AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rozgar Mela 2023: 71 ಸಾವಿರ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ ಮೋದಿ

ಹೊಸದಾಗಿ ನೇಮಕಗೊಂಡ ನೌಕರರು ಕೇಂದ್ರ ಸರ್ಕಾರದಲ್ಲಿ ರೈಲು ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್, ಶಿಕ್ಷಕರು, ಗ್ರಂಥಪಾಲಕರು ಮತ್ತು ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿರಲಿದ್ದಾರೆ.

Rozgar Mela 2023: 71 ಸಾವಿರ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Apr 13, 2023 | 7:00 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು(ಏಪ್ರಿಲ್ 13ರಂದು) ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ನೇಮಕಗೊಂಡ ಸುಮಾರು 71,000 ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು(Appointment letters) ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿಯವರು ಹೊಸತಾಗಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ‘ರೋಜ್‌ಗಾರ್ ಮೇಳ’ (Rozgar Mela) ಉಪಕ್ರಮದ ಭಾಗವಾಗಿದೆ, ಇದು ಸುಮಾರು 10 ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈ ಉಪಕ್ರಮದ ಮೂಲಕ ಈಡೇರಿಸಲಾಗುತ್ತಿದೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ.

‘ರೋಜ್‌ಗಾರ್ ಮೇಳ’ ಅಭಿಯಾನವು ಮತ್ತಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಇದು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಯುವಕರನ್ನು ಸಶಕ್ತಗೊಳಿಸುತ್ತದೆ.

ಹೊಸದಾಗಿ ನೇಮಕಗೊಂಡ ನೌಕರರು ಕೇಂದ್ರ ಸರ್ಕಾರದಲ್ಲಿ ರೈಲು ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್, ಶಿಕ್ಷಕರು, ಗ್ರಂಥಪಾಲಕರು ಮತ್ತು ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿರಲಿದ್ದಾರೆ.

ಇದನ್ನೂ ಓದಿ: ಏಪ್ರಿಲ್ 14ರಂದು ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಹೊಸತಾಗಿ ನೇಮಕಗೊಂಡವರು ಸರ್ಕಾರಿ ಇಲಾಖೆಗಳಲ್ಲಿ ಅವರ ಪಾತ್ರಗಳಿಗೆ ತರಬೇತಿ ನೀಡಲು ವಿನ್ಯಾಸಗೊಳಿಸಲಾದ ಆನ್‌ಲೈನ್ ಓರಿಯಂಟೇಶನ್ ಕಾರ್ಯಕ್ರಮವಾದ ‘ಕರ್ಮಯೋಗಿ ಪ್ರಾರಂಭ’ಕ್ಕೆ ಪ್ರವೇಶವನ್ನು ಹೊಂದಿರುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!