AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi chairs National Conference: ಮುಖ್ಯ ಕಾರ್ಯದರ್ಶಿಗಳ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ಪ್ರತಿನಿಧಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳು ಮತ್ತು ಡೊಮೇನ್ ತಜ್ಞರನ್ನು ಒಳಗೊಂಡ 200 ಕ್ಕೂ ಹೆಚ್ಚು ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

PM Modi chairs National Conference: ಮುಖ್ಯ ಕಾರ್ಯದರ್ಶಿಗಳ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Updated By: Ganapathi Sharma|

Updated on: Jan 07, 2023 | 6:57 AM

Share

ನವದೆಹಲಿ: ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳ ನಡುವಣ ಸಹಭಾಗಿತ್ವವವನ್ನು ವೃದ್ಧಿಸುವ ದೃಷ್ಟಿಯಿಂದ ಮಖ್ಯವೆನಿಸಿರುವ ಮುಖ್ಯ ಕಾರ್ಯದರ್ಶಿಗಳ ಸಮಾವೇಶದ ಅಧ್ಯಕ್ಷತೆಯನ್ನು ಇಂದೂ ಸಹ ಪ್ರಧಾನಿ ನರೇಂದ್ರ ಮೋದಿ (Narendra Modi) ವಹಿಸಲಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಶುಕ್ರವಾರ ಸಹ ಪ್ರಧಾನಿ ಭಾಗವಹಿಸಿದ್ದಾರೆ. ಇದು ಮುಖ್ಯ ಕಾರ್ಯದರ್ಶಿಗಳ ಎರಡನೇ ಸಮಾವೇಶವಾಗಿದ್ದು, ಈ ಹಿಂದೆ 2022ರ ಜೂನ್​ನಲ್ಲಿ ಧರ್ಮಶಾಲಾದಲ್ಲಿ ಮೊದಲ ಸಮಾವೇಶ ನಡೆದಿತ್ತು. ರಾಷ್ಟ್ರ ರಾಜಧಾನಿಯಲ್ಲಿ ಜನವರಿ 5ರಿಂದ ಆರಂಭಗೊಂಡಿರುವ ಸಮಾವೇಶದ ಮುಖ್ಯ ಅಜೆಂಡಾ, ರಾಜ್ಯಗಳ ಸಹಭಾಗಿತ್ವದೊಂದಿಗೆ ಸುಸ್ಥಿರ ಆರ್ಥಿಕ ಬೆಳವಣಿಗೆ ಸಾಧಿಸುವ ಬಗ್ಗೆ ಸ್ಪಷ್ಟ ರೂಪುರೇಷೆ ಹೊಂದುವುದಾಗಿದೆ.

ಕೇಂದ್ರ ಸರ್ಕಾರದ ಪ್ರತಿನಿಧಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳು ಮತ್ತು ಡೊಮೇನ್ ತಜ್ಞರನ್ನು ಒಳಗೊಂಡ 200 ಕ್ಕೂ ಹೆಚ್ಚು ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

ಪರಸ್ಪರ ನಂಬಿಕೆಯ ಆಧಾರದ ಮೇಲೆ ಬೆಳವಣಿಗೆ ಸಾಧಿಸುವುದು, ಉದ್ಯೋಗ ಸೃಷ್ಟಿ ಮತ್ತು ಅಂತರ್ಗತ ಮಾನವ ಅಭಿವೃದ್ಧಿಯ ಜತೆಗೆ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಭಾರತವನ್ನು ರೂಪಿಸಲು ಈ ಸಮ್ಮೇಳನವು ಅಡಿಪಾಯ ಹಾಕಲಿದೆ ಎಂದು ಪಿಎಂ ಹೇಳಿದೆ.

ಸಮನ್ವಯತೆಯೇ ಪ್ರಗತಿಗೆ ಆಧಾರ ಸ್ತಂಭ

ಈ ಮಹತ್ವದ ಸಮಾವೇಶದ ಮೂಲಕ ಸಹಕಾರಿ ಒಕ್ಕೂಟ, ಕೇಂದ್ರ ಸಚಿವಾಲಯಗಳು ಮತ್ತು ರಾಜ್ಯದ ಅನೇಕ ಇಲಾಖೆಗಳು ಸಮನ್ವಯವಾಗಿ ಕೆಲಸ ಮಾಡುತ್ತಿದೆ. ಇದು ನವ ಭಾರತದ ಅಭಿವೃದ್ಧಿ ಮತ್ತು ಪ್ರಗತಿಗೆ ಅಗತ್ಯವಾದ ಆಧಾರಸ್ತಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದರು.

ಮತ್ತಷ್ಟು ಓದಿ: ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಹಾಗೂ ಮಹಿಳೆಯ ನಡುವೆ ನಡೆದ ವಾಟ್ಸ್​ಆ್ಯಪ್ ಸಂಭಾಷಣೆಯಲ್ಲಿ ಏನಿದೆ?

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿರುವುದಕ್ಕೆ ಈ ಸಮಾವೇಶ ಒಂದು ಉತ್ತಮ ಉದಾಹರಣೆಯಾಗಿದೆ. ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಒಮ್ಮುಖದ ಮೂಲಕ ದೇಶದಾದ್ಯಂತ ಅತ್ಯಂತ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿ ಮಾಡಲು ಕಾರ್ಯನಿರ್ವಹಿಸಬೇಕಿದೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!