AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ; ಸರ್ಕಾರಗಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಪರಿಶೀಲನೆ

ದೇಶದ ಪ್ರತಿಯೊಬ್ಬ ನಾಗರಿಕನೂಕೂಡ ಉತ್ತಮ ಜೀವನ ನಡೆಸಬೇಕು, ಎಲ್ಲ ವರ್ಗದವನ್ನೂ ಒಳಗೊಂಡು ಬೆಳವಣಿಗೆಯಾಗಬೇಕು ಎಂಬುದು ಕೇಂದ್ರ ಸರ್ಕಾರದ ಸದಾಶಯ ಎಂದು ಪಿಎಂಒ ಮಾಹಿತಿ ನೀಡಿದೆ.

PM Modi: ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ; ಸರ್ಕಾರಗಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಪರಿಶೀಲನೆ
ನರೇಂದ್ರ ಮೋದಿ
TV9 Web
| Edited By: |

Updated on:Jan 22, 2022 | 11:40 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿದ ಅಭಿವೃದ್ಧಿ ಮತ್ತು ಪ್ರಗತಿಗೆ ಸಂಬಂಧಪಟ್ಟ ಯೋಜನೆಗಳು ಆಯಾ ಜಿಲ್ಲೆಗಳ ವ್ಯಾಪ್ತಿಯ ಪ್ರದೇಶದಲ್ಲಿ ಎಷ್ಟರಮಟ್ಟಿಗೆ ಜಾರಿಯಾಗಿವೆ ಎಂಬುದನ್ನು ನೇರವಾಗಿ  ಜಿಲ್ಲಾಧಿಕಾರಿಗಳ ಜತೆಯೇ ಮಾತನಾಡಿ, ಅವರು ತಿಳಿದುಕೊಳ್ಳಲಿದ್ದಾರೆ ಎಂದು ಪಿಎಂಒ ತಿಳಿಸಿದೆ. 

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಕೇಂದ್ರಸರ್ಕಾರವು ದೇಶಾದ್ಯಂತ ಅಭಿವೃದ್ಧಿ ಮತ್ತು ವಿವಿಧ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ. ದೇಶದ ಪ್ರತಿಯೊಬ್ಬ ನಾಗರಿಕನೂಕೂಡ ಉತ್ತಮ ಜೀವನ ನಡೆಸಬೇಕು, ಎಲ್ಲ ವರ್ಗದವನ್ನೂ ಒಳಗೊಂಡು ಬೆಳವಣಿಗೆಯಾಗಬೇಕು ಎಂಬುದು ಕೇಂದ್ರ ಸರ್ಕಾರದ ಸದಾಶಯ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಶ್ರಮಿಸುತ್ತಿದ್ದಾರೆ ಎಂದು ಪಿಎಂಒ ತಿಳಿಸಿದೆ.  ಹಾಗೇ, ಸರ್ಕಾರದ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಯೊಂದಿಗೆ, ಅವರು ಎದುರಿಸುತ್ತಿರುವ ಸವಾಲುಗಳನ್ನು ತಿಳಿದು, ಪರಿಸ್ಥಿತಿ ಪರಿಶೀಲನೆ ಮಾಡಲು ಪ್ರಸ್ತುತ ಸಂವಾದವು ಸಹಾಯ ಮಾಡಲಿದೆ. ಹಾಗೇ, ಜಿಲ್ಲೆಗಳಲ್ಲಿನ, ವಿವಿಧ ಇಲಾಖೆಗಳ ವಿವಿಧ ಯೋಜನೆಗಳನ್ನು ಸಾಧಿಸುವ ಗುರಿಯೊಂದಿಗೆ ಸಂವಾದ ಹಮ್ಮಿಕೊಳ್ಳಲಾಗಿದೆ ಎಂದೂ ಪಿಎಂಒ ಹೇಳಿದೆ.   ಪ್ರಗತಿ ಮತ್ತು ಅಭಿವೃದ್ಧಿಯಲ್ಲಿನ ಅಸಮಾನತೆ ಹೋಗಲಾಡಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಹಾಗೇ, ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ತಳಮಟ್ಟದ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವ ಕೊಡುತ್ತಾರೆ ಎಂದೂ ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದ ಪ್ರಿಯಾಂಕಾ ಗಾಂಧಿ; ಉಲ್ಟಾ ಹೊಡೆದಿದ್ದು ಯಾಕೆ?

Published On - 9:46 am, Sat, 22 January 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ