AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಇನ್​ಸ್ಟಿಟ್ಯೂಟ್​​ನಲ್ಲಿ ಇನ್ಫೋಸಿಸ್​​​ ಫೌಂಡೇಶನ್​​ ನಿರ್ಮಿಸಿರುವ 806 ಬೆಡ್​​ಗಳ ವಿಶ್ರಾಮ ಸದನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಕ್ಯಾನ್ಸರ್​ ರೋಗಿಗಳ ಆರೈಕೆಗಾಗಿ ಅವರೊಟ್ಟಿಗೆ ಆಸ್ಪತ್ರೆಗೆ ಬಂದು ಉಳಿಯುವವರ ಅನುಕೂಲಕ್ಕಾಗಿ ಈ 806 ಬೆಡ್​​ಗಳ ವಿಶ್ರಾಮ ಸದನನ್ನು ಇನ್ಫೋಸಿಸ್​ ನಿರ್ಮಿಸಿದೆ. ಇದು ಸಂಪೂರ್ಣ ಹವಾನಿಯಂತ್ರಿತವಾಗಿದೆ.

ಕ್ಯಾನ್ಸರ್​ ಇನ್​ಸ್ಟಿಟ್ಯೂಟ್​​ನಲ್ಲಿ ಇನ್ಫೋಸಿಸ್​​​ ಫೌಂಡೇಶನ್​​ ನಿರ್ಮಿಸಿರುವ 806 ಬೆಡ್​​ಗಳ ವಿಶ್ರಾಮ ಸದನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಇನ್ಫೋಸಿಸ್​ ಪ್ರತಿಷ್ಠಾನದ ವಿಶ್ರಾಮ ಸದನ ಉದ್ಘಾಟಿಸಿದ ಪ್ರಧಾನಿ ಮೋದಿ
TV9 Web
| Edited By: |

Updated on: Oct 21, 2021 | 11:06 AM

Share

ದೆಹಲಿಯ ಏಮ್ಸ್​​ನ ಝಜರ್​ ಕ್ಯಾಂಪಸ್​​​ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್​ ಸಂಸ್ಥೆ (National Cancer Institute(NCI)ಯಲ್ಲಿ ಇನ್ಫೋಸಿಸ್​ ಫೌಂಡೇಶನ್​​​ನಿಂದ ನಿರ್ಮಾಣವಾಗಿರುವ 806 ಬೆಡ್​​ಗಳ ವಿಶ್ರಾಮ ಸದನವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಉದ್ಘಾಟಿಸಿದರು.  ಈ 806 ಬೆಡ್​​ಗಳ ವಿಶ್ರಾಮ ಸದನವನ್ನು ಇನ್ಫೋಸಿಸ್​ ಪ್ರತಿಷ್ಠಾನ ಅದರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (Corporate Social Responsibility (CSR) ಉಪಕ್ರಮದ ಒಂದು ಭಾಗವಾಗಿ ನಿರ್ಮಾಣ ಮಾಡಿದೆ. 

ಕ್ಯಾನ್ಸರ್​ ರೋಗಿಗಳು ಬಹುಕಾಲದವರೆಗೆ ಆಸ್ಪತ್ರೆಯಲ್ಲಿ ಉಳಿಯಬೇಕಾಗುತ್ತದೆ. ಹಾಗೇ, ಅವರನ್ನು ನೋಡಿಕೊಳ್ಳಲು ಜತೆಗೆ ಬರುವವರೂ ಕೂಡ ಅಷ್ಟೂ ದಿನಗಳ ಕಾಲ ಅಲ್ಲಿಯೇ ಇರಬೇಕಾಗುತ್ತದೆ. ಹೀಗೆ ಕ್ಯಾನ್ಸರ್​ ರೋಗಿಗಳ ಆರೈಕೆಗಾಗಿ ಅವರೊಟ್ಟಿಗೆ ಆಸ್ಪತ್ರೆಗೆ ಬಂದು ಉಳಿಯುವವರ ಅನುಕೂಲಕ್ಕಾಗಿ ಈ 806 ಬೆಡ್​​ಗಳ ವಿಶ್ರಾಮ ಸದನನ್ನು ಇನ್ಫೋಸಿಸ್​ ನಿರ್ಮಿಸಿದೆ. ಇದು ಸಂಪೂರ್ಣ ಹವಾನಿಯಂತ್ರಿತವಾಗಿದ್ದು, ಇನ್ಫೋಸಿಸ್​ ಫೌಂಡೇಶನ್​ ಇದನ್ನು 93 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದೆ. ಇಂದು ನಡೆದ ಉದ್ಘಾಟನೆ ಕಾರ್ಯಕ್ರಮದಲ್ಲಿ ಇನ್ಫೋಸಿಸ್​ ಫೌಂಡೇಶನ್​ ಮುಖ್ಯಸ್ಥೆ ಸುಧಾಮೂರ್ತಿ, ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಹರ್ಯಾಣ ಮುಖ್ಯಮಂತ್ರಿ ಮನೋಹರ್​ ಲಾಲ್ ಖಟ್ಟರ್​ ಇತರರು ಇದ್ದರು. ಪ್ರಾರಂಭದಲ್ಲಿ ಸುಧಾಮೂರ್ತಿ ಸ್ವಾಗತ ಭಾಷಣ ಮಾಡಿದರು. ನಂತರ ಮಾತನಾಡಿದ ಮನ್​ಸುಖ್​ ಮಾಂಡವಿಯಾ, ಕೊವಿಡ್​ 19 ಲಸಿಕೆ ಅಭಿಯಾನದಲ್ಲಿ ಭಾರತ 100 ಕೋಟಿ ಡೋಸ್​ ನೀಡಿಕೆ ದಾಖಲೆ ಮಾಡಿದ್ದನ್ನು ಉಲ್ಲೇಖಿಸಿ ಮಾತನಾಡಿದರು.

ಏಮ್ಸ್​ನ ಜಝರ್​ (ಹರ್ಯಾಣ) ಆವರಣದಲ್ಲಿ ಇರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ ದೆಹಲಿಯಲ್ಲಿರುವ ಏಮ್ಸ್​ನ ಒಂದು ಭಾಗವೇ ಆಗಿದೆ.   ಇಲ್ಲಿ 710 ಬೆಡ್​ಗಳಿದ್ದು ಕ್ಯಾನ್ಸರ್​ ರೋಗಿಗಳ ಚಿಕಿತ್ಸೆ, ನಿಯಂತ್ರಣ, ಸಂಶೋಧನೆ ಮತ್ತು ಶಿಕ್ಷಣಕ್ಕಾಗಿ ಮೀಸಲಿಡಲಾಗಿದೆ.

ಇದನ್ನೂ ಓದಿ: ಇವರೇ ಟಿ20 ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡ: ಪಾಕ್ ಮಾಜಿ ನಾಯಕನ ಅಚ್ಚರಿಯ ಹೇಳಿಕೆ

Shah Rukh Khan: ಕೊನೆಗೂ ‘ಮನ್ನತ್​’ನಿಂದ ಹೊರಬಂದ ಶಾರುಖ್; ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿಯಾದ ನಟ

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ