AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Bharat Mission Urban 2.0: ನಗರಗಳಲ್ಲಿ ಸ್ವಚ್ಛ ಭಾರತ ಮಿಷನ್ 2.0 ಗೆ ಶುಕ್ರವಾರ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

PM Narendra Modi: ದೇಶದ ಎಲ್ಲ ನಗರಗಳನ್ನೂ ಕಸಮುಕ್ತಗೊಳಿಸುವ ಮತ್ತು ನೀರಿನ ಮೂಲಗಳ ಸುರಕ್ಷಿತವಾಗಿರಿಸುವ ಉದ್ದೇಶದ ಮೇರೆಗೆ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.

Swachh Bharat Mission Urban 2.0: ನಗರಗಳಲ್ಲಿ ಸ್ವಚ್ಛ ಭಾರತ ಮಿಷನ್ 2.0 ಗೆ ಶುಕ್ರವಾರ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Updated By: guruganesh bhat|

Updated on:Sep 30, 2021 | 10:35 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಅಕ್ಟೋಬರ್ 1) ಬೆಳಗ್ಗೆ 11 ಗಂಟೆಗೆ ನಗರ ವಿಭಾಗದ ಸ್ವಚ್ಛ ಭಾರತ ಮಿಷನ್  2.0 ಮತ್ತು ಅಮೃತ್ 2.0 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ದೇಶದ ಎಲ್ಲ ನಗರಗಳನ್ನೂ ಕಸಮುಕ್ತಗೊಳಿಸುವ ಮತ್ತು ನೀರಿನ ಮೂಲಗಳ ಸುರಕ್ಷಿತವಾಗಿರಿಸುವ ಉದ್ದೇಶದ ಮೇರೆಗೆ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.

2009ರಲ್ಲಿ ಜಾರಿಗೆ ಬಂದಿದ್ದ ನಿರ್ಮಲ ಭಾರತ ಯೋಜನೆಯು ಅಷ್ಟು ಪರಿಣಾಮಕಾರಿಯಾಗಿ ಜಾರಿಗೊಳ್ಳದ ಕಾರಣ 2014ರ ಅಕ್ಟೋಬರ್ 2 ಗಾಂಧೀ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸ್ವಚ್ಛ ಭಾರತ ಯೋಜನೆಯನ್ನು ದೇಶದಾದ್ಯಂತ ಅನುಷ್ಠಾನಕ್ಕೆ ತಂದಿತು. 2019ಕ್ಕೆ ಸ್ವಚ್ಛ ಭಾರತ್ ಮಿಶನ್ ಮೊದಲನೇ ಹಂತ ಮುಕ್ತಾಯಗೊಂಡಿದ್ದು 2020-2021ರಿಂದ 2024-2025ರವರೆಗೆ ಸ್ವಚ್ಛ ಭಾರತ್ ಯೋಜನೆಯ 2ನೇ ಹಂತ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಸ್ವಚ್ಛ ಭಾರತ್ ಯೋಜನೆಯನ್ನು ಗ್ರಾಮೀಣ ಮತ್ತು ನಗರಗಳೆಂಬ ಎರಡು ವಿಭಾಗ ಮಾಡಲಾಗಿದೆ. ಕುಡಿಯುವ ನೀರಿನ ಸ್ವಚ್ಛತೆ,  ಘನ ತ್ಯಾಜ್ಯ  ನಿರ್ವಹಣೆಯೇ ಮೊದಲಾದ ಹಲವು ಕಾರ್ಯಗಳನ್ನು ಈ ಯೋಜನೆಯಡಿ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಸ್ವಚ್ಛ ಭಾರತ ಯೋಜನೆಯಡಿ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ಅತ್ಯಂತ ಮಹತ್ವ ನೀಡಲಾಗಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ವಚ್ಛತಾ ಕಾರ್ಯಕ್ಕಿಳಿದಿದ್ದರು.

ಇದನ್ನೂ ಓದಿ:

Digital Health Mission 2021: ಆರೋಗ್ಯ ಕ್ಷೇತ್ರ ಸುಧಾರಣೆಯ ಅತ್ಯಂತ ಮಹತ್ವದ ಘಟ್ಟ ಈ ಡಿಜಿಟಲ್​ ಹೆಲ್ತ್​ ಮಿಷನ್​: ಪ್ರಧಾನಿ ಮೋದಿ

ಜೆಟ್​ಲಾಗ್​​ ಹಿಡಿತದಿಂದ ಪ್ರಧಾನಿ ನರೇಂದ್ರ ಮೋದಿ ತಪ್ಪಿಸಿಕೊಂಡಿದ್ದು ಹೇಗೆ? ಚುರುಕಿನ ಕೆಲಸವೇ ಪ್ರಯಾಣದ ಆಯಾಸಕ್ಕೂ ಮದ್ದು

Published On - 10:20 pm, Thu, 30 September 21

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್