AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 7 ಕೊರೊನಾ ಲಸಿಕೆ ತಯಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಟ್ಟಿಗೆ ಪ್ರಧಾನಿ ಮೋದಿ ಸಭೆ

ದೇಶದಲ್ಲಿ ಅರ್ಹ ವಯಸ್ಸಿನವರಿಗೆ ಎಷ್ಟು ಬೇಗ ಸಾಧ್ಯವೋ ಅಷ್ಟು ಶೀಘ್ರದಲ್ಲೇ ಲಸಿಕೆ ಹಾಕುವ ವಿಧಾನಗಳ ಬಗ್ಗೆ ನರೇಂದ್ರ ಮೋದಿ ಈ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. 

ಇಂದು 7 ಕೊರೊನಾ ಲಸಿಕೆ ತಯಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಟ್ಟಿಗೆ ಪ್ರಧಾನಿ ಮೋದಿ ಸಭೆ
ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Oct 23, 2021 | 12:09 PM

Share

ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ 100 ಕೋಟಿ ಡೋಸ್​​ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modiಯವರು ಇಂದು ದೇಶದ ಏಳು ಕೊರೊನಾ ವೈರಸ್​ ಲಸಿಕೆ ತಯಾರಕ ಸಂಸ್ಥೆ(Indian Manufacturers of Coronavirus Disease)ಗಳ ಪ್ರತಿನಿಧಿಗಳನ್ನು ಭೇಟಿಯಾಗಲಿದ್ದಾರೆ. ಸೀರಂ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾ, ಭಾರತ್​ ಬಯೋಟೆಕ್​, ಡಾ. ರೆಡ್ಡಿ ಲ್ಯಾಬೋರೇಟರೀಸ್​, ಜೈಡಸ್​ ಕ್ಯಾಡಿಲಾ, ಬಯೋಲಾಜಿಕಲ್​ ಇ, ಗೆನ್ನೋವಾ ಬಯೋಫಾರ್ಮಾ ಮತ್ತು ಪ್ಯಾನೇಸಿಯ ಬಯೋಟೆಕ್​​ನ ಪ್ರತಿನಿಧಿಗಳು ಪ್ರಧಾನಿ ಮೋದಿಯವರೊಂದಿಗಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.  ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ಮತ್ತು ಕೇಂದ್ರ ಆರೋಗ್ಯ ಇಲಾಕೆ ರಾಜ್ಯಸಚಿವರಾದ ಭಾರತಿ ಪ್ರವೀಣ್​ ಪವಾರ್​ ಕೂಡ ಇಂದಿನ ಸಭೆಯಲ್ಲಿ ಉಪಸ್ಥಿತರಿರುವರು. 

ಭಾರತದಲ್ಲಿ ಶೇ.31ರಷ್ಟು ಜನರಿಗೆ ಎರಡೂ ಡೋಸ್​ ಲಸಿಕೆ ನೀಡಲಾಗಿದೆ. ಉಳಿದ ಶೇ.75ಮಂದಿ ಇನ್ನೂ ಒಂದು ಡೋಸ್​ ಮಾತ್ರ ಪಡೆದಿದ್ದಾರೆ. ಹಾಗಾಗಿ ದೇಶದಲ್ಲಿ ಅರ್ಹ ವಯಸ್ಸಿನವರಿಗೆ ಎಷ್ಟು ಬೇಗ ಸಾಧ್ಯವೋ ಅಷ್ಟು ಶೀಘ್ರದಲ್ಲೇ ಲಸಿಕೆ ಹಾಕುವ ವಿಧಾನಗಳ ಬಗ್ಗೆ ನರೇಂದ್ರ ಮೋದಿ ಈ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.  ಇನ್ನು ದೇಶದಲ್ಲಿ ಶತಕೋಟಿ ಲಸಿಕೆ ನೀಡಿಕೆ ಮೈಲಿಗಲ್ಲನ್ನು ತಲುಪಿದ ಬೆನ್ನಲ್ಲೇ ಶುಕ್ರವಾರ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇದುವರೆಗೂ ಯಾರು ಕೊವಿಡ್​ 19 ಲಸಿಕೆ ಪಡೆದಿಲ್ಲವೋ ಅವರು ಆದ್ಯತೆಯ ಮೇರೆಗೆ ಹೋಗಿ ಮೊದಲು ಲಸಿಕೆ ಹಾಕಿಸಿಕೊಳ್ಳಿ ಎಂದು ಕರೆ ನೀಡಿದ್ದರು. ಕೊರೊನಾ ವಿರುದ್ಧದ ಹೋರಾಟ ಮುಗಿದಿಲ್ಲ. ಹಾಗಾಗಿ ಶಸ್ತ್ರಾಸ್ತ್ರ ಕೆಳಗೆ ಇಡುವ ಪ್ರಶ್ನೆಯೇ ಇಲ್ಲ. ನಾವೆಲ್ಲ ನಮ್ಮ ಹಬ್ಬಗಳನ್ನು ಅತ್ಯಂತ ಜಾಗರೂಕರಾಗಿ ಆಚರಿಸಬೇಕು. ಮಾಸ್ಕ್​ನ್ನು ಯಾವ ಕಾರಣಕ್ಕೂ ಮರೆಯಬಾರದು ಎಂದು ಸಲಹೆ ನೀಡಿದ್ದರು. ಇಷ್ಟು ದೊಡ್ಡ ಸಂಖ್ಯೆಯ ಜನರಿಗೆ ಕೊರೊನಾ ಲಸಿಕೆ ನೀಡಿರುವ ಕಾರಣ ಇಡೀ ಜಗತ್ತು ಈಗ ಭಾರತ ಸುರಕ್ಷಿತ ಎಂದುಕೊಳ್ಳುತ್ತದೆ ಎಂದೂ ಹೇಳಿದ್ದರು.

ಇದನ್ನೂ ಓದಿ: Coronavirus cases in India: 24ಗಂಟೆಯಲ್ಲಿ 16,326 ಹೊಸ ಕೊರೊನಾ ಪ್ರಕರಣಗಳು ಪತ್ತೆ; 666 ಮಂದಿ ಸಾವು

Babar Azam: ಹಿಂದಿನ ದಾಖಲೆ ಲೆಕ್ಕಕ್ಕೆ ಬರಲ್ಲ: ಭಾರತ ವಿರುದ್ಧ ಗೆದ್ದೇ ಗೆಲ್ಲುತ್ತೇವೆ ಎಂದ ಪಾಕಿಸ್ತಾನ ನಾಯಕ ಬಾಬರ್

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?