ಮುಂಬೈನಲ್ಲಿ ನಾಳೆ 32,800 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 5ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಸಂತ ಸೇವಾಲಾಲ್ ಮಹಾರಾಜ್ ಮತ್ತು ಸಂತ ರಾಮರಾವ್ ಮಹಾರಾಜ್ ಸಮಾಧಿಗಳಿಗೆ ಮೋದಿ ನಮನ ಸಲ್ಲಿಸಲಿದ್ದು, ಈ ಮೂಲಕ ತಮ್ಮ ಭೇಟಿಯ ಸಾಂಸ್ಕೃತಿಕ ಮಹತ್ವ ಸಂದೇಶವನ್ನು ರವಾನಿಸಲಿದ್ದಾರೆ.

ಮುಂಬೈನಲ್ಲಿ ನಾಳೆ 32,800 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ನರೇಂದ್ರ ಮೋದಿ

Updated on: Oct 04, 2024 | 10:18 PM

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಶನಿವಾರ) ಮಹಾರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದು, ವಾಶಿಮ್ ಮತ್ತು ಮುಂಬೈನಲ್ಲಿ ತಮ್ಮ ಸರ್ಕಾರದ ಕೃಷಿ ಅಭಿವೃದ್ಧಿ ಮತ್ತು ನಗರ ಮೂಲಸೌಕರ್ಯಕ್ಕೆ ಒತ್ತು ನೀಡುವ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ವಾಶಿಮ್‌ನಲ್ಲಿ ಅಂದಾಜು 23,300 ಕೋಟಿ ರೂ. ಮೌಲ್ಯದ ಕೃಷಿ ಮತ್ತು ಪಶುಸಂಗೋಪನೆಗೆ ಸಂಬಂಧಿಸಿದ ಯೋಜನೆಗಳನ್ನು ಮೋದಿ ಉದ್ಘಾಟಿಸಲಿದ್ದಾರೆ.

ಬಂಜಾರ ಸಮುದಾಯದ ಶ್ರೀಮಂತ ಪರಂಪರೆಯನ್ನು ಪ್ರದರ್ಶಿಸಲು ಮೀಸಲಾಗಿರುವ ಬಂಜಾರ ವಿರಾಸತ್ ಮ್ಯೂಸಿಯಂನ ಪ್ರಾರಂಭವು ಅವರ ಭೇಟಿಯ ಮುಖ್ಯ ಅಂಶವಾಗಿದೆ. ಬಂಜಾರರು ಪೂಜಿಸುತ್ತಿರುವ ಪೊಹರಾದೇವಿಯ ಜಗದಂಬಾ ಮಾತಾ ದೇವಾಲಯಕ್ಕೆ ಭೇಟಿ ನೀಡುವುದನ್ನು ಪ್ರಧಾನ ಮಂತ್ರಿ ಮೋದಿಯ ಪ್ರವಾಸ ಒಳಗೊಂಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರ, ಜಾತೀಯತೆ, ಸ್ವಜನಪಕ್ಷಪಾತವನ್ನು ಪ್ರತಿನಿಧಿಸುತ್ತದೆ; ಪ್ರಧಾನಿ ಮೋದಿ ಟೀಕೆ

ನಾಳೆ ಮಧ್ಯಾಹ್ನ ಪಿಎಂ ಮೋದಿ ಅವರು ಕೃಷಿ ಕ್ಷೇತ್ರದತ್ತ ಗಮನ ಹರಿಸುತ್ತಾರೆ. ಈ ವೇಳೆ ಅವರು ರೈತರಿಗೆ ಆರ್ಥಿಕ ಬೆಂಬಲ ಯೋಜನೆಯಾದ ಪಿಎಂ-ಕಿಸಾನ್ ಸಮ್ಮಾನ್ ನಿಧಿಯ 18​​ನೇ ಕಂತನ್ನು ವಿತರಿಸುತ್ತಾರೆ. ಸುಮಾರು 20,000 ಕೋಟಿ ರೂ. ಮೌಲ್ಯದ ಈ ಕಂತು ದೇಶಾದ್ಯಂತ ಸುಮಾರು 9.4 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ” ಎಂದು ಸರ್ಕಾರ ತಿಳಿಸಿದೆ.

ಇದರ ಜೊತೆಗೆ, ಪ್ರಧಾನಿಯವರು ನಮೋ ಶೆಟ್ಕರಿ ಮಹಾಸನ್ಮಾನ್ ನಿಧಿ ಯೋಜನೆಯ ಐದನೇ ಕಂತನ್ನು ಪ್ರಾರಂಭಿಸಲಿದ್ದು, ಸರಿಸುಮಾರು 2,000 ಕೋಟಿ ರೂ.ಗಳನ್ನು ವಿತರಿಸಲಿದ್ದಾರೆ. ಕೃಷಿ ಮೂಲಸೌಕರ್ಯ ನಿಧಿಯಡಿ ಒಟ್ಟು 1,920 ಕೋಟಿ ರೂ. ಮೌಲ್ಯದ 7,500ಕ್ಕೂ ಹೆಚ್ಚು ಯೋಜನೆಗಳನ್ನು ಅವರು ದೇಶಕ್ಕೆ ಅರ್ಪಿಸಲಿದ್ದಾರೆ.

ಇದನ್ನೂ ಓದಿ: ಯುದ್ಧದ ನಡುವೆಯೇ ಮೋದಿ ಸರ್ಕಾರ 15,000 ಭಾರತೀಯ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸುತ್ತಿದೆ: ಖರ್ಗೆ

“ಈ ಯೋಜನೆಗಳು ಕಸ್ಟಮ್ ನೇಮಕಾತಿ ಕೇಂದ್ರಗಳು, ಪ್ರಾಥಮಿಕ ಸಂಸ್ಕರಣಾ ಘಟಕಗಳು, ಗೋದಾಮುಗಳು ಮತ್ತು ಕೋಲ್ಡ್ ಸ್ಟೋರೇಜ್ ಸೌಲಭ್ಯಗಳನ್ನು ಒಳಗೊಂಡಿವೆ, ಇವೆಲ್ಲವೂ ನಮ್ಮ ಕೃಷಿ ಮೂಲಸೌಕರ್ಯವನ್ನು ಆಧುನೀಕರಿಸುವ ಗುರಿಯನ್ನು ಹೊಂದಿವೆ” ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ.

ವಾಶಿಮ್‌ಗೆ ಮೋದಿಯವರ ಭೇಟಿಯು 9,200 ರೈತ ಉತ್ಪಾದಕ ಸಂಸ್ಥೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವುದರೊಂದಿಗೆ ಮುಕ್ತಾಯಗೊಳ್ಳಲಿದೆ. ಇದು ಸುಮಾರು 1,300 ಕೋಟಿ ರೂ.ಗಳ ಒಟ್ಟು ವಹಿವಾಟು ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 pm, Fri, 4 October 24

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us