Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಇನ್​ಸ್ಟಿಟ್ಯೂಟ್​​ನಲ್ಲಿ ಇನ್ಫೋಸಿಸ್​​​ ಫೌಂಡೇಶನ್​​ ನಿರ್ಮಿಸಿರುವ 806 ಬೆಡ್​​ಗಳ ವಿಶ್ರಾಮ ಸದನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಕ್ಯಾನ್ಸರ್​ ರೋಗಿಗಳ ಆರೈಕೆಗಾಗಿ ಅವರೊಟ್ಟಿಗೆ ಆಸ್ಪತ್ರೆಗೆ ಬಂದು ಉಳಿಯುವವರ ಅನುಕೂಲಕ್ಕಾಗಿ ಈ 806 ಬೆಡ್​​ಗಳ ವಿಶ್ರಾಮ ಸದನನ್ನು ಇನ್ಫೋಸಿಸ್​ ನಿರ್ಮಿಸಿದೆ. ಇದು ಸಂಪೂರ್ಣ ಹವಾನಿಯಂತ್ರಿತವಾಗಿದೆ.

ಕ್ಯಾನ್ಸರ್​ ಇನ್​ಸ್ಟಿಟ್ಯೂಟ್​​ನಲ್ಲಿ ಇನ್ಫೋಸಿಸ್​​​ ಫೌಂಡೇಶನ್​​ ನಿರ್ಮಿಸಿರುವ 806 ಬೆಡ್​​ಗಳ ವಿಶ್ರಾಮ ಸದನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಇನ್ಫೋಸಿಸ್​ ಪ್ರತಿಷ್ಠಾನದ ವಿಶ್ರಾಮ ಸದನ ಉದ್ಘಾಟಿಸಿದ ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on: Oct 21, 2021 | 11:06 AM

ದೆಹಲಿಯ ಏಮ್ಸ್​​ನ ಝಜರ್​ ಕ್ಯಾಂಪಸ್​​​ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್​ ಸಂಸ್ಥೆ (National Cancer Institute(NCI)ಯಲ್ಲಿ ಇನ್ಫೋಸಿಸ್​ ಫೌಂಡೇಶನ್​​​ನಿಂದ ನಿರ್ಮಾಣವಾಗಿರುವ 806 ಬೆಡ್​​ಗಳ ವಿಶ್ರಾಮ ಸದನವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಉದ್ಘಾಟಿಸಿದರು.  ಈ 806 ಬೆಡ್​​ಗಳ ವಿಶ್ರಾಮ ಸದನವನ್ನು ಇನ್ಫೋಸಿಸ್​ ಪ್ರತಿಷ್ಠಾನ ಅದರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (Corporate Social Responsibility (CSR) ಉಪಕ್ರಮದ ಒಂದು ಭಾಗವಾಗಿ ನಿರ್ಮಾಣ ಮಾಡಿದೆ. 

ಕ್ಯಾನ್ಸರ್​ ರೋಗಿಗಳು ಬಹುಕಾಲದವರೆಗೆ ಆಸ್ಪತ್ರೆಯಲ್ಲಿ ಉಳಿಯಬೇಕಾಗುತ್ತದೆ. ಹಾಗೇ, ಅವರನ್ನು ನೋಡಿಕೊಳ್ಳಲು ಜತೆಗೆ ಬರುವವರೂ ಕೂಡ ಅಷ್ಟೂ ದಿನಗಳ ಕಾಲ ಅಲ್ಲಿಯೇ ಇರಬೇಕಾಗುತ್ತದೆ. ಹೀಗೆ ಕ್ಯಾನ್ಸರ್​ ರೋಗಿಗಳ ಆರೈಕೆಗಾಗಿ ಅವರೊಟ್ಟಿಗೆ ಆಸ್ಪತ್ರೆಗೆ ಬಂದು ಉಳಿಯುವವರ ಅನುಕೂಲಕ್ಕಾಗಿ ಈ 806 ಬೆಡ್​​ಗಳ ವಿಶ್ರಾಮ ಸದನನ್ನು ಇನ್ಫೋಸಿಸ್​ ನಿರ್ಮಿಸಿದೆ. ಇದು ಸಂಪೂರ್ಣ ಹವಾನಿಯಂತ್ರಿತವಾಗಿದ್ದು, ಇನ್ಫೋಸಿಸ್​ ಫೌಂಡೇಶನ್​ ಇದನ್ನು 93 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದೆ. ಇಂದು ನಡೆದ ಉದ್ಘಾಟನೆ ಕಾರ್ಯಕ್ರಮದಲ್ಲಿ ಇನ್ಫೋಸಿಸ್​ ಫೌಂಡೇಶನ್​ ಮುಖ್ಯಸ್ಥೆ ಸುಧಾಮೂರ್ತಿ, ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಹರ್ಯಾಣ ಮುಖ್ಯಮಂತ್ರಿ ಮನೋಹರ್​ ಲಾಲ್ ಖಟ್ಟರ್​ ಇತರರು ಇದ್ದರು. ಪ್ರಾರಂಭದಲ್ಲಿ ಸುಧಾಮೂರ್ತಿ ಸ್ವಾಗತ ಭಾಷಣ ಮಾಡಿದರು. ನಂತರ ಮಾತನಾಡಿದ ಮನ್​ಸುಖ್​ ಮಾಂಡವಿಯಾ, ಕೊವಿಡ್​ 19 ಲಸಿಕೆ ಅಭಿಯಾನದಲ್ಲಿ ಭಾರತ 100 ಕೋಟಿ ಡೋಸ್​ ನೀಡಿಕೆ ದಾಖಲೆ ಮಾಡಿದ್ದನ್ನು ಉಲ್ಲೇಖಿಸಿ ಮಾತನಾಡಿದರು.

ಏಮ್ಸ್​ನ ಜಝರ್​ (ಹರ್ಯಾಣ) ಆವರಣದಲ್ಲಿ ಇರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ ದೆಹಲಿಯಲ್ಲಿರುವ ಏಮ್ಸ್​ನ ಒಂದು ಭಾಗವೇ ಆಗಿದೆ.   ಇಲ್ಲಿ 710 ಬೆಡ್​ಗಳಿದ್ದು ಕ್ಯಾನ್ಸರ್​ ರೋಗಿಗಳ ಚಿಕಿತ್ಸೆ, ನಿಯಂತ್ರಣ, ಸಂಶೋಧನೆ ಮತ್ತು ಶಿಕ್ಷಣಕ್ಕಾಗಿ ಮೀಸಲಿಡಲಾಗಿದೆ.

ಇದನ್ನೂ ಓದಿ: ಇವರೇ ಟಿ20 ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡ: ಪಾಕ್ ಮಾಜಿ ನಾಯಕನ ಅಚ್ಚರಿಯ ಹೇಳಿಕೆ

Shah Rukh Khan: ಕೊನೆಗೂ ‘ಮನ್ನತ್​’ನಿಂದ ಹೊರಬಂದ ಶಾರುಖ್; ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿಯಾದ ನಟ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು