AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಇಂದು ಮೋದಿ ಚಾಲನೆ

ಪ್ರಧಾನಮಂತ್ರಿಗಳ ಕಚೇರಿ (PMO) ಪ್ರಕಾರ, ಬೆಳಿಗ್ಗೆ 10 ಗಂಟೆಗೆ, ಪ್ರಧಾನ ಮಂತ್ರಿ ಮೋದಿ ಅವರು ಕಂಬೈನ್ಡ್ ಕಮಾಂಡರ್ಸ್ ಕಾನ್ಫರೆನ್ಸ್-2023 ನಲ್ಲಿ ಭಾಗವಹಿಸುತ್ತಾರೆ. ನಂತರ ಸಂಜೆ 3:15ಕ್ಕೆ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ

Vande Bharat Express: ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಇಂದು ಮೋದಿ ಚಾಲನೆ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Apr 01, 2023 | 8:00 AM

Share

ರಾಣಿ ಕಮಲಾಪತಿ ನಿಲ್ದಾಣದಲ್ಲಿ ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿಗೆ ಚಾಲನೆ ನೀಡಲು ಮತ್ತು ಸಂಯೋಜಿತ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು( ಏಪ್ರಿಲ್ 1 ರಂದು) ಭೋಪಾಲ್‌ಗೆ (Bhopal) ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿ (PMO) ಪ್ರಕಾರ, ಬೆಳಿಗ್ಗೆ 10 ಗಂಟೆಗೆ, ಪ್ರಧಾನ ಮಂತ್ರಿ ಮೋದಿ ಅವರು ಕಂಬೈನ್ಡ್ ಕಮಾಂಡರ್ಸ್ ಕಾನ್ಫರೆನ್ಸ್-2023 ನಲ್ಲಿ ಭಾಗವಹಿಸುತ್ತಾರೆ. ನಂತರ ಸಂಜೆ 3:15ಕ್ಕೆ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ.

ಹನ್ನೊಂದನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ವಂದೇ ಭಾರತ್ ಎಕ್ಸ್‌ಪ್ರೆಸ್ ದೇಶದಲ್ಲಿ ಪ್ರಯಾಣಿಕರ ಪ್ರಯಾಣದ ಅನುಭವವನ್ನು ಮರು ವ್ಯಾಖ್ಯಾನಿಸಿದೆ. ರಾಣಿ ಕಮಲಾಪತಿ ರೈಲು ನಿಲ್ದಾಣ, ಭೋಪಾಲ್ ಮತ್ತು ನವದೆಹಲಿ ರೈಲು ನಿಲ್ದಾಣಗಳ ನಡುವೆ ಪರಿಚಯಿಸಲಾಗುತ್ತಿರುವ ಹೊಸ ರೈಲು ದೇಶದ ಹನ್ನೊಂದನೇ ವಂದೇ ಭಾರತ್ ರೈಲು ಆಗಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ರೈಲು ಸೆಟ್ ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದೆ. ಇದು ರೈಲು ಬಳಕೆದಾರರಿಗೆ ವೇಗವಾದ, ಆರಾಮದಾಯಕ ಮತ್ತು ಅನುಕೂಲಕರ ಪ್ರಯಾಣದ ಅನುಭವವನ್ನು ನೀಡುತ್ತದೆ. ಮಾತ್ರವಲ್ಲದೆ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ಇದು ಪ್ರಸ್ತುತ ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ಬಗ್ಗೆ

ವಂದೇ ಭಾರತ್ ಎಕ್ಸ್‌ಪ್ರೆಸ್ ಉನ್ನತ-ಕಾರ್ಯನಿರ್ವಹಣೆಯ, ಎಲೆಕ್ಟ್ರಿಕ್ ಮಲ್ಟಿಪಲ್-ಯುನಿಟ್ ರೈಲು ಆಗಿದ್ದು, ಇದನ್ನು ಭಾರತೀಯ ರೈಲ್ವೇಗಳು ನಿರ್ವಹಿಸುತ್ತವೆ. ಇದನ್ನು RDSO ವಿನ್ಯಾಸಗೊಳಿಸಿದೆ.ಚೆನ್ನೈನಲ್ಲಿರುವ ಸರ್ಕಾರಿ ಸ್ವಾಮ್ಯದ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ಯಲ್ಲಿ ಇಗು ತಯಾರಿಸಲ್ಪಟ್ಟಿದೆ. ಇದನ್ನು ಸೆಮಿ-ಹೈ-ಸ್ಪೀಡ್ ರೈಲು ಎಂದು ಪರಿಗಣಿಸಲಾಗಿದ್ದು ಇದು ಭಾರತದಲ್ಲಿ ಎರಡನೇ ಅತಿ ವೇಗದ ರೈಲು ಆಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ