AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 7 ಕೊರೊನಾ ಲಸಿಕೆ ತಯಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಟ್ಟಿಗೆ ಪ್ರಧಾನಿ ಮೋದಿ ಸಭೆ

ದೇಶದಲ್ಲಿ ಅರ್ಹ ವಯಸ್ಸಿನವರಿಗೆ ಎಷ್ಟು ಬೇಗ ಸಾಧ್ಯವೋ ಅಷ್ಟು ಶೀಘ್ರದಲ್ಲೇ ಲಸಿಕೆ ಹಾಕುವ ವಿಧಾನಗಳ ಬಗ್ಗೆ ನರೇಂದ್ರ ಮೋದಿ ಈ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. 

ಇಂದು 7 ಕೊರೊನಾ ಲಸಿಕೆ ತಯಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಟ್ಟಿಗೆ ಪ್ರಧಾನಿ ಮೋದಿ ಸಭೆ
ನರೇಂದ್ರ ಮೋದಿ
TV9 Web
| Edited By: |

Updated on: Oct 23, 2021 | 12:09 PM

Share

ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ 100 ಕೋಟಿ ಡೋಸ್​​ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modiಯವರು ಇಂದು ದೇಶದ ಏಳು ಕೊರೊನಾ ವೈರಸ್​ ಲಸಿಕೆ ತಯಾರಕ ಸಂಸ್ಥೆ(Indian Manufacturers of Coronavirus Disease)ಗಳ ಪ್ರತಿನಿಧಿಗಳನ್ನು ಭೇಟಿಯಾಗಲಿದ್ದಾರೆ. ಸೀರಂ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾ, ಭಾರತ್​ ಬಯೋಟೆಕ್​, ಡಾ. ರೆಡ್ಡಿ ಲ್ಯಾಬೋರೇಟರೀಸ್​, ಜೈಡಸ್​ ಕ್ಯಾಡಿಲಾ, ಬಯೋಲಾಜಿಕಲ್​ ಇ, ಗೆನ್ನೋವಾ ಬಯೋಫಾರ್ಮಾ ಮತ್ತು ಪ್ಯಾನೇಸಿಯ ಬಯೋಟೆಕ್​​ನ ಪ್ರತಿನಿಧಿಗಳು ಪ್ರಧಾನಿ ಮೋದಿಯವರೊಂದಿಗಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.  ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ಮತ್ತು ಕೇಂದ್ರ ಆರೋಗ್ಯ ಇಲಾಕೆ ರಾಜ್ಯಸಚಿವರಾದ ಭಾರತಿ ಪ್ರವೀಣ್​ ಪವಾರ್​ ಕೂಡ ಇಂದಿನ ಸಭೆಯಲ್ಲಿ ಉಪಸ್ಥಿತರಿರುವರು. 

ಭಾರತದಲ್ಲಿ ಶೇ.31ರಷ್ಟು ಜನರಿಗೆ ಎರಡೂ ಡೋಸ್​ ಲಸಿಕೆ ನೀಡಲಾಗಿದೆ. ಉಳಿದ ಶೇ.75ಮಂದಿ ಇನ್ನೂ ಒಂದು ಡೋಸ್​ ಮಾತ್ರ ಪಡೆದಿದ್ದಾರೆ. ಹಾಗಾಗಿ ದೇಶದಲ್ಲಿ ಅರ್ಹ ವಯಸ್ಸಿನವರಿಗೆ ಎಷ್ಟು ಬೇಗ ಸಾಧ್ಯವೋ ಅಷ್ಟು ಶೀಘ್ರದಲ್ಲೇ ಲಸಿಕೆ ಹಾಕುವ ವಿಧಾನಗಳ ಬಗ್ಗೆ ನರೇಂದ್ರ ಮೋದಿ ಈ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.  ಇನ್ನು ದೇಶದಲ್ಲಿ ಶತಕೋಟಿ ಲಸಿಕೆ ನೀಡಿಕೆ ಮೈಲಿಗಲ್ಲನ್ನು ತಲುಪಿದ ಬೆನ್ನಲ್ಲೇ ಶುಕ್ರವಾರ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇದುವರೆಗೂ ಯಾರು ಕೊವಿಡ್​ 19 ಲಸಿಕೆ ಪಡೆದಿಲ್ಲವೋ ಅವರು ಆದ್ಯತೆಯ ಮೇರೆಗೆ ಹೋಗಿ ಮೊದಲು ಲಸಿಕೆ ಹಾಕಿಸಿಕೊಳ್ಳಿ ಎಂದು ಕರೆ ನೀಡಿದ್ದರು. ಕೊರೊನಾ ವಿರುದ್ಧದ ಹೋರಾಟ ಮುಗಿದಿಲ್ಲ. ಹಾಗಾಗಿ ಶಸ್ತ್ರಾಸ್ತ್ರ ಕೆಳಗೆ ಇಡುವ ಪ್ರಶ್ನೆಯೇ ಇಲ್ಲ. ನಾವೆಲ್ಲ ನಮ್ಮ ಹಬ್ಬಗಳನ್ನು ಅತ್ಯಂತ ಜಾಗರೂಕರಾಗಿ ಆಚರಿಸಬೇಕು. ಮಾಸ್ಕ್​ನ್ನು ಯಾವ ಕಾರಣಕ್ಕೂ ಮರೆಯಬಾರದು ಎಂದು ಸಲಹೆ ನೀಡಿದ್ದರು. ಇಷ್ಟು ದೊಡ್ಡ ಸಂಖ್ಯೆಯ ಜನರಿಗೆ ಕೊರೊನಾ ಲಸಿಕೆ ನೀಡಿರುವ ಕಾರಣ ಇಡೀ ಜಗತ್ತು ಈಗ ಭಾರತ ಸುರಕ್ಷಿತ ಎಂದುಕೊಳ್ಳುತ್ತದೆ ಎಂದೂ ಹೇಳಿದ್ದರು.

ಇದನ್ನೂ ಓದಿ: Coronavirus cases in India: 24ಗಂಟೆಯಲ್ಲಿ 16,326 ಹೊಸ ಕೊರೊನಾ ಪ್ರಕರಣಗಳು ಪತ್ತೆ; 666 ಮಂದಿ ಸಾವು

Babar Azam: ಹಿಂದಿನ ದಾಖಲೆ ಲೆಕ್ಕಕ್ಕೆ ಬರಲ್ಲ: ಭಾರತ ವಿರುದ್ಧ ಗೆದ್ದೇ ಗೆಲ್ಲುತ್ತೇವೆ ಎಂದ ಪಾಕಿಸ್ತಾನ ನಾಯಕ ಬಾಬರ್

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’