AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್​, ಸಮೀಪಿಸುತ್ತಿರುವ ಚುನಾವಣೆ; ಇಂದು ಮಂತ್ರಿಮಂಡಲದ ಸಭೆ ಕರೆದ ಪ್ರಧಾನಿ ಮೋದಿ

ಭಾರತದಲ್ಲಿ ಸದ್ಯ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ 600ರ ಗಡಿ ದಾಟಿದೆ. ಈ ತಳಿ ಡೆಲ್ಟಾಕ್ಕಿಂತಲೂ ಮೂರು ಪಟ್ಟು ವೇಗವಾಗಿ ಹರಡುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಅದರಂತೆ ದೇಶದಲ್ಲಿ ಕೂಡ ಸೋಂಕು ವೇಗವಾಗಿ ಹರಡುತ್ತಿದೆ.

ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್​, ಸಮೀಪಿಸುತ್ತಿರುವ ಚುನಾವಣೆ; ಇಂದು ಮಂತ್ರಿಮಂಡಲದ ಸಭೆ ಕರೆದ ಪ್ರಧಾನಿ ಮೋದಿ
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on: Dec 29, 2021 | 12:06 PM

Share

ದೇಶದಲ್ಲಿ ಒಮಿಕ್ರಾನ್​ ಆತಂಕ (Omicron) ಹೆಚ್ಚುತ್ತಿರುವ ಬೆನ್ನಲ್ಲೇ ಇಂದು ಸಂಜೆ 4ಗಂಟೆಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರು ಕೇಂದ್ರ ಮಂತ್ರಿ ಮಂಡಲದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಎಲ್ಲ ಕೇಂದ್ರ ಸಚಿವರೂ ಪಾಲ್ಗೊಳ್ಳುತ್ತಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಹಾಗೇ, ಒಮಿಕ್ರಾನ್​, ಕೊರೊನಾ ಸೋಂಕಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುವ ಜತೆಗೆ, ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ, ಪಂಜಾಬ್​ ಚುನಾವಣೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ಕಳೆದ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಮಟ್ಟದ ಸಭೆ ನಡೆಸಿ, ಕೊರೊನಾ ಸಾಂಕ್ರಾಮಿಕ, ರಾಜ್ಯದಲ್ಲಿ ಕೊವಿಡ್​ 19 ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಮಾಹಿತಿ ಪಡೆದಿದ್ದರು.  

ಭಾರತದಲ್ಲಿ ಸದ್ಯ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ 600ರ ಗಡಿ ದಾಟಿದೆ. ಈ ತಳಿ ಡೆಲ್ಟಾಕ್ಕಿಂತಲೂ ಮೂರು ಪಟ್ಟು ವೇಗವಾಗಿ ಹರಡುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಅದರಂತೆ ದೇಶದಲ್ಲಿ ಕೂಡ ಸೋಂಕು ವೇಗವಾಹಿ ಹರಡುತ್ತಿದೆ. ಈ ಮಧ್ಯೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್ ಅವರು, ವಾರ್​ರೂಂಗಳನ್ನು ಮತ್ತೆ ಸಕ್ರಿಯಗೊಳಿಸಿ, ನೈಟ್​ ಕರ್ಫ್ಯೂದಂಥ ನಿರ್ಬಂಧಗಳನ್ನು ಹೇರಿ ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಸೂಚಿಸಿದ್ದಾರೆ.

ಬುಧವಾರದ ಹೊತ್ತಿಗೆ ಭಾರತದಲ್ಲಿ 781 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ದೆಹಲಿಯಲ್ಲಿ 238, ಮಹಾರಾಷ್ಟ್ರದಲ್ಲಿ 167, ಗುಜರಾತ್​ 73, ಕೇರಳದಲ್ಲಿ 65, ತೆಲಂಗಾಣ 62, ರಾಜಸ್ಥಾನದಲ್ಲಿ 46, ಕರ್ನಾಟಕದ 34, ತಮಿಳುನಾಡು 36 ಮತ್ತು ಹರ್ಯಾಣದಲ್ಲಿ 12 ಕೇಸ್​ಗಳಿವೆ.  ಈ ಮಧ್ಯೆ ದೇಶದಲ್ಲಿ ಜನವರಿ 10ರಿಂದ ಆರೋಗ್ಯ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಬೂಸ್ಟರ್​ ಡೋಸ್ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಹಾಗೇ, ಜನವರಿ 3ರಿಂದ 15-18ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ ನೀಡಿಕೆಯೂ ಪ್ರಾರಂಭಗೊಳ್ಳಲಿದೆ. ಅದರಲ್ಲೂ ದೆಹಲಿಯಲ್ಲೀಗ ಒಮಿಕ್ರಾನ್​ ವಿಪರೀತವಾಗಿದ್ದು, ಅಲ್ಲಿ ನೈಟ್ ಕರ್ಫ್ಯೂ ಹೇರಲಾಗಿದೆ. ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ: Bihar: ಬೆಂಕಿಯಿಂದ ಹೊತ್ತಿ ಉರಿದ ಮನೆ; 5 ಮಕ್ಕಳು ಸಜೀವ ದಹನ, ಪ್ರತಿ ವಸ್ತುವೂ ಸುಟ್ಟು ಭಸ್ಮ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ