AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

All-Party Meet: ನಾಳೆಯಿಂದ ಸಂಸತ್ತಿನ ಚಳಿಗಾಲದ ಅಧಿವೇಶನ; ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ

Winter Session of Parliament: ಯಾವುದೇ ಅಧಿವೇಶನ ಶುರುವಾಗುವುದಕ್ಕೂ ಮೊದಲು ಹೀಗೆ ಸರ್ವಪಕ್ಷಗಳ ಸಭೆ ನಡೆಯುವುದು ಶಿಷ್ಟಾಚಾರವಾಗಿದ್ದು, ಇಂದು ಕೂಡ ಅದೇ ಪ್ರಕಾರದಲ್ಲಿ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ.

All-Party Meet: ನಾಳೆಯಿಂದ ಸಂಸತ್ತಿನ ಚಳಿಗಾಲದ ಅಧಿವೇಶನ; ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ
ಪ್ರಧಾನಿ ನರೇಂದ್ರ ಮೋದಿ (ಪಿಟಿಐ ಚಿತ್ರ)
TV9 Web
| Edited By: |

Updated on: Nov 28, 2021 | 9:24 AM

Share

ದೆಹಲಿ: ನಾಳೆಯಿಂದ (ನ.29) ಲೋಕಸಭೆ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ನಿಮಿತ್ತ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸರ್ವ ಪಕ್ಷಗಳ (All Party Meet) ಸಭೆ ನಡೆಸಲಿದ್ದಾರೆ. ಚಳಿಗಾಲದ ಅಧಿವೇಶನದ ಕಾರ್ಯಸೂಚಿಯ ಬಗ್ಗೆ ಈ ಸರ್ವಪಕ್ಷಗಳ ಸಭೆಯಲ್ಲಿ ಚರ್ಚೆಯಾಗಲಿದೆ. ಹಾಗೇ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಶಾಸಕಾಂಗ ಪಕ್ಷದ ನಾಯಕರ ಸಭೆ ಕರೆದಿದ್ದಾರೆ. 

ಸದ್ಯದ ಮಟ್ಟಿಗೆ ಎಲ್ಲರ ಕಣ್ಣು ಇರುವುದು ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021ರ ಮೇಲೆ. ಕಳೆದ ವರ್ಷ ಮುಂಗಾರು ಅಧಿವೇಶನದಲ್ಲಿ ಅಂಗೀಕಾರವಾಗಿದ್ದ ಕೃಷಿ ಮಸೂದೆಗಳು ನಂತರ ಕಾಯ್ದೆಗಳಾಗಿ ರೂಪುಗೊಂಡಿದ್ದವು. ಆದರೆ ಈ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಒಂದು ವರ್ಷದಿಂದಲೂ ರೈತರು ಹೋರಾಟ ನಡೆಸುತ್ತಿದ್ದರು. ಸರ್ಕಾರದ ಯಾವ ಭರವಸೆಗೂ ಬಗ್ಗದ ಅವರು, ಕೃಷಿ ಕಾಯ್ದೆಗಳನ್ನು ರದ್ದು ಮಾಡದ ವಿನಃ ನಾವು ಹೋರಾಟ ಹಿಂಪಡೆಯಲಾರವು ಎಂದಿದ್ದರು. ಅದರ ಬೆನ್ನಲ್ಲೇ ನವೆಂಬರ್ 19ರಂದು ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿ, ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಭರವಸೆ ನೀಡಿದ್ದರು. ಇದೀಗ ಅದನ್ನು ರದ್ದು ಮಾಡುವ ಬಿಲ್​ ಕೂಡ ಸಂಸತ್ತಿನಲ್ಲಿ ಮಂಡನೆಯಾಗಲಿದೆ. ಬಿಜೆಪಿ, ಕಾಂಗ್ರೆಸ್​ ಪಕ್ಷಗಳು ತಮ್ಮ ಸಂಸದರಿಗೆ ವಿಪ್​ ಕೂಡ ಜಾರಿ ಮಾಡಿವೆ.

ಯಾವುದೇ ಅಧಿವೇಶನ ಶುರುವಾಗುವುದಕ್ಕೂ ಮೊದಲು ಹೀಗೆ ಸರ್ವಪಕ್ಷಗಳ ಸಭೆ ನಡೆಯುವುದು ಶಿಷ್ಟಾಚಾರವಾಗಿದ್ದು, ಇಂದು ಕೂಡ ಅದೇ ಪ್ರಕಾರದಲ್ಲಿ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಧಿವೇಶನದಲ್ಲಿ ಚರ್ಚೆಯ ವೇಳೆ, ಪ್ರಶ್ನೋತ್ತರ ವೇಳೆ ಸಮನ್ವಯತೆ ಕಾಪಾಡುವಂತೆ ಈ ಸಭೆಯಲ್ಲಿ ಪ್ರತಿಪಕ್ಷಗಳಿಗೆ ಆಡಳಿತ ಸರ್ಕಾರ ಮನವಿ ಮಾಡಲಿದೆ.  ನಾಳೆಯಿಂದ ಪ್ರಾರಂಭವಾಗಲಿರುವ ಚಳಿಗಾಲದ ಅಧಿವೇಶನ ಡಿಸೆಂಬರ್​ 23ರವರೆಗೆ ಇರಲಿದೆ. ರಾಜ್ಯಸಭೆಯಲ್ಲೂ ಇದೇ ವೇಳೆ ಅಧಿವೇಶನ ನಡೆಯುವುದು.

ಇದನ್ನೂ ಓದಿ: ರಮೇಶ್ ಒಬ್ಬ ಬಂಡುಕೋರ, ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ