AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Noida International Airport: ಇಂದು ನೊಯ್ಡಾ ಏರ್​​ಪೋರ್ಟ್​​ಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಪ್ರಧಾನಿ ಮೋದಿ

ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಸೇರಿ ಉತ್ತರ ಪ್ರದೇಶದಲ್ಲಿ ಒಟ್ಟು ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಇರಲಿವೆ. ಹಾಗೇ, 5 ಇಂಟರ್​ನ್ಯಾಷನಲ್​ ಏರ್​ಪೋರ್ಟ್​ ಹೊಂದಿದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೂ ಉತ್ತರಪ್ರದೇಶ ರಾಜ್ಯ ಪಾತ್ರವಾಗಲಿದೆ.

Noida International Airport: ಇಂದು ನೊಯ್ಡಾ ಏರ್​​ಪೋರ್ಟ್​​ಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ಮೋದಿ
TV9 Web
| Edited By: |

Updated on:Nov 25, 2021 | 10:42 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಧ್ಯಾಹ್ನ 1ಗಂಟೆಗೆ ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜೇವಾರ್​​ನಲ್ಲಿ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Noida International Airport – NIA)ಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಕಾರ್ಯ 10,050 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ನಡೆಯುತ್ತಿದೆ. ಅಂದಹಾಗೇ, ಈ ಏರ್​ಪೋರ್ಟ್​​ನ್ನು 1300 ಹೆಕ್ಟೇರ್​​ಗೂ ಹೆಚ್ಚಿನ ವಿಸ್ತೀರ್ಣದ​ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಒಂದು ವರ್ಷಕ್ಕೆ 1.2 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯ ಇರಲಿದೆ. ಏರ್​ಪೋರ್ಟ್​​ 2024ರಿಂದ ಕಾರ್ಯಾಚರಣೆ ನಡೆಸುವ ನಿರೀಕ್ಷೆಯಿದೆ.  

ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ನಿನ್ನೆ ಟ್ವೀಟ್ ಮಾಡಿದ್ದು, ನವೆಂಬರ್​ 25, ಭಾರತ ಮತ್ತು ಉತ್ತರ ಪ್ರದೇಶದ ಮೂಲಸೌಕರ್ಯ ಕ್ಷೇತ್ರದಲ್ಲಿ ಒಂದು ಮಹತ್ವದ ಹೆಜ್ಜೆಯಾಗಲಿದೆ. ಮಧ್ಯಾಹ್ನ 1ಗಂಟೆಗೆ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಪ್ರಸಕ್ತ ಯೋಜನೆಯು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಮಹತ್ವದ ಉತ್ತೇಜನ ಆಗಿದೆ ಎಂದು ತಿಳಿಸಿದ್ದಾರೆ.

ಈ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಸೇರಿ ಉತ್ತರ ಪ್ರದೇಶದಲ್ಲಿ ಒಟ್ಟು ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಇರಲಿವೆ. ಹಾಗೇ, 5 ಇಂಟರ್​ನ್ಯಾಷನಲ್​ ಏರ್​ಪೋರ್ಟ್​ ಹೊಂದಿದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೂ ಉತ್ತರಪ್ರದೇಶ ರಾಜ್ಯ ಪಾತ್ರವಾಗಲಿದೆ. ಉತ್ತರ ಪ್ರದೇಶ ಪ್ರವಾಸೋದ್ಯಮಕ್ಕೆ ಹೆಚ್ಚೆಚ್ಚು ಆದ್ಯತೆ ನೀಡುತ್ತಿದೆ. ಇಲ್ಲಿ ಏರ್​ಪೋರ್ಟ್​ಗಳ ಸಂಖ್ಯೆಯೂ ಅಧಿಕವಾಗುತ್ತಿದೆ. ಅಯೋಧ್ಯೆಯಲ್ಲಿ ಒಂದು ವಿಮಾನ ನಿಲ್ದಾಣ ನಿರ್ಮಾಣ ಹಂತದಲ್ಲಿದ್ದರೆ, ಖುಷಿನಗರದಲ್ಲಿ ಇತ್ತೀಚೆಗಷ್ಟೇ ಒಂದು ಏರ್​ಪೋರ್ಟ್​ ಉದ್ಘಾಟನೆಯಾಗಿದೆ. ಅದರಲ್ಲೂ ಈ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಾಲ್ಕು ಹಂತದಲ್ಲಿ ಅಭಿವೃದ್ಧಿ ಮಾಡಲಾಗುವುದು. ಮೊದಲ ಹಂತದ ಅಭಿವೃದ್ಧಿ ಕೆಲಸ 36 ತಿಂಗಳಲ್ಲಿ ಮುಗಿಯುವುದು ಎಂದು ಸಿವಿಲ್​ ಏವಿಯೇಶನ್​ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಾಲ್​ ತಿಳಿಸಿದ್ದಾರೆ.

ಇದನ್ನೂ ಓದಿ: ಎಸಿಬಿ ಭರ್ಜರಿ ದಾಳಿ: ಭ್ರಷ್ಟರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಫಿಕ್ಸ್, ಜೈಲು ಶಿಕ್ಷೆ ಆಗಬಹುದಾ? ಒಂದು ಪಕ್ಷಿನೋಟ

Published On - 10:41 am, Thu, 25 November 21

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?