ಕ್ಯಾನ್ಸರ್​ ಇನ್​ಸ್ಟಿಟ್ಯೂಟ್​​ನಲ್ಲಿ ಇನ್ಫೋಸಿಸ್​​​ ಫೌಂಡೇಶನ್​​ ನಿರ್ಮಿಸಿರುವ 806 ಬೆಡ್​​ಗಳ ವಿಶ್ರಾಮ ಸದನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಕ್ಯಾನ್ಸರ್​ ರೋಗಿಗಳ ಆರೈಕೆಗಾಗಿ ಅವರೊಟ್ಟಿಗೆ ಆಸ್ಪತ್ರೆಗೆ ಬಂದು ಉಳಿಯುವವರ ಅನುಕೂಲಕ್ಕಾಗಿ ಈ 806 ಬೆಡ್​​ಗಳ ವಿಶ್ರಾಮ ಸದನನ್ನು ಇನ್ಫೋಸಿಸ್​ ನಿರ್ಮಿಸಿದೆ. ಇದು ಸಂಪೂರ್ಣ ಹವಾನಿಯಂತ್ರಿತವಾಗಿದೆ.

ಕ್ಯಾನ್ಸರ್​ ಇನ್​ಸ್ಟಿಟ್ಯೂಟ್​​ನಲ್ಲಿ ಇನ್ಫೋಸಿಸ್​​​ ಫೌಂಡೇಶನ್​​ ನಿರ್ಮಿಸಿರುವ 806 ಬೆಡ್​​ಗಳ ವಿಶ್ರಾಮ ಸದನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಇನ್ಫೋಸಿಸ್​ ಪ್ರತಿಷ್ಠಾನದ ವಿಶ್ರಾಮ ಸದನ ಉದ್ಘಾಟಿಸಿದ ಪ್ರಧಾನಿ ಮೋದಿ
Follow us
| Updated By: Lakshmi Hegde

Updated on: Oct 21, 2021 | 11:06 AM

ದೆಹಲಿಯ ಏಮ್ಸ್​​ನ ಝಜರ್​ ಕ್ಯಾಂಪಸ್​​​ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್​ ಸಂಸ್ಥೆ (National Cancer Institute(NCI)ಯಲ್ಲಿ ಇನ್ಫೋಸಿಸ್​ ಫೌಂಡೇಶನ್​​​ನಿಂದ ನಿರ್ಮಾಣವಾಗಿರುವ 806 ಬೆಡ್​​ಗಳ ವಿಶ್ರಾಮ ಸದನವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಉದ್ಘಾಟಿಸಿದರು.  ಈ 806 ಬೆಡ್​​ಗಳ ವಿಶ್ರಾಮ ಸದನವನ್ನು ಇನ್ಫೋಸಿಸ್​ ಪ್ರತಿಷ್ಠಾನ ಅದರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (Corporate Social Responsibility (CSR) ಉಪಕ್ರಮದ ಒಂದು ಭಾಗವಾಗಿ ನಿರ್ಮಾಣ ಮಾಡಿದೆ. 

ಕ್ಯಾನ್ಸರ್​ ರೋಗಿಗಳು ಬಹುಕಾಲದವರೆಗೆ ಆಸ್ಪತ್ರೆಯಲ್ಲಿ ಉಳಿಯಬೇಕಾಗುತ್ತದೆ. ಹಾಗೇ, ಅವರನ್ನು ನೋಡಿಕೊಳ್ಳಲು ಜತೆಗೆ ಬರುವವರೂ ಕೂಡ ಅಷ್ಟೂ ದಿನಗಳ ಕಾಲ ಅಲ್ಲಿಯೇ ಇರಬೇಕಾಗುತ್ತದೆ. ಹೀಗೆ ಕ್ಯಾನ್ಸರ್​ ರೋಗಿಗಳ ಆರೈಕೆಗಾಗಿ ಅವರೊಟ್ಟಿಗೆ ಆಸ್ಪತ್ರೆಗೆ ಬಂದು ಉಳಿಯುವವರ ಅನುಕೂಲಕ್ಕಾಗಿ ಈ 806 ಬೆಡ್​​ಗಳ ವಿಶ್ರಾಮ ಸದನನ್ನು ಇನ್ಫೋಸಿಸ್​ ನಿರ್ಮಿಸಿದೆ. ಇದು ಸಂಪೂರ್ಣ ಹವಾನಿಯಂತ್ರಿತವಾಗಿದ್ದು, ಇನ್ಫೋಸಿಸ್​ ಫೌಂಡೇಶನ್​ ಇದನ್ನು 93 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದೆ. ಇಂದು ನಡೆದ ಉದ್ಘಾಟನೆ ಕಾರ್ಯಕ್ರಮದಲ್ಲಿ ಇನ್ಫೋಸಿಸ್​ ಫೌಂಡೇಶನ್​ ಮುಖ್ಯಸ್ಥೆ ಸುಧಾಮೂರ್ತಿ, ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಹರ್ಯಾಣ ಮುಖ್ಯಮಂತ್ರಿ ಮನೋಹರ್​ ಲಾಲ್ ಖಟ್ಟರ್​ ಇತರರು ಇದ್ದರು. ಪ್ರಾರಂಭದಲ್ಲಿ ಸುಧಾಮೂರ್ತಿ ಸ್ವಾಗತ ಭಾಷಣ ಮಾಡಿದರು. ನಂತರ ಮಾತನಾಡಿದ ಮನ್​ಸುಖ್​ ಮಾಂಡವಿಯಾ, ಕೊವಿಡ್​ 19 ಲಸಿಕೆ ಅಭಿಯಾನದಲ್ಲಿ ಭಾರತ 100 ಕೋಟಿ ಡೋಸ್​ ನೀಡಿಕೆ ದಾಖಲೆ ಮಾಡಿದ್ದನ್ನು ಉಲ್ಲೇಖಿಸಿ ಮಾತನಾಡಿದರು.

ಏಮ್ಸ್​ನ ಜಝರ್​ (ಹರ್ಯಾಣ) ಆವರಣದಲ್ಲಿ ಇರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ ದೆಹಲಿಯಲ್ಲಿರುವ ಏಮ್ಸ್​ನ ಒಂದು ಭಾಗವೇ ಆಗಿದೆ.   ಇಲ್ಲಿ 710 ಬೆಡ್​ಗಳಿದ್ದು ಕ್ಯಾನ್ಸರ್​ ರೋಗಿಗಳ ಚಿಕಿತ್ಸೆ, ನಿಯಂತ್ರಣ, ಸಂಶೋಧನೆ ಮತ್ತು ಶಿಕ್ಷಣಕ್ಕಾಗಿ ಮೀಸಲಿಡಲಾಗಿದೆ.

ಇದನ್ನೂ ಓದಿ: ಇವರೇ ಟಿ20 ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡ: ಪಾಕ್ ಮಾಜಿ ನಾಯಕನ ಅಚ್ಚರಿಯ ಹೇಳಿಕೆ

Shah Rukh Khan: ಕೊನೆಗೂ ‘ಮನ್ನತ್​’ನಿಂದ ಹೊರಬಂದ ಶಾರುಖ್; ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿಯಾದ ನಟ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ