AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರನ್ನು ಕ್ರೀಡೆಗೆ ಪ್ರೋತ್ಸಾಹಿಸುವ 2ನೇ ಹಂತದ ಸಂಸದ್ ಖೇಲ್ ಮಹಾಕುಂಭಕ್ಕಿಂದು ಬಸ್ತಿಯಲ್ಲಿ ಪ್ರಧಾನಿ ಮೋದಿ ಚಾಲನೆ

Saansad Khel Mahakumbh: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಸಂಸದ್ ಖೇಲ್ ಮಹಾಕುಂಭದ ಎರಡನೇ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.

ಯುವಕರನ್ನು ಕ್ರೀಡೆಗೆ ಪ್ರೋತ್ಸಾಹಿಸುವ 2ನೇ ಹಂತದ ಸಂಸದ್ ಖೇಲ್ ಮಹಾಕುಂಭಕ್ಕಿಂದು ಬಸ್ತಿಯಲ್ಲಿ ಪ್ರಧಾನಿ ಮೋದಿ ಚಾಲನೆ
ಸಂಸದ್ ಖೇಲ್ ಮಹಾಕುಂಭ
TV9 Web
| Updated By: ಆಯೇಷಾ ಬಾನು|

Updated on:Jan 18, 2023 | 7:08 AM

Share

ದೆಹಲಿ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ದೇಶದ ಅತೀ ದೊಡ್ಡ ಸಂಸದ್ ಖೇಲ್ ಮಹಾಕುಂಭದ(Saansad Khel Mahakumbh) ಎರಡನೇ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಬುಧವಾರ ಚಾಲನೆ ನೀಡಲಿದ್ದಾರೆ. ‘ಖೇಲ್ ಮಹಾಕುಂಭ’ ಒಂದು ವಿನೂತನ ಕ್ರೀಡಾಹಬ್ಬವಾಗಿದ್ದು, ಇದು ಬಸ್ತಿ ಮತ್ತು ನೆರೆಯ ಪ್ರದೇಶಗಳ ಯುವಕರಿಗೆ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸುವ ವೇದಿಕೆಯಾಗಿದೆ. ಮತ್ತು ಕ್ರೀಡೆಯನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಯುವಕರನ್ನು ಪ್ರೇರೇಪಿಸುತ್ತದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯವು ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಬಸ್ತಿ ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿರುವ ‘ಸಂಸದ್ ಖೇಲ್ ಮಹಾಕುಂಭ 2022-23’ ರ ಎರಡನೇ ಹಂತವನ್ನು ಪ್ರಧಾನಿ ಮೋದಿ ಅವರು ಜನವರಿ 18ರಂದು ಮಧ್ಯಾಹ್ನ 1 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಬಸ್ತಿ ಜಿಲ್ಲೆಯಲ್ಲಿ ‘ಸಂಸದ್ ಖೇಲ್ ಮಹಾಕುಂಭ’ವನ್ನು 2021 ರಿಂದ ಬಸ್ತಿಯ ಲೋಕಸಭಾ ಸಂಸದ ಹರೀಶ್ ದ್ವಿವೇದಿ ಅವರು ಆಯೋಜಿಸುತ್ತಾ ಬಂದಿದ್ದಾರೆ.

‘ಸಂಸದ್ ಖೇಲ್ ಮಹಾಕುಂಭ 2022-23’ ಅನ್ನು ಎರಡು ಹಂತಗಳಲ್ಲಿ ಆಯೋಜಿಸಲಾಗುತ್ತಿದೆ. ಮೊದಲ ಹಂತವನ್ನು ಕಳೆದ ವರ್ಷ ಅಂದರೆ 2022ರ ಡಿಸೆಂಬರ್ 10 ರಿಂದ 16 ರವರೆಗೆ ಆಯೋಜಿಸಲಾಗಿತ್ತು. ಮತ್ತು ಎರಡನೇ ಹಂತವು 2023ರ ಜನವರಿ 18 ರಿಂದ 28 ರವರೆಗೆ ಆಯೋಜಿಸಲಾಗಿದೆ.

ಇದನ್ನೂ ಓದಿ: ಒಲಂಪಿಕ್ಸ್​ನಲ್ಲಿ ಎರಡು ಬಾರಿ ಪದಕ ಗೆದ್ದ ವಿಶ್ವ ಚಾಂಪಿಯನ್ ರೆಸ್ಲರ್ ಸುಶೀಲ್ ಕುಮಾರ್ ಕೊಲೆ ಆರೋಪ ಹೊತ್ತು ತಲೆಮರೆಸಿಕೊಂಡಿರುವುದು ದುರಂತ

ಖೇಲ್ ಮಹಾಕುಂಭವು ಯುವಜನತೆಗೆ ಕುಸ್ತಿ, ಕಬಡ್ಡಿ, ಖೋ ಖೋ, ಬಾಸ್ಕೆಟ್‌ಬಾಲ್, ಫುಟ್‌ಬಾಲ್, ಹಾಕಿ, ವಾಲಿಬಾಲ್, ಹ್ಯಾಂಡ್‌ಬಾಲ್, ಚೆಸ್, ಕೇರಂ, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಮುಂತಾದ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಲ್ಲಿ ವೈವಿಧ್ಯಮಯ ಸ್ಪರ್ಧೆಗಳಲ್ಲಿ ಭಾಗಿಯಾಗಲು ಸಹಾಯಕವಾಗಿದೆ. ಇವುಗಳಲ್ಲದೆ ಪ್ರಬಂಧ ಬರವಣಿಗೆ, ಚಿತ್ರಕಲೆ, ರಂಗೋಲಿ ಹಾಕುವುದು ಇತ್ಯಾದಿ ಸ್ಪರ್ಧೆಗಳನ್ನೂ ಈ ಖೇಲ್ ಮಹಾಕುಂಭದಲ್ಲಿ ಆಯೋಜಿಸಲಾಗುತ್ತದೆ. ಇದು ದೇಶದ ಯುವಕರಲ್ಲಿ ಶಿಸ್ತು, ತಂಡದಲ್ಲಿ ಕೆಲಸ ಮಾಡುವುದು, ಆರೋಗ್ಯಕರ ಸ್ಪರ್ಧೆ, ಆತ್ಮ ವಿಶ್ವಾಸ ಮತ್ತು ರಾಷ್ಟ್ರೀಯತೆಯ ಮನೋಭಾವವನ್ನು ಬೆಳೆಸಲು ಸಹಾಯಕವಾಗಿದೆ ಎಂದು ಸರ್ಕಾರದಿಂದ ಹೊರಡಿಸಲಾದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:08 am, Wed, 18 January 23

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ