AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ; ವಿವಿಧ ಜಲವಿದ್ಯುತ್​ ಯೋಜನೆಗಳಿಗೆ ಶಂಕುಸ್ಥಾಪನೆ

ದೇಶದಲ್ಲಿ ಹೇರಳವಾಗಿ ಲಭ್ಯವಿದ್ದೂ, ಬಳಕೆಯಾಗದ ಸಂಪನ್ಮೂಲಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುವತ್ತ ಪ್ರಧಾನಿ ನರೇಂದ್ರ ಮೋದಿ ನಿರಂತರವಾಗಿ ಗಮನಹರಿಸುತ್ತಿದ್ದಾರೆ. ಹೀಗೆ ಹಿಮಾಲಯದ ಪ್ರದೇಶಗಳಲ್ಲಿ ಜಲವಿದ್ಯುತ್​​ನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಅಂಥ ಯೋಜನೆಗಳಲ್ಲಿ ಒಂದು ಎಂದು ಪಿಎಂಒ ತಿಳಿಸಿದೆ.

ಇಂದು ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ; ವಿವಿಧ ಜಲವಿದ್ಯುತ್​ ಯೋಜನೆಗಳಿಗೆ ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 27, 2021 | 7:38 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ಇಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ 11 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಿಧ ಜಲವಿದ್ಯುತ್ ಯೋಜನೆಗೆ (Hydropower Projects) ಅವರು ಶಂಕುಸ್ಥಾಪನೆ ನೆರವೇರಿಸುವರು. ಈ ಕಾರ್ಯಕ್ರಮಕ್ಕೂ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಹಿಮಾಚಲ ಪ್ರದೇಶ ಜಾಗರಿಕ ಹೂಡಿಕೆದಾರರ ಸಭೆಯ ಎರಡನೇ ಶಿಲಾನ್ಯಾಸ ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. 28 ಸಾವಿರ ಕೋಟಿ ರೂಪಾಯಿ ಮೌಲ್ಯದ ಯೋಜನೆಯ ಪ್ರಾರಂಭದ ಮೂಲಕ ಈ ಪ್ರದೇಶದಲ್ಲಿ ಹೂಡಿಕೆಗೆ ಉತ್ತೇಜನ ಕೊಡುವ ಸಲುವಾಗಿ  ಸಭೆ ನಡೆಯಲಿದೆ ಎಂದು ಹೇಳಿದೆ. 

ದೇಶದಲ್ಲಿ ಹೇರಳವಾಗಿ ಲಭ್ಯವಿದ್ದೂ, ಬಳಕೆಯಾಗದ ಸಂಪನ್ಮೂಲಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುವತ್ತ ಪ್ರಧಾನಿ ನರೇಂದ್ರ ಮೋದಿ ನಿರಂತರವಾಗಿ ಗಮನಹರಿಸುತ್ತಿದ್ದಾರೆ. ಹೀಗೆ ಹಿಮಾಲಯದ ಪ್ರದೇಶಗಳಲ್ಲಿ ಜಲವಿದ್ಯುತ್​​ನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಅಂಥ ಯೋಜನೆಗಳಲ್ಲಿ ಒಂದು. ಇಂದು ಸುಮಾರು 12 ಗಂಟೆ ಹೊತ್ತಿಗೆ ಯೋಜನೆಗೆ ಶಂಕುಸ್ಥಾಪನೆ ನೆರವೇರಲಿದೆ.  ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೇಣುಕಾಜಿ ಅಣೆಕಟ್ಟು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಮೂರು ದಶಕಗಳಿಂದ ಬಾಕಿ ಉಳಿದಿದ್ದ ಯೋಜನೆ. ಈ ಯೋಜನೆಯ ಅನುಷ್ಠಾನಕ್ಕೆ ಆರು ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಹರ್ಯಾಣ, ರಾಜಸ್ಥಾನ, ಉತ್ತರಾಖಂಡ್​, ದೆಹಲಿ ರಾಜ್ಯಗಳನ್ನು ಕೇಂದ್ರ ಒಂದುಗೂಡಿಸಿದೆ. ಅದರ ಪರಿಣಾಮವಾಗಿ ಈಗ ಯೋಜನೆ ಕಾರ್ಯಸಾಧ್ಯವಾಗುತ್ತಿದೆ. ಅಂದಹಾಗೆ ಇದು 40 ಮೆಗಾ ವ್ಯಾಟ್​ ಸಾಮರ್ಥ್ಯದ ಯೋಜನೆಯಾಗಿದ್ದು, 7000 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಈ ಯೋಜನೆಯ ಪ್ರಮುಖ ಫಲಾನುಭವಿ ದೆಹಲಿಯಾಗಿದ್ದು, ಅಣೆಕಟ್ಟು ಯೋಜನೆ ಸಂಪೂರ್ಣವಾದರೆ ಒಂದು ವರ್ಷಕ್ಕೆ 500 ಮಿಲಿಯನ್ ಕ್ಯೂಬಿಕ್​ ಮೀಟರ್​ಗಳಷ್ಟು ನೀರನ್ನು ದೆಹಲಿ ಪಡೆಯಲಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ವಿವರಿಸಿದೆ.

ಇದನ್ನೂ ಹೊರತುಪಡಿಸಿದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲುಹ್ರಿ ಸ್ಟೇಜ್​ 1 ಹೈಡ್ರೋ ಪವರ್​ ಪ್ರಾಜೆಕ್ಟ್​ಗೆ ಶಂಕು ಸ್ಥಾಪನೆ ನೆರವೇರಿಸುವರು. ಇದು 210 ಮೆಗಾ ವ್ಯಾಟ್​ ಸಾಮರ್ಥ್ಯದ 1800 ಕೋಟಿ ರೂಪಾಯಿ ವೆಚ್ಚದ ಯೋಜನೆ. ಇದು ವಾರ್ಷಿಕ 750 ಮಿಲಿಯನ್​ ಯೂನಿಟ್​ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯಾಗಿದೆ. ಅದನ್ನು ಹೊರತುಪಡಿಸಿದರೆ, ಪ್ರಧಾನಿ ಮೋದಿಯವರು ಧೌಲಸಿಧ್​ ಜಲವಿದ್ಯುತ್​ ಯೋಜನೆಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಹಮೀರ್​ಪುರ ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ಜಲವಿದ್ಯುತ್​ ಸ್ಥಾವರ. ಸುಮಾರು 680 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಇದರ ಸಾಮರ್ಥ್ಯ 66 ಮೆಗಾವ್ಯಾಟ್​. ವರ್ಷಕ್ಕೆ 300 ಮಿಲಿಯನ್ ಯೂನಿಟ್​ ವಿದ್ಯುತ್​ ಉತ್ಪಾದನಾ ಸಾಮರ್ಥ್ಯವನ್ನು ಇಂದು ಹೊಂದಿದೆ. ಅದಾದ ಬಳಿಕ ಸವ್ರಾ-ಕುಡ್ಡು ಹೈಡ್ರೋ ಪವರ್​ ಯೋಜನೆ ಪ್ರಾರಂಭಕ್ಕೂ ಪ್ರಧಾನಿ ಮೋದಿ ಚಾಲನೆ ನೀಡುವರು. ಇದನ್ನು 2080 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 111 ಮೆಗಾ ವ್ಯಾಟ್​ ಸಾಮರ್ಥ್ಯದ್ದಾಗಿದೆ. ವಾರ್ಷಿಕವಾಗಿ 380 ಮಿಲಿಯನ್​ ಯೂನಿಟ್​ ವಿದ್ಯುತ್ ಉತ್ಪಾದನೆ ಮಾಡಲಿದೆ.

ಇದನ್ನೂ ಓದಿ: ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!