AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಉದ್ದೇಶಿಸಿ ಇಂದು ಸಂಜೆ ಪ್ರಧಾನಿ ಮೋದಿಯವರಿಂದ ಭಾಷಣ

ಈ ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಪ್ರಮುಖರು, ವಿಶ್ವ ಸಂಸ್ಥೆ ಪ್ರಮುಖರು, ಅಂತಾರಾಷ್ಟ್ರೀಯ ಸಂಸ್ಥೆಗಳು, ನಾಗರಿಕ ಸಮಾಜದ ನಾಯಕರೂ ಕೂಡ ಪಾಲ್ಗೊಳ್ಳಲಿದ್ದಾರೆ.

PM Modi: ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಉದ್ದೇಶಿಸಿ ಇಂದು ಸಂಜೆ ಪ್ರಧಾನಿ ಮೋದಿಯವರಿಂದ ಭಾಷಣ
ಪ್ರಧಾನಿ ಮೋದಿ
TV9 Web
| Edited By: |

Updated on:Jan 17, 2022 | 10:09 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಸಂಜೆ 8.30ಕ್ಕೆ, ವಿಶ್ವ ಆರ್ಥಿಕ ವೇದಿಕೆ(World Economic Forum)ಯ ದಾವೋಸ್​ ಅಜೆಂಡಾವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇಂದಿನಿಂದ (ಜ.17) ಜನವರಿ 21ರವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ವರ್ಚ್ಯುವಲ್​ ಆಗಿ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಜಪಾನ್​ ಪ್ರಧಾನಿ  ಕಿಶಿಡಾ ಫ್ಯೂಮಿಯೊ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಇಂಡೋನೇಷಿಯಾದ ಅಧ್ಯಕ್ಷ ಜೋಕೊ ವಿಡೋಡೊ, ಇಸ್ರೇಲಿ ಪ್ರಧಾನಿ ನಫ್ತಾಲಿ ಬೆನೆಟ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್, ಯುರೋಪಿಯನ್ ಯೂನಿಯನ್​ ಆಯೋಗದ ಮುಖ್ಯಸ್ಥ ಉರ್ಸುವಾ ವಾನ್ ಡೆರ್ ಲೇಯೆನ್ ಇತರರು ಪಾಲ್ಗೊಂಡು ಭಾಷಣ ಮಾಡಲಿದ್ದಾರೆ. ತಾವು ದಾವೋಸ್​ ಅಜೆಂಡಾ ಉದ್ದೇಶಿಸಿ ಮಾತನಾಡಲಿರುವ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಲಿದ್ದಾರೆ.

ಈ ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಪ್ರಮುಖರು, ವಿಶ್ವ ಸಂಸ್ಥೆ ಪ್ರಮುಖರು, ಅಂತಾರಾಷ್ಟ್ರೀಯ ಸಂಸ್ಥೆಗಳು, ನಾಗರಿಕ ಸಮಾಜದ ನಾಯಕರೂ ಕೂಡ ಪಾಲ್ಗೊಳ್ಳಲಿದ್ದಾರೆ. ಜಗತ್ತು ಪ್ರಸ್ತುತವಾಗಿ ಎದುರಿಸುತ್ತಿರುವ ಕಠಿಣ ಸವಾಲುಗಳು ಮತ್ತು ಅದನ್ನು ಎದುರಿಸುವುದು ಹೇಗೆ ಎಂಬ ಬಗ್ಗೆ ಈ ಅಜೆಂಡಾದಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಯಲಿದೆ. ಇದು 2022ರ ಮೊದಲ, ವಿಶ್ವ ನಾಯಕರ ಸಭೆಯಾಗಿದೆ. ಇಲ್ಲಿ ಪ್ರಮುಖ ನಾಯಕು 2022ರ ಬಗ್ಗೆ ತಮ್ಮ ದೃಷ್ಟಿಕೋನವನ್ನು ಪ್ರಸ್ತುತಪಡಿಸಲಿದ್ದು, ವಿಶ್ವದ ಸ್ಥಿತಿ (State of the World) ಇದರ ಪ್ರಮುಖ ಥೀಮ್ ಆಗಿದೆ. ಜಿನಿವಾ ಮೂಲದ ಈ ವಿಶ್ವ ಆರ್ಥಿಕ ವೇದಿಕೆ ಕಳೆದ 50ವರ್ಷಗಳಿಂದಲೂ ದಾವೋಸ್​ನ ಸ್ವಿಸ್​ ಸ್ಕಿ ರೆಸಾರ್ಟ್​​ನಲ್ಲಿ ತನ್ನ ವಾರ್ಷಿಕ ಸಭೆ ನಡೆಸುತ್ತಿದೆ. ಆದರೆ ಕೊವಿಡ್​ 19 ಕಾರಣದಿಂದ 2021ರಲ್ಲಿ ಇದು ನಡೆದಿರಲಿಲ್ಲ. ಈಗಲೂ ಕೂಡ ಕೊರೊನಾ ಕಾರಣಕ್ಕೆ ವರ್ಚ್ಯುವಲ್​ ಆಗಿಯೇ ಆಯೋಜಿಸಲಾಗಿದೆ. ಇಂದು ಮೊದಲ ದಿನ ಭಾರತದ ಪ್ರಧಾನಿ ಮತ್ತು ಚೀನಾ ಅಧ್ಯಕ್ಷ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: ಮೂರು ನಾಯಿಗಳು ಮತ್ತು ನಾಗರ ಹಾವಿನ ನಡುವೆ ಕಾಳಗ, ಮೈ ಜುಮ್​ ಎನ್ನಿಸುವ ದೃಶ್ಯ

Published On - 9:55 am, Mon, 17 January 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ