ಯುಎಸ್​ನಿಂದ 157 ಪುರಾತನ ಕಲಾಕೃತಿಗಳನ್ನು ವಾಪಸ್​ ಭಾರತಕ್ಕೆ ತಂದ ಪ್ರಧಾನಿ ಮೋದಿ; ಹಿಂದೆ ಕಳವಾಗಿದ್ದ ವಿಗ್ರಹಗಳೆಲ್ಲ ಮತ್ತೆ ದೇಶಕ್ಕೆ

ಇದೀಗ ಪ್ರಧಾನಿ ಮೋದಿಯವರು ಭಾರತಕ್ಕೆ ತರಲಿರುವ ಪುರಾತನ ವಸ್ತುಗಳಲ್ಲಿ 12ನೇ ಶತಮಾನದ ಕಂಚಿನ ನಟರಾಜ ವಿಗ್ರಹ, 10ನೇ ಶತಮಾನದ ರೇವಂತ ದೇವರ ಮೂರ್ತಿಗಳು ಇವೆ.

ಯುಎಸ್​ನಿಂದ 157 ಪುರಾತನ ಕಲಾಕೃತಿಗಳನ್ನು ವಾಪಸ್​ ಭಾರತಕ್ಕೆ ತಂದ ಪ್ರಧಾನಿ ಮೋದಿ; ಹಿಂದೆ ಕಳವಾಗಿದ್ದ ವಿಗ್ರಹಗಳೆಲ್ಲ ಮತ್ತೆ ದೇಶಕ್ಕೆ
ಕಂಚಿನಿಂದ ಮಾಡಲಾದ ಲಕ್ಷ್ಮೀ ನಾರಾಯಣ ಅಲಂಕೃತ ಮೂರ್ತಿಗಳು, ಬುದ್ಧ, ವಿಷ್ಣು, ಶಿವ-ಪಾರ್ವತಿ ಮತ್ತು 24 ಜೈನ ತೀರ್ಥಂಕರ ಮೂರ್ತಿಗಳ ವಿಗ್ರಹ ಇದೆ.  ದೇವರ ವಿಗ್ರಹಗಳ ಹೊರತಾಗಿಯೂ ಕೆಲವು ಸಾಂಸ್ಕೃತಿಕ ಪ್ರತಿಬಿಂಬಕ ಕಲಾಕೃತಿಗಳಿವೆ.
Follow us
| Updated By: Lakshmi Hegde

Updated on: Sep 26, 2021 | 9:58 AM

ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಯುಎಸ್​ ಪ್ರವಾಸ (PM Modi US Visit) ಮುಗಿಸಿ, ಅಲ್ಲಿಂದ ಹೊರಟಿದ್ದಾರೆ. ನಿನ್ನೆ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಿದ್ದರು. ಸೆಪ್ಟೆಂಬರ್​ 24ರಂದು ಕ್ವಾಡ್​ ಶೃಂಗಸಭೆ (Quad Summit)ಯಲ್ಲಿ ಮಾತನಾಡಿದ್ದರು. ನಿನ್ನೆ (ಸೆಪ್ಟೆಂಬರ್​ 25) ಅವರ ಅಮೆರಿಕ ಪ್ರವಾಸ ಮುಕ್ತಾಯಗೊಂಡಿದ್ದು, ಈಗಾಗಲೇ ಅಲ್ಲಿಂದ ಹೊರಟಿದ್ದಾರೆ. ಆದರೆ ಹೀಗೆ ಭಾರತಕ್ಕೆ ಬರುವಾಗ, ನಮ್ಮ ದೇಶಕ್ಕೆ ಸಂಬಂಧಪಟ್ಟ ಸುಮಾರು 157 ಪುರಾತನ ಕಲಾಕೃತಿಗಳು, ದೇವರ ವಿಗ್ರಹಗಳನ್ನು ವಾಪಸ್​ ತರುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಕಲಾಕೃತಿಗಳೆಲ್ಲ ಹಿಂದೆ ಕಳವಾಗಿ, ಯುಎಸ್​ಗೆ ಸಾಗಿಸಲ್ಪಟ್ಟಿದ್ದವು. ಅದನ್ನೀಗ ಪ್ರಧಾನಿ ಮೋದಿಯವರಿಗೆ ಅಮೆರಿಕ ಹಸ್ತಾಂತರ ಮಾಡಿದೆ.  ಈ ಬಗ್ಗೆ ಪ್ರಧಾನಿ ಮೋದಿ (Narendra Modi)ಯವರೂ ಕೂಡ ತುಂಬ ಖುಷಿ ವ್ಯಕ್ತಪಡಿಸಿದ್ದಾರೆ.  

ಇದೀಗ ಪ್ರಧಾನಿ ಮೋದಿಯವರು ಭಾರತಕ್ಕೆ ತರಲಿರುವ ಪುರಾತನ ವಸ್ತುಗಳಲ್ಲಿ 12ನೇ ಶತಮಾನದ ಕಂಚಿನ ನಟರಾಜ ವಿಗ್ರಹ, 10ನೇ ಶತಮಾನದ ರೇವಂತ ದೇವರ ಮೂರ್ತಿಗಳು ಇವೆ. ಹೀಗೆ ವಾಪಸ್​ ತರಲಾದ 45 ಕಲಾಕೃತಿಗಳು ಸಾಮಾನ್ಯ ಯುಗಕ್ಕಿಂತಲೂ ಮುಂಚಿನವು. 71 ಸಾಂಸ್ಕೃತಿಕ ಕಲಾಕೃತಿಗಳಾಗಿದ್ದು, 60 ಹಿಂದೂ ಧರ್ಮ ಬಿಂಬಕ ಕಲಾಕೃತಿಗಳಾಗಿವೆ. ಇನ್ನು 16 ಕಲಾಕೃತಿಗಳು ಬೌದ್ಧಧರ್ಮಕ್ಕೆ ಸೇರಿದ್ದಾಗಿದ್ದು, 9 ಜೈನಧರ್ಮದ್ದಾಗಿವೆ.

ಕಂಚಿನಿಂದ ಮಾಡಲಾದ ಲಕ್ಷ್ಮೀ ನಾರಾಯಣ ಅಲಂಕೃತ ಮೂರ್ತಿಗಳು, ಬುದ್ಧ, ವಿಷ್ಣು, ಶಿವ-ಪಾರ್ವತಿ ಮತ್ತು 24 ಜೈನ ತೀರ್ಥಂಕರ ಮೂರ್ತಿಗಳ ವಿಗ್ರಹ ಇದೆ.  ದೇವರ ವಿಗ್ರಹಗಳ ಹೊರತಾಗಿಯೂ ಕೆಲವು ಸಾಂಸ್ಕೃತಿಕ ಪ್ರತಿಬಿಂಬಕ ಕಲಾಕೃತಿಗಳಿವೆ. ಮೂರು ತಲೆಯ ಬ್ರಹ್ಮ, ರಥ ಚಾಲನೆ ಮಾಡುತ್ತಿರುವ ಸೂರ್ಯ, ವಿಷ್ಣು, ದಕ್ಷಿಣಾಮೂರ್ತಿಯಾಗಿರುವ ಶಿವ, ನೃತ್ಯ ಮಾಡುತ್ತಿರುವ ಗಣೇಶನ ವಿಗ್ರಹಗಳು, ತಾರ, ಜೈನ ತೀರ್ಥಂಕರ, ಪದ್ಮಾಸನ ತೀರ್ಥಂಕರ ಮತ್ತು ಜೈನ ಚೌಬಿಸಿ ಮೂರ್ತಿಗಳೂ ಇವೆ.

Narendra Modi

ಪ್ರಧಾನಿ ನರೇಂದ್ರ ಮೋದಿ

ಇದನ್ನೂ ಓದಿ: KL Rahul: ಪಡಿಕ್ಕಲ್ ಅಲ್ಲ: ಆರ್​ಸಿಬಿ ಮುಂದಿನ ನಾಯಕ ಈ ಕನ್ನಡಿಗ ಎಂದ ರಾಯಲ್ ಚಾಲೆಂಜರ್ಸ್ ಆಟಗಾರ: ಯಾರು ಗೊತ್ತಾ?

Mann ki Baat: ಇಂದು ಪ್ರಧಾನಿ ಮೋದಿ ಮನ್​ ಕೀ ಬಾತ್​; ಎಲ್ಲೆಲ್ಲಿ ವೀಕ್ಷಿಸಬಹುದು? ಪ್ರಸಾರದ ಸಮಯ ಯಾವುದು? ಇಲ್ಲಿದೆ ಮಾಹಿತಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ