AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಏರಿಕೆಯಾಗುತ್ತಲೇ ಇರುವ ಕೊವಿಡ್​ 19 ಕೇಸ್​ಗಳು; ಇಂದು ಸಂಜೆ 4.30ಕ್ಕೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

PM Modi: ಭಾರತದಲ್ಲಿ ನಾಳೆಯಿಂದ ಮೂರನೇ ಡೋಸ್​ ಲಸಿಕೆ ಅಭಿಯಾನ ನಡೆಯಲಿದೆ. ಸದ್ಯ ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವವರು ಮತ್ತು 60 ವರ್ಷ ಮೇಲ್ಪಟ್ಟು ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೊವಿಡ್​ 19 ಲಸಿಕೆ ಬೂಸ್ಟರ್​ ಡೋಸ್​ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ದೇಶದಲ್ಲಿ ಏರಿಕೆಯಾಗುತ್ತಲೇ ಇರುವ ಕೊವಿಡ್​ 19 ಕೇಸ್​ಗಳು; ಇಂದು ಸಂಜೆ 4.30ಕ್ಕೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Jan 09, 2022 | 11:11 AM

Share

ಭಾರತದಲ್ಲಿ ಕೊವಿಡ್​ 19 ಪ್ರಕರಣಗಳ(Covid 19 Cases) ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದೆ. ದಿನದ ಪಾಸಿಟಿವಿಟಿ ರೇಟ್​​ ಕೂಡ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಇಂದು ಪ್ರಧಾನಿ ಮೋದಿಯವರು (PM Narendra Modi) ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.  ಇಂದು ಸಂಜೆ 4.30ಕ್ಕೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು, ದೇಶದ ಕೊವಿಡ್​ 19 ಪರಿಸ್ಥಿತಿ ಪರಿಶೀಲನೆ ನಡೆಯಲಿದೆ. ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ವ್ಯಾಪಕ ಚರ್ಚೆ ನಡೆಯಲಿದೆ ಎಂದು ಎಎನ್​​ಐ ವರದಿ ಮಾಡಿದೆ.

ಇಂದು ದೇಶದಲ್ಲಿ 1,59,632 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷ ಮೀರಿದೆ. ದಿನದಿನವೂ ಕೊವಿಡ್​ 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಒಂದೊಂದೇ ರಾಜ್ಯಗಳು ವೀಕೆಂಡ್ ಕರ್ಫ್ಯೂ, ಶೇ.50ರ ಸಾಮರ್ಥ್ಯದ ಅವಕಾಶಗಳಂಥ ನಿರ್ಬಂಧ ವಿಧಿಸುತ್ತಿವೆ. ಇನ್ನೊಂದೆಡೆ ಒಮಿಕ್ರಾನ್ ಸೋಂಕಿನ ಸಂಖ್ಯೆಯೂ ಕೂಡ ಏರುತ್ತಿದ್ದು, ಸದ್ಯ 3623 ಮಂದಿ ಒಮಿಕ್ರಾನ್ ಸೋಂಕಿತರಿದ್ದಾರೆ.

ನಾಳೆಯಿಂದ ಇನ್ನೊಂದು ಹಂತದ ಲಸಿಕೆ ಅಭಿಯಾನ ಭಾರತದಲ್ಲಿ ನಾಳೆಯಿಂದ ಮೂರನೇ ಡೋಸ್​ ಲಸಿಕೆ ಅಭಿಯಾನ ನಡೆಯಲಿದೆ. ಸದ್ಯ ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವವರು ಮತ್ತು 60 ವರ್ಷ ಮೇಲ್ಪಟ್ಟು ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೊವಿಡ್​ 19 ಲಸಿಕೆ ಬೂಸ್ಟರ್​ ಡೋಸ್​ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. 18 ವರ್ಷ ಮೇಲ್ಪಟ್ಟವರಿಗೆ ಕಳೆದ ವರ್ಷ ಜನವರಿಯಿಂದಲೇ ಕೊರೊನಾ ಲಸಿಕೆ ನೀಡಲಾಗುತ್ತಿತ್ತು. ಒಟ್ಟಾರೆ ಸದ್ಯ ದೇಶದಲ್ಲಿ 150 ಕೋಟಿಗೂ ಅಧಿಕ ಡೋಸ್ ನೀಡಲಾಗಿದ್ದು, ಜನವರಿ 3ರಿಂದ 15-18ವರ್ಷದವರಿಗೆ ಕೊರೊನಾ ಲಸಿಕೆ ನಿಡಲಾಗುತ್ತಿದೆ. ಶುರುವಾದ ಒಂದೇ ವಾರದಲ್ಲಿ ಈ ವಯಸ್ಸಿನ 2 ಕೋಟಿಗೂ ಅಧಿಕ ಹೆಚ್ಚಿನ ಜನರು ಕೊರೊನಾ ಲಸಿಕೆ ಪಡೆದಿದ್ದಾರೆ. ಸದ್ಯ ದೇಶದಲ್ಲಿ ಕೊವಿಡ್​ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಸಾಯುವವರ ಪ್ರಮಾಣ ಕಡಿಮೆ ಇದೆ. ಇದೆಲ್ಲದರ ಮಧ್ಯೆ ಇಂದು ಪ್ರಧಾನಿ ಮೋದಿ ಕರೆದಿರುವ ಸಭೆಯ ಬಗ್ಗೆ ಸಹಜವಾಗಿಯೇ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ: Guru Gobind Singh’s Jayanti 2022: ಸಿಖ್​ ಸಮುದಾಯದವರಿಗೆ ಗುರು ಗೋವಿಂದ ಸಿಂಗ್​ ಜಯಂತಿ ಶುಭ ಕೋರಿದ ಪ್ರಧಾನಿ ಮೋದಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ