AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಉದ್ದೇಶಿಸಿ ಇಂದು ಸಂಜೆ ಪ್ರಧಾನಿ ಮೋದಿಯವರಿಂದ ಭಾಷಣ

ಈ ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಪ್ರಮುಖರು, ವಿಶ್ವ ಸಂಸ್ಥೆ ಪ್ರಮುಖರು, ಅಂತಾರಾಷ್ಟ್ರೀಯ ಸಂಸ್ಥೆಗಳು, ನಾಗರಿಕ ಸಮಾಜದ ನಾಯಕರೂ ಕೂಡ ಪಾಲ್ಗೊಳ್ಳಲಿದ್ದಾರೆ.

PM Modi: ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಉದ್ದೇಶಿಸಿ ಇಂದು ಸಂಜೆ ಪ್ರಧಾನಿ ಮೋದಿಯವರಿಂದ ಭಾಷಣ
ಪ್ರಧಾನಿ ಮೋದಿ
TV9 Web
| Edited By: |

Updated on:Jan 17, 2022 | 10:09 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಸಂಜೆ 8.30ಕ್ಕೆ, ವಿಶ್ವ ಆರ್ಥಿಕ ವೇದಿಕೆ(World Economic Forum)ಯ ದಾವೋಸ್​ ಅಜೆಂಡಾವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇಂದಿನಿಂದ (ಜ.17) ಜನವರಿ 21ರವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ವರ್ಚ್ಯುವಲ್​ ಆಗಿ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಜಪಾನ್​ ಪ್ರಧಾನಿ  ಕಿಶಿಡಾ ಫ್ಯೂಮಿಯೊ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಇಂಡೋನೇಷಿಯಾದ ಅಧ್ಯಕ್ಷ ಜೋಕೊ ವಿಡೋಡೊ, ಇಸ್ರೇಲಿ ಪ್ರಧಾನಿ ನಫ್ತಾಲಿ ಬೆನೆಟ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್, ಯುರೋಪಿಯನ್ ಯೂನಿಯನ್​ ಆಯೋಗದ ಮುಖ್ಯಸ್ಥ ಉರ್ಸುವಾ ವಾನ್ ಡೆರ್ ಲೇಯೆನ್ ಇತರರು ಪಾಲ್ಗೊಂಡು ಭಾಷಣ ಮಾಡಲಿದ್ದಾರೆ. ತಾವು ದಾವೋಸ್​ ಅಜೆಂಡಾ ಉದ್ದೇಶಿಸಿ ಮಾತನಾಡಲಿರುವ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಲಿದ್ದಾರೆ.

ಈ ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಪ್ರಮುಖರು, ವಿಶ್ವ ಸಂಸ್ಥೆ ಪ್ರಮುಖರು, ಅಂತಾರಾಷ್ಟ್ರೀಯ ಸಂಸ್ಥೆಗಳು, ನಾಗರಿಕ ಸಮಾಜದ ನಾಯಕರೂ ಕೂಡ ಪಾಲ್ಗೊಳ್ಳಲಿದ್ದಾರೆ. ಜಗತ್ತು ಪ್ರಸ್ತುತವಾಗಿ ಎದುರಿಸುತ್ತಿರುವ ಕಠಿಣ ಸವಾಲುಗಳು ಮತ್ತು ಅದನ್ನು ಎದುರಿಸುವುದು ಹೇಗೆ ಎಂಬ ಬಗ್ಗೆ ಈ ಅಜೆಂಡಾದಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಯಲಿದೆ. ಇದು 2022ರ ಮೊದಲ, ವಿಶ್ವ ನಾಯಕರ ಸಭೆಯಾಗಿದೆ. ಇಲ್ಲಿ ಪ್ರಮುಖ ನಾಯಕು 2022ರ ಬಗ್ಗೆ ತಮ್ಮ ದೃಷ್ಟಿಕೋನವನ್ನು ಪ್ರಸ್ತುತಪಡಿಸಲಿದ್ದು, ವಿಶ್ವದ ಸ್ಥಿತಿ (State of the World) ಇದರ ಪ್ರಮುಖ ಥೀಮ್ ಆಗಿದೆ. ಜಿನಿವಾ ಮೂಲದ ಈ ವಿಶ್ವ ಆರ್ಥಿಕ ವೇದಿಕೆ ಕಳೆದ 50ವರ್ಷಗಳಿಂದಲೂ ದಾವೋಸ್​ನ ಸ್ವಿಸ್​ ಸ್ಕಿ ರೆಸಾರ್ಟ್​​ನಲ್ಲಿ ತನ್ನ ವಾರ್ಷಿಕ ಸಭೆ ನಡೆಸುತ್ತಿದೆ. ಆದರೆ ಕೊವಿಡ್​ 19 ಕಾರಣದಿಂದ 2021ರಲ್ಲಿ ಇದು ನಡೆದಿರಲಿಲ್ಲ. ಈಗಲೂ ಕೂಡ ಕೊರೊನಾ ಕಾರಣಕ್ಕೆ ವರ್ಚ್ಯುವಲ್​ ಆಗಿಯೇ ಆಯೋಜಿಸಲಾಗಿದೆ. ಇಂದು ಮೊದಲ ದಿನ ಭಾರತದ ಪ್ರಧಾನಿ ಮತ್ತು ಚೀನಾ ಅಧ್ಯಕ್ಷ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: ಮೂರು ನಾಯಿಗಳು ಮತ್ತು ನಾಗರ ಹಾವಿನ ನಡುವೆ ಕಾಳಗ, ಮೈ ಜುಮ್​ ಎನ್ನಿಸುವ ದೃಶ್ಯ

Published On - 9:55 am, Mon, 17 January 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ