AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಏರಿಕೆಯಾಗುತ್ತಲೇ ಇರುವ ಕೊವಿಡ್​ 19 ಕೇಸ್​ಗಳು; ಇಂದು ಸಂಜೆ 4.30ಕ್ಕೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

PM Modi: ಭಾರತದಲ್ಲಿ ನಾಳೆಯಿಂದ ಮೂರನೇ ಡೋಸ್​ ಲಸಿಕೆ ಅಭಿಯಾನ ನಡೆಯಲಿದೆ. ಸದ್ಯ ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವವರು ಮತ್ತು 60 ವರ್ಷ ಮೇಲ್ಪಟ್ಟು ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೊವಿಡ್​ 19 ಲಸಿಕೆ ಬೂಸ್ಟರ್​ ಡೋಸ್​ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ದೇಶದಲ್ಲಿ ಏರಿಕೆಯಾಗುತ್ತಲೇ ಇರುವ ಕೊವಿಡ್​ 19 ಕೇಸ್​ಗಳು; ಇಂದು ಸಂಜೆ 4.30ಕ್ಕೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Jan 09, 2022 | 11:11 AM

Share

ಭಾರತದಲ್ಲಿ ಕೊವಿಡ್​ 19 ಪ್ರಕರಣಗಳ(Covid 19 Cases) ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದೆ. ದಿನದ ಪಾಸಿಟಿವಿಟಿ ರೇಟ್​​ ಕೂಡ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಇಂದು ಪ್ರಧಾನಿ ಮೋದಿಯವರು (PM Narendra Modi) ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.  ಇಂದು ಸಂಜೆ 4.30ಕ್ಕೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು, ದೇಶದ ಕೊವಿಡ್​ 19 ಪರಿಸ್ಥಿತಿ ಪರಿಶೀಲನೆ ನಡೆಯಲಿದೆ. ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ವ್ಯಾಪಕ ಚರ್ಚೆ ನಡೆಯಲಿದೆ ಎಂದು ಎಎನ್​​ಐ ವರದಿ ಮಾಡಿದೆ.

ಇಂದು ದೇಶದಲ್ಲಿ 1,59,632 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷ ಮೀರಿದೆ. ದಿನದಿನವೂ ಕೊವಿಡ್​ 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಒಂದೊಂದೇ ರಾಜ್ಯಗಳು ವೀಕೆಂಡ್ ಕರ್ಫ್ಯೂ, ಶೇ.50ರ ಸಾಮರ್ಥ್ಯದ ಅವಕಾಶಗಳಂಥ ನಿರ್ಬಂಧ ವಿಧಿಸುತ್ತಿವೆ. ಇನ್ನೊಂದೆಡೆ ಒಮಿಕ್ರಾನ್ ಸೋಂಕಿನ ಸಂಖ್ಯೆಯೂ ಕೂಡ ಏರುತ್ತಿದ್ದು, ಸದ್ಯ 3623 ಮಂದಿ ಒಮಿಕ್ರಾನ್ ಸೋಂಕಿತರಿದ್ದಾರೆ.

ನಾಳೆಯಿಂದ ಇನ್ನೊಂದು ಹಂತದ ಲಸಿಕೆ ಅಭಿಯಾನ ಭಾರತದಲ್ಲಿ ನಾಳೆಯಿಂದ ಮೂರನೇ ಡೋಸ್​ ಲಸಿಕೆ ಅಭಿಯಾನ ನಡೆಯಲಿದೆ. ಸದ್ಯ ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವವರು ಮತ್ತು 60 ವರ್ಷ ಮೇಲ್ಪಟ್ಟು ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೊವಿಡ್​ 19 ಲಸಿಕೆ ಬೂಸ್ಟರ್​ ಡೋಸ್​ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. 18 ವರ್ಷ ಮೇಲ್ಪಟ್ಟವರಿಗೆ ಕಳೆದ ವರ್ಷ ಜನವರಿಯಿಂದಲೇ ಕೊರೊನಾ ಲಸಿಕೆ ನೀಡಲಾಗುತ್ತಿತ್ತು. ಒಟ್ಟಾರೆ ಸದ್ಯ ದೇಶದಲ್ಲಿ 150 ಕೋಟಿಗೂ ಅಧಿಕ ಡೋಸ್ ನೀಡಲಾಗಿದ್ದು, ಜನವರಿ 3ರಿಂದ 15-18ವರ್ಷದವರಿಗೆ ಕೊರೊನಾ ಲಸಿಕೆ ನಿಡಲಾಗುತ್ತಿದೆ. ಶುರುವಾದ ಒಂದೇ ವಾರದಲ್ಲಿ ಈ ವಯಸ್ಸಿನ 2 ಕೋಟಿಗೂ ಅಧಿಕ ಹೆಚ್ಚಿನ ಜನರು ಕೊರೊನಾ ಲಸಿಕೆ ಪಡೆದಿದ್ದಾರೆ. ಸದ್ಯ ದೇಶದಲ್ಲಿ ಕೊವಿಡ್​ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಸಾಯುವವರ ಪ್ರಮಾಣ ಕಡಿಮೆ ಇದೆ. ಇದೆಲ್ಲದರ ಮಧ್ಯೆ ಇಂದು ಪ್ರಧಾನಿ ಮೋದಿ ಕರೆದಿರುವ ಸಭೆಯ ಬಗ್ಗೆ ಸಹಜವಾಗಿಯೇ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ: Guru Gobind Singh’s Jayanti 2022: ಸಿಖ್​ ಸಮುದಾಯದವರಿಗೆ ಗುರು ಗೋವಿಂದ ಸಿಂಗ್​ ಜಯಂತಿ ಶುಭ ಕೋರಿದ ಪ್ರಧಾನಿ ಮೋದಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?