AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Bharat Mission Urban 2.0: ನಗರಗಳಲ್ಲಿ ಸ್ವಚ್ಛ ಭಾರತ ಮಿಷನ್ 2.0 ಗೆ ಶುಕ್ರವಾರ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

PM Narendra Modi: ದೇಶದ ಎಲ್ಲ ನಗರಗಳನ್ನೂ ಕಸಮುಕ್ತಗೊಳಿಸುವ ಮತ್ತು ನೀರಿನ ಮೂಲಗಳ ಸುರಕ್ಷಿತವಾಗಿರಿಸುವ ಉದ್ದೇಶದ ಮೇರೆಗೆ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.

Swachh Bharat Mission Urban 2.0: ನಗರಗಳಲ್ಲಿ ಸ್ವಚ್ಛ ಭಾರತ ಮಿಷನ್ 2.0 ಗೆ ಶುಕ್ರವಾರ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Sep 30, 2021 | 10:35 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಅಕ್ಟೋಬರ್ 1) ಬೆಳಗ್ಗೆ 11 ಗಂಟೆಗೆ ನಗರ ವಿಭಾಗದ ಸ್ವಚ್ಛ ಭಾರತ ಮಿಷನ್  2.0 ಮತ್ತು ಅಮೃತ್ 2.0 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ದೇಶದ ಎಲ್ಲ ನಗರಗಳನ್ನೂ ಕಸಮುಕ್ತಗೊಳಿಸುವ ಮತ್ತು ನೀರಿನ ಮೂಲಗಳ ಸುರಕ್ಷಿತವಾಗಿರಿಸುವ ಉದ್ದೇಶದ ಮೇರೆಗೆ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.

2009ರಲ್ಲಿ ಜಾರಿಗೆ ಬಂದಿದ್ದ ನಿರ್ಮಲ ಭಾರತ ಯೋಜನೆಯು ಅಷ್ಟು ಪರಿಣಾಮಕಾರಿಯಾಗಿ ಜಾರಿಗೊಳ್ಳದ ಕಾರಣ 2014ರ ಅಕ್ಟೋಬರ್ 2 ಗಾಂಧೀ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸ್ವಚ್ಛ ಭಾರತ ಯೋಜನೆಯನ್ನು ದೇಶದಾದ್ಯಂತ ಅನುಷ್ಠಾನಕ್ಕೆ ತಂದಿತು. 2019ಕ್ಕೆ ಸ್ವಚ್ಛ ಭಾರತ್ ಮಿಶನ್ ಮೊದಲನೇ ಹಂತ ಮುಕ್ತಾಯಗೊಂಡಿದ್ದು 2020-2021ರಿಂದ 2024-2025ರವರೆಗೆ ಸ್ವಚ್ಛ ಭಾರತ್ ಯೋಜನೆಯ 2ನೇ ಹಂತ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಸ್ವಚ್ಛ ಭಾರತ್ ಯೋಜನೆಯನ್ನು ಗ್ರಾಮೀಣ ಮತ್ತು ನಗರಗಳೆಂಬ ಎರಡು ವಿಭಾಗ ಮಾಡಲಾಗಿದೆ. ಕುಡಿಯುವ ನೀರಿನ ಸ್ವಚ್ಛತೆ,  ಘನ ತ್ಯಾಜ್ಯ  ನಿರ್ವಹಣೆಯೇ ಮೊದಲಾದ ಹಲವು ಕಾರ್ಯಗಳನ್ನು ಈ ಯೋಜನೆಯಡಿ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಸ್ವಚ್ಛ ಭಾರತ ಯೋಜನೆಯಡಿ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ಅತ್ಯಂತ ಮಹತ್ವ ನೀಡಲಾಗಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ವಚ್ಛತಾ ಕಾರ್ಯಕ್ಕಿಳಿದಿದ್ದರು.

ಇದನ್ನೂ ಓದಿ:

Digital Health Mission 2021: ಆರೋಗ್ಯ ಕ್ಷೇತ್ರ ಸುಧಾರಣೆಯ ಅತ್ಯಂತ ಮಹತ್ವದ ಘಟ್ಟ ಈ ಡಿಜಿಟಲ್​ ಹೆಲ್ತ್​ ಮಿಷನ್​: ಪ್ರಧಾನಿ ಮೋದಿ

ಜೆಟ್​ಲಾಗ್​​ ಹಿಡಿತದಿಂದ ಪ್ರಧಾನಿ ನರೇಂದ್ರ ಮೋದಿ ತಪ್ಪಿಸಿಕೊಂಡಿದ್ದು ಹೇಗೆ? ಚುರುಕಿನ ಕೆಲಸವೇ ಪ್ರಯಾಣದ ಆಯಾಸಕ್ಕೂ ಮದ್ದು

Published On - 10:20 pm, Thu, 30 September 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?