Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್​, ಸಮೀಪಿಸುತ್ತಿರುವ ಚುನಾವಣೆ; ಇಂದು ಮಂತ್ರಿಮಂಡಲದ ಸಭೆ ಕರೆದ ಪ್ರಧಾನಿ ಮೋದಿ

ಭಾರತದಲ್ಲಿ ಸದ್ಯ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ 600ರ ಗಡಿ ದಾಟಿದೆ. ಈ ತಳಿ ಡೆಲ್ಟಾಕ್ಕಿಂತಲೂ ಮೂರು ಪಟ್ಟು ವೇಗವಾಗಿ ಹರಡುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಅದರಂತೆ ದೇಶದಲ್ಲಿ ಕೂಡ ಸೋಂಕು ವೇಗವಾಗಿ ಹರಡುತ್ತಿದೆ.

ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್​, ಸಮೀಪಿಸುತ್ತಿರುವ ಚುನಾವಣೆ; ಇಂದು ಮಂತ್ರಿಮಂಡಲದ ಸಭೆ ಕರೆದ ಪ್ರಧಾನಿ ಮೋದಿ
ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on: Dec 29, 2021 | 12:06 PM

ದೇಶದಲ್ಲಿ ಒಮಿಕ್ರಾನ್​ ಆತಂಕ (Omicron) ಹೆಚ್ಚುತ್ತಿರುವ ಬೆನ್ನಲ್ಲೇ ಇಂದು ಸಂಜೆ 4ಗಂಟೆಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರು ಕೇಂದ್ರ ಮಂತ್ರಿ ಮಂಡಲದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಎಲ್ಲ ಕೇಂದ್ರ ಸಚಿವರೂ ಪಾಲ್ಗೊಳ್ಳುತ್ತಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಹಾಗೇ, ಒಮಿಕ್ರಾನ್​, ಕೊರೊನಾ ಸೋಂಕಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುವ ಜತೆಗೆ, ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ, ಪಂಜಾಬ್​ ಚುನಾವಣೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ಕಳೆದ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಮಟ್ಟದ ಸಭೆ ನಡೆಸಿ, ಕೊರೊನಾ ಸಾಂಕ್ರಾಮಿಕ, ರಾಜ್ಯದಲ್ಲಿ ಕೊವಿಡ್​ 19 ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಮಾಹಿತಿ ಪಡೆದಿದ್ದರು.  

ಭಾರತದಲ್ಲಿ ಸದ್ಯ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ 600ರ ಗಡಿ ದಾಟಿದೆ. ಈ ತಳಿ ಡೆಲ್ಟಾಕ್ಕಿಂತಲೂ ಮೂರು ಪಟ್ಟು ವೇಗವಾಗಿ ಹರಡುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಅದರಂತೆ ದೇಶದಲ್ಲಿ ಕೂಡ ಸೋಂಕು ವೇಗವಾಹಿ ಹರಡುತ್ತಿದೆ. ಈ ಮಧ್ಯೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್ ಅವರು, ವಾರ್​ರೂಂಗಳನ್ನು ಮತ್ತೆ ಸಕ್ರಿಯಗೊಳಿಸಿ, ನೈಟ್​ ಕರ್ಫ್ಯೂದಂಥ ನಿರ್ಬಂಧಗಳನ್ನು ಹೇರಿ ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಸೂಚಿಸಿದ್ದಾರೆ.

ಬುಧವಾರದ ಹೊತ್ತಿಗೆ ಭಾರತದಲ್ಲಿ 781 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ದೆಹಲಿಯಲ್ಲಿ 238, ಮಹಾರಾಷ್ಟ್ರದಲ್ಲಿ 167, ಗುಜರಾತ್​ 73, ಕೇರಳದಲ್ಲಿ 65, ತೆಲಂಗಾಣ 62, ರಾಜಸ್ಥಾನದಲ್ಲಿ 46, ಕರ್ನಾಟಕದ 34, ತಮಿಳುನಾಡು 36 ಮತ್ತು ಹರ್ಯಾಣದಲ್ಲಿ 12 ಕೇಸ್​ಗಳಿವೆ.  ಈ ಮಧ್ಯೆ ದೇಶದಲ್ಲಿ ಜನವರಿ 10ರಿಂದ ಆರೋಗ್ಯ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಬೂಸ್ಟರ್​ ಡೋಸ್ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಹಾಗೇ, ಜನವರಿ 3ರಿಂದ 15-18ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ ನೀಡಿಕೆಯೂ ಪ್ರಾರಂಭಗೊಳ್ಳಲಿದೆ. ಅದರಲ್ಲೂ ದೆಹಲಿಯಲ್ಲೀಗ ಒಮಿಕ್ರಾನ್​ ವಿಪರೀತವಾಗಿದ್ದು, ಅಲ್ಲಿ ನೈಟ್ ಕರ್ಫ್ಯೂ ಹೇರಲಾಗಿದೆ. ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ: Bihar: ಬೆಂಕಿಯಿಂದ ಹೊತ್ತಿ ಉರಿದ ಮನೆ; 5 ಮಕ್ಕಳು ಸಜೀವ ದಹನ, ಪ್ರತಿ ವಸ್ತುವೂ ಸುಟ್ಟು ಭಸ್ಮ

ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್