AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್​, ಸಮೀಪಿಸುತ್ತಿರುವ ಚುನಾವಣೆ; ಇಂದು ಮಂತ್ರಿಮಂಡಲದ ಸಭೆ ಕರೆದ ಪ್ರಧಾನಿ ಮೋದಿ

ಭಾರತದಲ್ಲಿ ಸದ್ಯ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ 600ರ ಗಡಿ ದಾಟಿದೆ. ಈ ತಳಿ ಡೆಲ್ಟಾಕ್ಕಿಂತಲೂ ಮೂರು ಪಟ್ಟು ವೇಗವಾಗಿ ಹರಡುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಅದರಂತೆ ದೇಶದಲ್ಲಿ ಕೂಡ ಸೋಂಕು ವೇಗವಾಗಿ ಹರಡುತ್ತಿದೆ.

ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್​, ಸಮೀಪಿಸುತ್ತಿರುವ ಚುನಾವಣೆ; ಇಂದು ಮಂತ್ರಿಮಂಡಲದ ಸಭೆ ಕರೆದ ಪ್ರಧಾನಿ ಮೋದಿ
ಪ್ರಧಾನಿ ಮೋದಿ
TV9 Web
| Edited By: |

Updated on: Dec 29, 2021 | 12:06 PM

Share

ದೇಶದಲ್ಲಿ ಒಮಿಕ್ರಾನ್​ ಆತಂಕ (Omicron) ಹೆಚ್ಚುತ್ತಿರುವ ಬೆನ್ನಲ್ಲೇ ಇಂದು ಸಂಜೆ 4ಗಂಟೆಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರು ಕೇಂದ್ರ ಮಂತ್ರಿ ಮಂಡಲದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಎಲ್ಲ ಕೇಂದ್ರ ಸಚಿವರೂ ಪಾಲ್ಗೊಳ್ಳುತ್ತಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಹಾಗೇ, ಒಮಿಕ್ರಾನ್​, ಕೊರೊನಾ ಸೋಂಕಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುವ ಜತೆಗೆ, ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ, ಪಂಜಾಬ್​ ಚುನಾವಣೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ಕಳೆದ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಮಟ್ಟದ ಸಭೆ ನಡೆಸಿ, ಕೊರೊನಾ ಸಾಂಕ್ರಾಮಿಕ, ರಾಜ್ಯದಲ್ಲಿ ಕೊವಿಡ್​ 19 ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಮಾಹಿತಿ ಪಡೆದಿದ್ದರು.  

ಭಾರತದಲ್ಲಿ ಸದ್ಯ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ 600ರ ಗಡಿ ದಾಟಿದೆ. ಈ ತಳಿ ಡೆಲ್ಟಾಕ್ಕಿಂತಲೂ ಮೂರು ಪಟ್ಟು ವೇಗವಾಗಿ ಹರಡುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಅದರಂತೆ ದೇಶದಲ್ಲಿ ಕೂಡ ಸೋಂಕು ವೇಗವಾಹಿ ಹರಡುತ್ತಿದೆ. ಈ ಮಧ್ಯೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್ ಅವರು, ವಾರ್​ರೂಂಗಳನ್ನು ಮತ್ತೆ ಸಕ್ರಿಯಗೊಳಿಸಿ, ನೈಟ್​ ಕರ್ಫ್ಯೂದಂಥ ನಿರ್ಬಂಧಗಳನ್ನು ಹೇರಿ ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಸೂಚಿಸಿದ್ದಾರೆ.

ಬುಧವಾರದ ಹೊತ್ತಿಗೆ ಭಾರತದಲ್ಲಿ 781 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ದೆಹಲಿಯಲ್ಲಿ 238, ಮಹಾರಾಷ್ಟ್ರದಲ್ಲಿ 167, ಗುಜರಾತ್​ 73, ಕೇರಳದಲ್ಲಿ 65, ತೆಲಂಗಾಣ 62, ರಾಜಸ್ಥಾನದಲ್ಲಿ 46, ಕರ್ನಾಟಕದ 34, ತಮಿಳುನಾಡು 36 ಮತ್ತು ಹರ್ಯಾಣದಲ್ಲಿ 12 ಕೇಸ್​ಗಳಿವೆ.  ಈ ಮಧ್ಯೆ ದೇಶದಲ್ಲಿ ಜನವರಿ 10ರಿಂದ ಆರೋಗ್ಯ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಬೂಸ್ಟರ್​ ಡೋಸ್ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಹಾಗೇ, ಜನವರಿ 3ರಿಂದ 15-18ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ ನೀಡಿಕೆಯೂ ಪ್ರಾರಂಭಗೊಳ್ಳಲಿದೆ. ಅದರಲ್ಲೂ ದೆಹಲಿಯಲ್ಲೀಗ ಒಮಿಕ್ರಾನ್​ ವಿಪರೀತವಾಗಿದ್ದು, ಅಲ್ಲಿ ನೈಟ್ ಕರ್ಫ್ಯೂ ಹೇರಲಾಗಿದೆ. ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ: Bihar: ಬೆಂಕಿಯಿಂದ ಹೊತ್ತಿ ಉರಿದ ಮನೆ; 5 ಮಕ್ಕಳು ಸಜೀವ ದಹನ, ಪ್ರತಿ ವಸ್ತುವೂ ಸುಟ್ಟು ಭಸ್ಮ

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!