AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 7 ಕೊರೊನಾ ಲಸಿಕೆ ತಯಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಟ್ಟಿಗೆ ಪ್ರಧಾನಿ ಮೋದಿ ಸಭೆ

ದೇಶದಲ್ಲಿ ಅರ್ಹ ವಯಸ್ಸಿನವರಿಗೆ ಎಷ್ಟು ಬೇಗ ಸಾಧ್ಯವೋ ಅಷ್ಟು ಶೀಘ್ರದಲ್ಲೇ ಲಸಿಕೆ ಹಾಕುವ ವಿಧಾನಗಳ ಬಗ್ಗೆ ನರೇಂದ್ರ ಮೋದಿ ಈ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. 

ಇಂದು 7 ಕೊರೊನಾ ಲಸಿಕೆ ತಯಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಟ್ಟಿಗೆ ಪ್ರಧಾನಿ ಮೋದಿ ಸಭೆ
ನರೇಂದ್ರ ಮೋದಿ
TV9 Web
| Edited By: |

Updated on: Oct 23, 2021 | 12:09 PM

Share

ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ 100 ಕೋಟಿ ಡೋಸ್​​ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modiಯವರು ಇಂದು ದೇಶದ ಏಳು ಕೊರೊನಾ ವೈರಸ್​ ಲಸಿಕೆ ತಯಾರಕ ಸಂಸ್ಥೆ(Indian Manufacturers of Coronavirus Disease)ಗಳ ಪ್ರತಿನಿಧಿಗಳನ್ನು ಭೇಟಿಯಾಗಲಿದ್ದಾರೆ. ಸೀರಂ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾ, ಭಾರತ್​ ಬಯೋಟೆಕ್​, ಡಾ. ರೆಡ್ಡಿ ಲ್ಯಾಬೋರೇಟರೀಸ್​, ಜೈಡಸ್​ ಕ್ಯಾಡಿಲಾ, ಬಯೋಲಾಜಿಕಲ್​ ಇ, ಗೆನ್ನೋವಾ ಬಯೋಫಾರ್ಮಾ ಮತ್ತು ಪ್ಯಾನೇಸಿಯ ಬಯೋಟೆಕ್​​ನ ಪ್ರತಿನಿಧಿಗಳು ಪ್ರಧಾನಿ ಮೋದಿಯವರೊಂದಿಗಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.  ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ಮತ್ತು ಕೇಂದ್ರ ಆರೋಗ್ಯ ಇಲಾಕೆ ರಾಜ್ಯಸಚಿವರಾದ ಭಾರತಿ ಪ್ರವೀಣ್​ ಪವಾರ್​ ಕೂಡ ಇಂದಿನ ಸಭೆಯಲ್ಲಿ ಉಪಸ್ಥಿತರಿರುವರು. 

ಭಾರತದಲ್ಲಿ ಶೇ.31ರಷ್ಟು ಜನರಿಗೆ ಎರಡೂ ಡೋಸ್​ ಲಸಿಕೆ ನೀಡಲಾಗಿದೆ. ಉಳಿದ ಶೇ.75ಮಂದಿ ಇನ್ನೂ ಒಂದು ಡೋಸ್​ ಮಾತ್ರ ಪಡೆದಿದ್ದಾರೆ. ಹಾಗಾಗಿ ದೇಶದಲ್ಲಿ ಅರ್ಹ ವಯಸ್ಸಿನವರಿಗೆ ಎಷ್ಟು ಬೇಗ ಸಾಧ್ಯವೋ ಅಷ್ಟು ಶೀಘ್ರದಲ್ಲೇ ಲಸಿಕೆ ಹಾಕುವ ವಿಧಾನಗಳ ಬಗ್ಗೆ ನರೇಂದ್ರ ಮೋದಿ ಈ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.  ಇನ್ನು ದೇಶದಲ್ಲಿ ಶತಕೋಟಿ ಲಸಿಕೆ ನೀಡಿಕೆ ಮೈಲಿಗಲ್ಲನ್ನು ತಲುಪಿದ ಬೆನ್ನಲ್ಲೇ ಶುಕ್ರವಾರ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇದುವರೆಗೂ ಯಾರು ಕೊವಿಡ್​ 19 ಲಸಿಕೆ ಪಡೆದಿಲ್ಲವೋ ಅವರು ಆದ್ಯತೆಯ ಮೇರೆಗೆ ಹೋಗಿ ಮೊದಲು ಲಸಿಕೆ ಹಾಕಿಸಿಕೊಳ್ಳಿ ಎಂದು ಕರೆ ನೀಡಿದ್ದರು. ಕೊರೊನಾ ವಿರುದ್ಧದ ಹೋರಾಟ ಮುಗಿದಿಲ್ಲ. ಹಾಗಾಗಿ ಶಸ್ತ್ರಾಸ್ತ್ರ ಕೆಳಗೆ ಇಡುವ ಪ್ರಶ್ನೆಯೇ ಇಲ್ಲ. ನಾವೆಲ್ಲ ನಮ್ಮ ಹಬ್ಬಗಳನ್ನು ಅತ್ಯಂತ ಜಾಗರೂಕರಾಗಿ ಆಚರಿಸಬೇಕು. ಮಾಸ್ಕ್​ನ್ನು ಯಾವ ಕಾರಣಕ್ಕೂ ಮರೆಯಬಾರದು ಎಂದು ಸಲಹೆ ನೀಡಿದ್ದರು. ಇಷ್ಟು ದೊಡ್ಡ ಸಂಖ್ಯೆಯ ಜನರಿಗೆ ಕೊರೊನಾ ಲಸಿಕೆ ನೀಡಿರುವ ಕಾರಣ ಇಡೀ ಜಗತ್ತು ಈಗ ಭಾರತ ಸುರಕ್ಷಿತ ಎಂದುಕೊಳ್ಳುತ್ತದೆ ಎಂದೂ ಹೇಳಿದ್ದರು.

ಇದನ್ನೂ ಓದಿ: Coronavirus cases in India: 24ಗಂಟೆಯಲ್ಲಿ 16,326 ಹೊಸ ಕೊರೊನಾ ಪ್ರಕರಣಗಳು ಪತ್ತೆ; 666 ಮಂದಿ ಸಾವು

Babar Azam: ಹಿಂದಿನ ದಾಖಲೆ ಲೆಕ್ಕಕ್ಕೆ ಬರಲ್ಲ: ಭಾರತ ವಿರುದ್ಧ ಗೆದ್ದೇ ಗೆಲ್ಲುತ್ತೇವೆ ಎಂದ ಪಾಕಿಸ್ತಾನ ನಾಯಕ ಬಾಬರ್

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!