AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 29ರಂದು ಆಯುರ್ವೇದ ದಿನಾಚರಣೆಯಂದು 12,850 ಕೋಟಿ ರೂ ಮೌಲ್ಯದ ವಿವಿಧ ಆರೋಗ್ಯ ಯೋಜನೆಗಳಿಗೆ ಚಾಲನೆ

PM Modi to lauch healthcare projects worth Rs 12,850 crore: ಅಕ್ಟೋಬರ್ 29, ಮಂಗಳವಾರದಂದು ಧನ್ವಂತರಿ ಜಯಂತಿ ಮತ್ತು ಅಂತಾರಾಷ್ಟ್ರೀಯ ಆಯುರ್ವೇದ ದಿನಾಚರಣೆ ಇದೆ. ಅಂದು ಆರೋಗ್ಯ ಕ್ಷೇತ್ರದ ವಿವಿಧ ಯೋಜನೆಗಳಿಗೆ ಪ್ರಧಾನಿಗಳು ಚಾಲನೆ ಮತ್ತು ಅಡಿಗಲ್ಲು ಹಾಕಲಿದ್ದಾರೆ. ಕರ್ನಾಟಕದ ಕೆಲ ಯೋಜನೆಗಳೂ ಇದರಲ್ಲಿ ಒಳಗೊಂಡಿವೆ. 70 ವರ್ಷದ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆಯೂ ನಾಳೆಯೇ ಆಗಲಿದೆ.

ಅ. 29ರಂದು ಆಯುರ್ವೇದ ದಿನಾಚರಣೆಯಂದು 12,850 ಕೋಟಿ ರೂ ಮೌಲ್ಯದ ವಿವಿಧ ಆರೋಗ್ಯ ಯೋಜನೆಗಳಿಗೆ ಚಾಲನೆ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 28, 2024 | 4:17 PM

Share

ನವದೆಹಲಿ, ಅಕ್ಟೋಬರ್ 28: ನಾಳೆ ಮಂಗಳವಾರ ಧನ್ವಂತರಿ ಜಯಂತಿ ಇದೆ. ಆ ದಿನವನ್ನು ಆಯುರ್ವೇದ ದಿನವಾಗಿಯೂ ಆಚರಿಸಲಾಗುತ್ತದೆ. ನಾಳೆಯದ್ದು 9ನೇ ಆಯುರ್ವೇದ ದಿನವಾಗಿದ್ದು, ಆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಗಳ ಒಟ್ಟು ಮೌಲ್ಯ 12,850 ಕೋಟಿ ರೂಗೂ ಹೆಚ್ಚು ಎನ್ನಲಾಗಿದೆ.

ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆಯ ವ್ಯಾಪ್ತಿಯನ್ನು 70 ವರ್ಷ ಮೇಲ್ಪಟ್ಟ ಎಲ್ಲಾ ವೃದ್ಧರಿಗೂ ವಿಸ್ತರಿಸಲಾಗುತ್ತದೆ. ಯಾವುದೇ ಸಮುದಾಯದ, ಯಾವುದೇ ಆರ್ಥಿಕ ಮಟ್ಟದ ಹಿರಿಯ ನಾಗರಿಕರಿಗೆ ಈ ಸ್ಕೀಮ್ ಲಭ್ಯ ಇರುತ್ತದೆ.

ಇದನ್ನೂ ಓದಿ: ವಡೋದರಾದಲ್ಲಿ ಟಾಟಾ ಗ್ರೂಪ್​ನಿಂದ ಮಿಲಿಟರಿ ವಿಮಾನದ ಫ್ಯಾಕ್ಟರಿ; ಸ್ಪೇನ್ ಪ್ರಧಾನಿ ಮತ್ತು ನರೇಂದ್ರ ಮೋದಿಯಿಂದ ಉದ್ಘಾಟನೆ

ಅಕ್ಟೋಬರ್ 29ರಂದು ಪಿಎಂ ಚಾಲನೆಗೊಳಿಸುತ್ತಿರುವ ವಿವಿಧ ಯೋಜನೆಗಳು

  • ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹಲವು ಹೆಲ್ತ್​ಕೇರ್ ಸಂಸ್ಥೆಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುತ್ತದೆ.
  • ವಿವಿಧ ರಾಜ್ಯಗಳಲ್ಲಿ ಆಸ್ಪತ್ರೆ, ನರ್ಸಿಂಗ್ ಕಾಲೇಜು ಇತ್ಯಾದಿಗಳ ಉದ್ಘಾಟನೆ ಆಗಲಿದೆ.
  • ಭಾರತದ ಮೊದಲ ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎರಡನೇ ಹಂತದ ಯೋಜನೆಗೆ ಪಿಎಂ ಚಾಲನೆ ನೀಡಲಿದ್ದಾರೆ.
  • ದೇಶದ ವಿವಿಧೆಡೆ 11 ತೃತೀಯ ಆರೋಗ್ಯಪಾಲನಾ ಕೇಂದ್ರಗಳಲ್ಲಿ ಡ್ರೋನ್ ಸರ್ವಿಸ್​ಗೆ ಚಾಲನೆ ನೀಡಲಿದ್ದಾರೆ.
  • ಲಸಿಕೆ ಪ್ರಕ್ರಿಯೆ ಡಿಜಿಟಲೀಕರಣಕ್ಕಾಗಿ ಪ್ರಧಾನಿಗಳು ಯು-ವಿನ್ ಪೋರ್ಟಲ್ ಅನ್ನು ಪಿಎಂ ಚಾಲನೆ ನೀಡಲಿದ್ದಾರೆ. ಇದರಿಂದ ಗರ್ಭಿಣಿಯರು ಮತ್ತು ಶಿಶುಗಳಿಗೆ ಅನುಕೂಲವಾಗಲಿದೆ.
  • ಮೆಡಿಕಲ್ ಡಿವೈಸ್ ಮತ್ತು ಬಲ್ಕ್ ಆಗಿ ಔಷಧಗಳನ್ನು ಪಿಎಲ್​ಐ ಸ್ಕೀಮ್ ಅಡಿಯಲ್ಲಿ ತಯಾರಿಸಲು ಐದು ಯೋಜನೆಗಳಿಗೆ ಪಿಎಂ ಚಾಲನೆ ನೀಡಲಿದ್ದಾರೆ.
  • ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಬಲಪಡಿಸಲು ವಿವಿಧ ಕ್ರಮಗಳಿಗೆ ಚಾಲನೆ ಸಿಗಲಿದೆ.

ಇದನ್ನೂ ಓದಿ: ಐದಾರು ವರ್ಷದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಸಾವಿರ ಹೊಸ ಸ್ಟಾರ್ಟಪ್​ಗಳ ಆರಂಭ: ಪ್ರಧಾನಿ ಮೋದಿ

ಆಯುಷ್ಮಾನ್ ಭಾರತ್ ಹೆಲ್ತ್ ಇನ್​ಫ್ರಾಸ್ಟ್ರಕ್ಚರ್ ಮಿಷನ್ ಅಡಿಯಲ್ಲಿ ದೇಶದ ವಿವಿಧೆಡೆ 21 ಕ್ರಿಟಿಕಲ್ ಕೇರ್ ಬ್ಲಾಕ್​ಗಳನ್ನು ನಿರ್ಮಿಸಲಾಗುತ್ತಿದೆ. ಇದರಲ್ಲಿ ಕರ್ನಾಟಕವೂ ಒಳಗೊಂಡಿದೆ. ಇನ್ನು, ನರಸಾಪುರ ಮತ್ತು ಬೆಂಗಳೂರಿನ ಬೊಮ್ಮಸಂದ್ರದಲ್ಲಿ ಇಎಸ್​ಐ ಆಸ್ಪತ್ರೆ ನಿರ್ಮಾಣಕ್ಕೆ ನಾಳೆ ಅಡಿಗಲ್ಲು ಹಾಕಲಾಗುತ್ತಿದೆ.

ವೈದ್ಯಕೀಯ ಸಾಧನ ಮತ್ತು ಔಷಧಗಳ ತಯಾರಿಕೆಗೆ ಇರುವ ಪಿಎಲ್​ಐ ಸ್ಕೀಮ್ ಅಡಿಯಲ್ಲಿ ಐದು ಯೋಜನೆಗಳು ನಾಳೆ ಆರಂಭವಾಗುತ್ತಿವೆ. ಇದರಲ್ಲಿ ಬೆಂಗಳೂರಿನಲ್ಲಿ ಒಂದು ಸ್ಥಾಪನೆಯಾಗುತ್ತಿದೆ.

ಪಿಎಂ ಅವರು ನಾಲ್ಕು ಕಡೆ ಆಯುಷ್ ಎಕ್ಸಲೆನ್ಸ್ ಸೆಂಟರ್​ಗಳನ್ನು ಉದ್ಘಾಟಿಸುತ್ತಿದ್ದಾರೆ. ಬೆಂಗಳೂರಿಯ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಡಯಾಬಿಟಿಸ್ ಅಂಡ್ ಮೆಟಬಾಲಿಕ್ ಡಿಸಾರ್ಡರ್ಸ್ ಎನ್ನುವ ಕೇಂದ್ರವೂ ಇದರಲ್ಲಿ ಸೇರಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Mon, 28 October 24

ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್