ಕೊರೊನಾ ಲಸಿಕೆ ನೀಡಿಕೆಯಲ್ಲಿ ಹಿಂದುಳಿದ ಜಿಲ್ಲೆಗಳ ಮೇಲೆ ಪ್ರಧಾನಿ ಮೋದಿ ಕಣ್ಣು; ನವೆಂಬರ್​ 3ರಂದು ಪರಿಶೀಲನಾ ಸಭೆ

ಜಾರ್ಖಂಡ, ಮಣಿಪುರ, ನಾಗಾಲ್ಯಾಂಡ್​​, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಮೇಘಾಲಯ ಸೇರಿ ಒಟ್ಟು 11  ರಾಜ್ಯಗಳಿಂದ  40 ಜಿಲ್ಲೆಗಳ ಜಿಲ್ಲಾಧಿಕಾರಿಗಳು ನ.3ರಂದು ನರೇಂದ್ರ ಮೋದಿಯವರೊಂದಿಗೆ ಸಂವಾದದಲ್ಲಿ ಪಾಲ್ಗೊಳ್ಳುವರು.

ಕೊರೊನಾ ಲಸಿಕೆ ನೀಡಿಕೆಯಲ್ಲಿ ಹಿಂದುಳಿದ ಜಿಲ್ಲೆಗಳ  ಮೇಲೆ ಪ್ರಧಾನಿ ಮೋದಿ ಕಣ್ಣು; ನವೆಂಬರ್​ 3ರಂದು ಪರಿಶೀಲನಾ ಸಭೆ
ನರೇಂದ್ರ ಮೋದಿ
Follow us
| Updated By: Lakshmi Hegde

Updated on: Oct 31, 2021 | 5:21 PM

ದೆಹಲಿ: ಕೊರೊನಾ ಲಸಿಕೆ ಅಭಿಯಾನ (Corona Vaccine Drive) ಒಂದೆಡೆ ಭರದಿಂದ ಸಾಗುತ್ತಿದೆ. ಆದರೆ ಕೆಲವು ರಾಜ್ಯಗಳ ಒಂದಷ್ಟು ಜಿಲ್ಲೆಗಳಲ್ಲಿ ಇನ್ನೂ  ಲಸಿಕೆ ನೀಡಿಕೆ ಕಡಿಮೆ ಪ್ರಮಾಣದಲ್ಲೇ ಇದೆ. ಅಂದರೆ  ಇಷ್ಟು ದಿನಗಳಾದರೂ ಕೊರೊನಾ ಲಸಿಕೆ ಅಭಿಯಾನ ಅಂದುಕೊಂಡಷ್ಟರ ಮಟ್ಟಿಗೆ ವೇಗ ಪಡೆದಿಲ್ಲ. ಇದೀಗ ಇಂಥ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್​ 3ರಂದು ವರ್ಚ್ಯುವಲ್​ ಸಭೆ ನಡೆಸಲಿದ್ದಾರೆ. ಆಯಾ ಜಿಲ್ಲೆಗಳ ಲಸಿಕೆ ವೇಗ, ಪ್ರಮಾಣ ಮತ್ತು ಹಿಂದುಳಿಯಲು ಕಾರಣವೇನು ಎಂಬ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.  

ಪ್ರಧಾನಿ ನರೇಂದ್ರ ಮೋದಿ ಸದ್ಯ ರೋಮ್​ ಪ್ರವಾಸದಲ್ಲಿದ್ದಾರೆ. ಅಲ್ಲಿ ಇಂದು ಜಿ20 ಶೃಂಗಸಭೆಯ ಎರಡನೇ ಸೆಷನ್ಸ್​​​ನಲ್ಲಿ ಪಾಲ್ಗೊಂಡ ಬಳಿಕ ಇಂಗ್ಲೆಂಡ್​ಗೆ ತೆರಳಿ ಅಲ್ಲಿ COP26 ಶೃಂಗಸಭೆಯಲ್ಲಿ ಭಾಗವಹಿಸುವರು. ನಂತರ ಭಾರತಕ್ಕೆ ವಾಪಸ್​ ಬಂದು ನವೆಂಬರ್​ 3ರಂದು ಮಧ್ಯಾಹ್ನ 12ಗಂಟೆಗೆ ವರ್ಚ್ಯುವಲ್​ ಸಭೆ ನಡೆಸಲಿದ್ದಾರೆ. ಇದುವರೆಗೆ ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಲಸಿಕೆ ನೀಡಿಕೆಯಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಂವಾದ ನಡೆಸಲಿದ್ದಾರೆ.

ಜಾರ್ಖಂಡ, ಮಣಿಪುರ, ನಾಗಾಲ್ಯಾಂಡ್​​, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಮೇಘಾಲಯ ಸೇರಿ ಒಟ್ಟು 11  ರಾಜ್ಯಗಳಿಂದ  40 ಜಿಲ್ಲೆಗಳ ಜಿಲ್ಲಾಧಿಕಾರಿಗಳು ನ.3ರಂದು ನರೇಂದ್ರ ಮೋದಿಯವರೊಂದಿಗೆ ಸಂವಾದದಲ್ಲಿ ಪಾಲ್ಗೊಳ್ಳುವರು. ಆಯಾ ರಾಜ್ಯಗಳ ಮುಖ್ಯಮಂತ್ರಿಗಳೂ ಭಾಗವಹಿಸುವರು. ಈ ವರ್ಚ್ಯುವಲ್​ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಇಲಾಖೆಯ ಹಿರಿಯ ಅಧಿಕಾರಿಗಳೂ ಇರಲಿದ್ದಾರೆ.

ದೇಶದಲ್ಲಿ ಒಟ್ಟಾರೆ ಕೊರೊನಾ ಲಸಿಕೆ ನೀಡಿಕೆ 106 ಕೋಟಿ ಡೋಸ್​ ದಾಟಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಇನ್ನೂ ಶೇ.50ನ್ನೂ ದಾಟಿಲ್ಲ. ನಮ್ಮ ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಜನವರಿ 16ರಂದು ಶುರುವಾಗಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ನೀಡಲಾಯಿತು. ಅದಾದ ಬಳಿಕ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟು, ಇತರ ಆರೋಗ್ಯ ಸಮಸ್ಯೆ ಇರುವವರಿಗೆ ನೀಡಲಾಯಿತು. ಇದೀಗ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಶೇ.31ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆ ನೀಡಿ ಮುಗಿದಿದೆ. ಇನ್ನು ಶೇ.75ರಷ್ಟು ಜನರು ಒಂದು ಡೋಸ್​ ಕೊರೊನಾ ಲಸಿಕೆ ಪಡೆದಿದ್ದಾರೆ.

ಇದನ್ನೂ ಓದಿ:  ಅಡೆನ್​ನಲ್ಲಿ ಮತ್ತೆ ಸ್ಫೋಟ, 6 ಮಂದಿ ಸಾವು; ಈ ಬಾರಿ ಏರ್​​ಪೋರ್ಟ್​​ನಲ್ಲಿ ನಡೆದ ದುರಂತ

ಬಿಜೆಪಿ ಸೇರಿ ದೊಡ್ಡ ತಪ್ಪು ಮಾಡಿದೆ ಎನ್ನುತ್ತ ಮರಳಿ ಟಿಎಂಸಿಗೆ ಬಂದ ರಾಜೀವ್ ಬ್ಯಾನರ್ಜಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್