AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ; ವಿವಿಧ ಜಲವಿದ್ಯುತ್​ ಯೋಜನೆಗಳಿಗೆ ಶಂಕುಸ್ಥಾಪನೆ

ದೇಶದಲ್ಲಿ ಹೇರಳವಾಗಿ ಲಭ್ಯವಿದ್ದೂ, ಬಳಕೆಯಾಗದ ಸಂಪನ್ಮೂಲಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುವತ್ತ ಪ್ರಧಾನಿ ನರೇಂದ್ರ ಮೋದಿ ನಿರಂತರವಾಗಿ ಗಮನಹರಿಸುತ್ತಿದ್ದಾರೆ. ಹೀಗೆ ಹಿಮಾಲಯದ ಪ್ರದೇಶಗಳಲ್ಲಿ ಜಲವಿದ್ಯುತ್​​ನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಅಂಥ ಯೋಜನೆಗಳಲ್ಲಿ ಒಂದು ಎಂದು ಪಿಎಂಒ ತಿಳಿಸಿದೆ.

ಇಂದು ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ; ವಿವಿಧ ಜಲವಿದ್ಯುತ್​ ಯೋಜನೆಗಳಿಗೆ ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Updated By: Lakshmi Hegde|

Updated on: Dec 27, 2021 | 7:38 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ಇಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ 11 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಿಧ ಜಲವಿದ್ಯುತ್ ಯೋಜನೆಗೆ (Hydropower Projects) ಅವರು ಶಂಕುಸ್ಥಾಪನೆ ನೆರವೇರಿಸುವರು. ಈ ಕಾರ್ಯಕ್ರಮಕ್ಕೂ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಹಿಮಾಚಲ ಪ್ರದೇಶ ಜಾಗರಿಕ ಹೂಡಿಕೆದಾರರ ಸಭೆಯ ಎರಡನೇ ಶಿಲಾನ್ಯಾಸ ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. 28 ಸಾವಿರ ಕೋಟಿ ರೂಪಾಯಿ ಮೌಲ್ಯದ ಯೋಜನೆಯ ಪ್ರಾರಂಭದ ಮೂಲಕ ಈ ಪ್ರದೇಶದಲ್ಲಿ ಹೂಡಿಕೆಗೆ ಉತ್ತೇಜನ ಕೊಡುವ ಸಲುವಾಗಿ  ಸಭೆ ನಡೆಯಲಿದೆ ಎಂದು ಹೇಳಿದೆ. 

ದೇಶದಲ್ಲಿ ಹೇರಳವಾಗಿ ಲಭ್ಯವಿದ್ದೂ, ಬಳಕೆಯಾಗದ ಸಂಪನ್ಮೂಲಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುವತ್ತ ಪ್ರಧಾನಿ ನರೇಂದ್ರ ಮೋದಿ ನಿರಂತರವಾಗಿ ಗಮನಹರಿಸುತ್ತಿದ್ದಾರೆ. ಹೀಗೆ ಹಿಮಾಲಯದ ಪ್ರದೇಶಗಳಲ್ಲಿ ಜಲವಿದ್ಯುತ್​​ನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಅಂಥ ಯೋಜನೆಗಳಲ್ಲಿ ಒಂದು. ಇಂದು ಸುಮಾರು 12 ಗಂಟೆ ಹೊತ್ತಿಗೆ ಯೋಜನೆಗೆ ಶಂಕುಸ್ಥಾಪನೆ ನೆರವೇರಲಿದೆ.  ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೇಣುಕಾಜಿ ಅಣೆಕಟ್ಟು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಮೂರು ದಶಕಗಳಿಂದ ಬಾಕಿ ಉಳಿದಿದ್ದ ಯೋಜನೆ. ಈ ಯೋಜನೆಯ ಅನುಷ್ಠಾನಕ್ಕೆ ಆರು ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಹರ್ಯಾಣ, ರಾಜಸ್ಥಾನ, ಉತ್ತರಾಖಂಡ್​, ದೆಹಲಿ ರಾಜ್ಯಗಳನ್ನು ಕೇಂದ್ರ ಒಂದುಗೂಡಿಸಿದೆ. ಅದರ ಪರಿಣಾಮವಾಗಿ ಈಗ ಯೋಜನೆ ಕಾರ್ಯಸಾಧ್ಯವಾಗುತ್ತಿದೆ. ಅಂದಹಾಗೆ ಇದು 40 ಮೆಗಾ ವ್ಯಾಟ್​ ಸಾಮರ್ಥ್ಯದ ಯೋಜನೆಯಾಗಿದ್ದು, 7000 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಈ ಯೋಜನೆಯ ಪ್ರಮುಖ ಫಲಾನುಭವಿ ದೆಹಲಿಯಾಗಿದ್ದು, ಅಣೆಕಟ್ಟು ಯೋಜನೆ ಸಂಪೂರ್ಣವಾದರೆ ಒಂದು ವರ್ಷಕ್ಕೆ 500 ಮಿಲಿಯನ್ ಕ್ಯೂಬಿಕ್​ ಮೀಟರ್​ಗಳಷ್ಟು ನೀರನ್ನು ದೆಹಲಿ ಪಡೆಯಲಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ವಿವರಿಸಿದೆ.

ಇದನ್ನೂ ಹೊರತುಪಡಿಸಿದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲುಹ್ರಿ ಸ್ಟೇಜ್​ 1 ಹೈಡ್ರೋ ಪವರ್​ ಪ್ರಾಜೆಕ್ಟ್​ಗೆ ಶಂಕು ಸ್ಥಾಪನೆ ನೆರವೇರಿಸುವರು. ಇದು 210 ಮೆಗಾ ವ್ಯಾಟ್​ ಸಾಮರ್ಥ್ಯದ 1800 ಕೋಟಿ ರೂಪಾಯಿ ವೆಚ್ಚದ ಯೋಜನೆ. ಇದು ವಾರ್ಷಿಕ 750 ಮಿಲಿಯನ್​ ಯೂನಿಟ್​ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯಾಗಿದೆ. ಅದನ್ನು ಹೊರತುಪಡಿಸಿದರೆ, ಪ್ರಧಾನಿ ಮೋದಿಯವರು ಧೌಲಸಿಧ್​ ಜಲವಿದ್ಯುತ್​ ಯೋಜನೆಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಹಮೀರ್​ಪುರ ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ಜಲವಿದ್ಯುತ್​ ಸ್ಥಾವರ. ಸುಮಾರು 680 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಇದರ ಸಾಮರ್ಥ್ಯ 66 ಮೆಗಾವ್ಯಾಟ್​. ವರ್ಷಕ್ಕೆ 300 ಮಿಲಿಯನ್ ಯೂನಿಟ್​ ವಿದ್ಯುತ್​ ಉತ್ಪಾದನಾ ಸಾಮರ್ಥ್ಯವನ್ನು ಇಂದು ಹೊಂದಿದೆ. ಅದಾದ ಬಳಿಕ ಸವ್ರಾ-ಕುಡ್ಡು ಹೈಡ್ರೋ ಪವರ್​ ಯೋಜನೆ ಪ್ರಾರಂಭಕ್ಕೂ ಪ್ರಧಾನಿ ಮೋದಿ ಚಾಲನೆ ನೀಡುವರು. ಇದನ್ನು 2080 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 111 ಮೆಗಾ ವ್ಯಾಟ್​ ಸಾಮರ್ಥ್ಯದ್ದಾಗಿದೆ. ವಾರ್ಷಿಕವಾಗಿ 380 ಮಿಲಿಯನ್​ ಯೂನಿಟ್​ ವಿದ್ಯುತ್ ಉತ್ಪಾದನೆ ಮಾಡಲಿದೆ.

ಇದನ್ನೂ ಓದಿ: ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ