AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಇಂದು ಪೋಸ್ಟ್​​​​ ಬಜೆಟ್​​​ ವೆಬಿನಾರ್​​ನ 5ನೇ ದಿನ ಕುರಿತು ಮಾತನಾಡಲಿರುವ ಪ್ರಧಾನಿ ಮೋದಿ

ಪೋಸ್ಟ್​​​​ ಬಜೆಟ್​​​ ವೆಬಿನಾರ್​​ನ 5ನೇ ದಿನವಾದ ಇಂದು ಪ್ರಧಾನಿ ನರೇದ್ರ ಮೋದಿ ಅವರು "ಅನ್ ಲೀಸಿಂಗ್ ದ ಪೊಟೆನ್ಶಿಯಲ್ ಈಸಿ ಆಫ್ ಲಿವಿಂಗ್ ಯೂಸಿಂಗ್ ಟೆಕ್ನಾಲಜಿ" ವಿಷಯದ ಕುರಿತು ಬೆಳಿಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ​ ಮಾತನಾಡಲಿದ್ದಾರೆ.

PM Narendra Modi: ಇಂದು ಪೋಸ್ಟ್​​​​ ಬಜೆಟ್​​​ ವೆಬಿನಾರ್​​ನ 5ನೇ ದಿನ ಕುರಿತು ಮಾತನಾಡಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
|

Updated on: Feb 28, 2023 | 7:35 AM

Share

ನವದೆಹಲಿ: ಪೋಸ್ಟ್​​​​ ಬಜೆಟ್​​​ ವೆಬಿನಾರ್​​ನ 5ನೇ ದಿನವಾದ ಇಂದು (ಫೆ.28) ಪ್ರಧಾನಿ ನರೇದ್ರ ಮೋದಿ (PM Narendra Modi) ಅವರು “ಅನ್ ಲೀಸಿಂಗ್ ದ ಪೊಟೆನ್ಶಿಯಲ್ ಈಸಿ ಆಫ್ ಲಿವಿಂಗ್ ಯೂಸಿಂಗ್ ಟೆಕ್ನಾಲಜಿ” (Unleashing the potential: Ease of living using technology) ವಿಷಯದ ಕುರಿತು ಬೆಳಿಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ​ ಮಾತನಾಡಲಿದ್ದಾರೆ. ಈ ವೆಬಿನಾರ್​​​ನಲ್ಲಿ ಡಿಜಿಲಾಕರ್ ಘಟಕ, ರಾಷ್ಟ್ರೀಯ ಡೇಟಾ ಆಡಳಿತ, ವಿಳಾಸ ಅಪ್‌ಡೇಟ್ ಸೌಲಭ್ಯ, ಫಿನ್‌ಟೆಕ್ ಸೇವೆಗಳು, ಕೃತಕ ಬುದ್ಧಿಮತ್ತೆ (Artificial Intelligence) ಮತ್ತು ಮಿಷನ್ ಕರ್ಮಯೋಗಿ, ಇ-ಕೋರ್ಟ್‌ಗಳು, 5G ಮತ್ತು ವ್ಯವಹಾರವನ್ನು ಸುಲಭಗೊಳಿಸುವ ಬಗ್ಗೆ ಬಜೆಟ್​​ನಲ್ಲಿ ಘೋಷಿಸಲಾದ ವಿಷಯಗಳ ಕುರಿತು ಚರ್ಚಿಸುತ್ತಾರೆ. ಹಾಗೇ ಕೆಐಸಿ, ಸಾಮಾನ್ಯ ವ್ಯಾಪಾರ ಗುರುತಿಸುವಿಕೆ, ಏಕೀಕೃತ ಫೈಲಿಂಗ್ ಪ್ರಕ್ರಿಯೆಗಳನ್ನು ಸರಳೀಕೃತಗೊಳಿಸುವುದರ ಕುರಿತು ಮಾತನಾಡಲಿದ್ದಾರೆ.

ಈ ವೆಬಿನಾರ್​ನ್ನು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಕೈಗಾರಿಕಾ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಈ ವೆಬಿನಾರ್​ನಲ್ಲಿ ಕೇಂದ್ರ ಐಟಿ ಸಚಿವಾಲಯ, ಡಿಪಿಐಐಟಿ, ನ್ಯಾಯಾಂಗ ಇಲಾಖೆ, ಟೆಲಿಕಾಂ ಇಲಾಖೆ, ಹಣಕಾಸು ಇಲಾಖೆ ಮತ್ತು ವಾಣಿಜ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗುತ್ತಾರೆ.

ಹಾಗೇ ರಾಜ್ಯ ಸರ್ಕಾರಗಳು, ಕೈಗಾರಿಕೆಗಳು, ಸ್ಟಾರ್ಟ್‌ಅಪ್‌ಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಂಘಸಂಸ್ಥೆಗಳು ಮತ್ತು ತಜ್ಞರು ಪ್ರಮುಖ ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದ ಮೈಲಿಗಲ್ಲುಗಳು ಮತ್ತು ಯೋಜನೆಗಳ ಅನುಷ್ಠಾನ ಬಗ್ಗೆ ಚರ್ಚಿಸುತ್ತಾರೆ. ವೆಬಿನಾರ್​​ನಲ್ಲಿ ದೇಬ್ಜಾನಿ ಘೋಷ್, ನಾಸ್ಕಾಮ್, ನ್ಯಾಯಮೂರ್ತಿ ಎ. ಮುಹಮ್ಮದ್ ಮುಸ್ತಾಕ್, ಪವನ್ ಗೋಯೆಂಕಾ,ಮಹೀಂದ್ರಾ ಲಿಮಿಟೆಡ್, ಆಕಾಶ್ ಅಂಬಾನಿ, ರಿಲಯನ್ಸ್ ಜಿಯೋ ಇನ್ಫೋಕಾಮ್ ಮುಂತಾದ ಹಲವಾರು ಗಣ್ಯ ವ್ಯಕ್ತಿಗಳು ಭಾಗಿಯಾಗುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ