರ್​ಗಳನ್ನು ರೂಪಿಸಿ 41,000ಕ್ಕೂ ಹೆಚ್ಚು ರೈತರಿಗೆ ತರಬೇತಿ ನೀಡಲಾಯಿತು.

ಗುಜರಾತ್​ನ ಸೂರತ್​ನಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ. ಸಮಾವೇಶದಲ್ಲಿ ಸಾವಿರಾರು ರೈತರು ಮತ್ತು ಕೃಷಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿರುವ ಇತರ ಉದ್ಯಮಿಗಳು, ವ್ಯಾಪಾರಿಗಳು, ಆಸಕ್ತರು ಪಾಲ್ಗೊಳ್ಳಲಿದ್ದಾರೆ. ಗುಜರಾತ್​ನ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

Published On - 7:11 am, Sun, 10 July 22

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ