AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ 20 ಶೃಂಗಸಭೆಯಲ್ಲಿ ಜಾಗತಿಕ ನಾಯಕರಿಗೆ ಕರಕುಶಲ ವಸ್ತುಗಳನ್ನು ಉಡುಗೊರೆ ನೀಡಲಿದ್ದಾರೆ ಪ್ರಧಾನಿ ಮೋದಿ

ಉಡುಗೊರೆಗಳಲ್ಲಿ ಚಂಬಾ 'ರುಮಾಲು', ಕಾಂಗ್ರಾ ಚಿಕಣಿ ಚಿತ್ರಕಲೆಗಳು, ಕಿನ್ನೌರಿ ಶಾಲು, ಕುಲು ಶಾಲು ಮತ್ತು ಕನಾಲ್ ಹಿತ್ತಾಳೆ ಸೆಟ್ ಸೇರಿವೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಜಿ 20 ಶೃಂಗಸಭೆಯಲ್ಲಿ ಜಾಗತಿಕ ನಾಯಕರಿಗೆ ಕರಕುಶಲ ವಸ್ತುಗಳನ್ನು ಉಡುಗೊರೆ ನೀಡಲಿದ್ದಾರೆ ಪ್ರಧಾನಿ ಮೋದಿ
TV9 Web
| Edited By: |

Updated on: Nov 09, 2022 | 1:06 PM

Share

ನವೆಂಬರ್ 15 ಮತ್ತು 16 ರಂದು ಬಾಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ (G20 summit) ಪ್ರಧಾನಿ ನರೇಂದ್ರ ಮೋದಿ (Narendra Modi )ಅವರು ಹಿಮಾಚಲ ಪ್ರದೇಶದ (Himachal Pradesh) ಹಲವಾರು ವಿಶಿಷ್ಟ ಕಲೆ ಮತ್ತು ಕರಕುಶಲ ವಸ್ತುಗಳನ್ನು ವಿವಿಧ ಜಾಗತಿಕ ನಾಯಕರಿಗೆ ಉಡುಗೊರೆಯಾಗಿ ನೀಡಲಿದ್ದಾರೆ. ಉಡುಗೊರೆಗಳಲ್ಲಿ ಚಂಬಾ ‘ರುಮಾಲು’, ಕಾಂಗ್ರಾ ಚಿಕಣಿ ಚಿತ್ರಕಲೆಗಳು, ಕಿನ್ನೌರಿ ಶಾಲು, ಕುಲು ಶಾಲು ಮತ್ತು ಕನಾಲ್ ಹಿತ್ತಾಳೆ ಸೆಟ್ ಸೇರಿವೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಹಿಮಾಚಲ ಪ್ರದೇಶದ ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಜನಪ್ರಿಯಗೊಳಿಸುವ ನಿರೀಕ್ಷೆಯಿರುವ ಈ ಕ್ರಮವು ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಹಿಮಾಚಲದಲ್ಲಿ ನವೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಒಂದು ದಿನದ ಹಿಂದೆ,  ಮೋದಿ ಅವರು ಜಿ 20 ಅಧ್ಯಕ್ಷ ಸ್ಥಾನಕ್ಕಾಗಿ ಭಾರತದ ಲೋಗೋ, ಥೀಮ್ ಮತ್ತು ವೆಬ್‌ಸೈಟ್ ಅನ್ನು ಅನಾವರಣಗೊಳಿಸಿದರು. ಮುಂದಿನ ವಾರ ಬಾಲಿಯಲ್ಲಿ ನಡೆಯಲಿರುವ G20 ಶೃಂಗಸಭೆಯ ನಂತರ ಭಾರತವು ಡಿಸೆಂಬರ್ 1 ರಂದು ವಿಶ್ವದ 20 ದೊಡ್ಡ ಆರ್ಥಿಕತೆಗಳ ಗುಂಪಿನ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ.

G20 ಅಂತರರಾಷ್ಟ್ರೀಯ ಆರ್ಥಿಕ ಸಹಕಾರಕ್ಕಾಗಿ ಪ್ರಧಾನ ವೇದಿಕೆಯಾಗಿದೆ. ಇದು ಜಾಗತಿಕ GDP ಯ ಸುಮಾರು ಶೇ 85, ಜಾಗತಿಕ ವ್ಯಾಪಾರದ ಶೇ75 ಕ್ಕಿಂತ ಹೆಚ್ಚು ಮತ್ತು ವಿಶ್ವದ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಪ್ರತಿನಿಧಿಸುತ್ತದೆ.

ಇದು ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ರಿಪಬ್ಲಿಕ್ ಆಫ್ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ, ಯುಎಸ್ ಮತ್ತು ಯುರೋಪಿಯನ್ ಯೂನಿಯನ್ ಅನ್ನು ಒಳಗೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ