AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2022: ಇಂದು ಪ್ರಧಾನಿ ಮೋದಿಯಿಂದ ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಹೊಲೋಗ್ರಾಮ್​ ಪ್ರತಿಮೆ ಅನಾವರಣ

ಇಂಡಿಯಾ ಗೇಟ್​​ನ ಬಳಿಯಿದ್ದ ಅಮರ ಜವಾನ್​ ಜ್ಯೋತಿಯನ್ನು ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ಶುಕ್ರವಾರ ವಿಲೀನಗೊಳಿಸಲಾಗಿದೆ. ಇದೀಗ ಆ ಅಮರ ಜವಾನ್ ಜ್ಯೋತಿ ಇದ್ದ ಜಾಗದ ಮೇಲ್ಛಾವಣಿ ಮೇಲೆ ನೇತಾಜಿ ಸುಭಾಷ್​ ಚಂದ್ರಬೋಸ್ ಅವರ ಹೊಲೋಗ್ರಾಮ್​ ಪ್ರತಿಮೆ ಅನಾವರಣಗೊಳ್ಳಲಿದೆ.

Republic Day 2022: ಇಂದು ಪ್ರಧಾನಿ ಮೋದಿಯಿಂದ ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಹೊಲೋಗ್ರಾಮ್​ ಪ್ರತಿಮೆ ಅನಾವರಣ
ನೇತಾಜಿ ಸುಭಾಷ್​ ಚಂದ್ರ ಬೋಸ್ ಪ್ರತಿಮೆ (ಎಎನ್​ಐ ಚಿತ್ರ)
TV9 Web
| Edited By: |

Updated on:Jan 23, 2022 | 9:11 AM

Share

ಗಣರಾಜ್ಯೋತ್ಸವ ಆಚರಣೆ ದೇಶದಲ್ಲಿ ಇಂದಿನಿಂದಲೇ ಪ್ರಾರಂಭವಾಗಲಿದೆ. ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ನೇತಾಜಿಯವರ ಹೊಲೋಗ್ರಾಮ್​ ಪ್ರತಿಮೆ (ಲೇಸರ್ ಅಥವಾ ಅಂಥ ಇತರ ಬೆಳಕಿನ ಕಿರಣಗಳ ಟಚ್​ ಕೊಡಲಾದ  ಮೂರು ಆಯಾಮದ ಪ್ರತಿಮೆ). ದೇಶದಲ್ಲಿ ಸಾಮಾನ್ಯವಾಗಿ ಜನವರಿ 24ರಿಂದ ಗಣರಾಜ್ಯೋತ್ಸವ ದಿನಾಚರಣೆ ಶುರುವಾಗುತ್ತಿತ್ತು. ಆದರೆ ಈ ಬಾರಿ ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮದಿನದಿಂದಲೇ ಗಣರಾಜ್ಯೋತ್ಸವ ಸಂಭ್ರಮವೂ ಶುರುವಾಗಲಿದೆ ಎಂದು ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಹೇಳಿದೆ.

ನೇತಾಜಿ ಸುಭಾಷ್​ ಚಂದ್ರ ಬೋಸ್​ ಪ್ರತಿಮೆಯನ್ನು ಗ್ರಾನೈಟ್​​ನಿಂದ ಮಾಡಲಾಗಿದ್ದು, ಅದನ್ನು ಇಂಡಿಯಾ ಗೇಟ್​ ಬಳಿ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.  ಈ ಬಗ್ಗೆ ನಿನ್ನೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಈ ಬಾರಿ ದೇಶ ನೇತಾಜಿ ಸುಭಾಷ್​ ಚಂದ್ರ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಗ್ರಾನೈಟ್​​ನಿಂದ ನಿರ್ಮಿಸಲಾದ ಅವರ ಬಹುದೊಡ್ಡ ಪ್ರತಿಮೆಯನ್ನು ಇಂಡಿಯಾ ಗೇಟ್​ಬಳಿ ಸ್ಥಾಪಿಸಲಾಗುತ್ತಿರುವುದಕ್ಕೆ ನನಗೆ ತುಂಬ ಸಂತೋಷವಾಗುತ್ತಿದೆ. ನೇತಾಜಿಯವರ ಋಣ ತೀರಿಸುವ ಒಂದು ಅವಕಾಶ ಎಂದೇ ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ. ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ ಗ್ರಾನೈಟ್​ ಪ್ರತಿಮೆ ಪೂರ್ಣಗೊಳ್ಳಲು ಇನ್ನೂ ಸಮಯ ಬೇಕು. ಅಲ್ಲಿಯವರೆಗೆ ಈ ಹೊಲೋಗ್ರಾಮ್​ ಪ್ರತಿಮೆ ಇರುತ್ತದೆ ಎಂದೂ ಪ್ರಧಾನಿ ತಿಳಿಸಿದ್ದಾರೆ. ಸುಭಾಷ್​ ಚಂದ್ರ ಬೋಸ್ ಅವರ ಹೊಲೋಗ್ರಾಮ್​ ಮೂರ್ತಿ 30 ಸಾವಿರ ಲ್ಯೂಮೆನ್ಸ್​ 4ಕೆ ಪ್ರಾಜೆಕ್ಟರ್​​ನಿಂದ ಚಾಲಿತವಾಗಿದೆ ಎಂದು ಪಿಎಂಒ ತಿಳಿಸಿದೆ.

ಇಂಡಿಯಾ ಗೇಟ್​​ನ ಬಳಿಯಿದ್ದ ಅಮರ ಜವಾನ್​ ಜ್ಯೋತಿಯನ್ನು ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ಶುಕ್ರವಾರ ವಿಲೀನಗೊಳಿಸಲಾಗಿದೆ. ಇದೀಗ ಆ ಅಮರ ಜವಾನ್ ಜ್ಯೋತಿ ಇದ್ದ ಜಾಗದ ಮೇಲ್ಛಾವಣಿ ಮೇಲೆ ನೇತಾಜಿ ಸುಭಾಷ್​ ಚಂದ್ರಬೋಸ್ ಅವರ ಹೊಲೋಗ್ರಾಮ್​ ಪ್ರತಿಮೆ ಅನಾವರಣಗೊಳ್ಳಲಿದೆ. ಗ್ರಾನೈಟ್​ನ ಭವ್ಯ ಮೂರ್ತಿ ಪೂರ್ಣಪ್ರಮಾಣದಲ್ಲಿ ಸಿದ್ಧ ಆಗುವವರೆಗೂ ಈ ಪ್ರತಿಮೆ ಇರಲಿದೆ.  ಅಂದಹಾಗೇ, ಸುಭಾಷ್​ ಚಂದ್ರ ಬೋಸ್​​ ಅವರ ಗ್ರಾನೈಟ್​ ಪ್ರತಿಮೆ 28 ಅಡಿ ಎತ್ತರ ಮತ್ತು ಆರು ಅಡಿ ಅಗಲ ಇರಲಿದೆ ಎಂದು ನ್ಯಾಶನಲ್​ ಮಾಡರ್ನ್​ ಆರ್ಟ್​ ಗ್ಯಾಲರಿಯ ಪ್ರಧಾನ ನಿರ್ದೇಶಕರಾದ ಅದ್ವೈತಾ ಗಡನಾಯಕ್​ ತಿಳಿಸಿದ್ದಾರೆ. ನೇತಾಜಿ ಗ್ರಾನೈಟ್​ ಪ್ರತಿಮೆಯನ್ನು ಇಂಡಿಯಾ ಗೇಟ್​ ಬಳಿ ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಟಿಎಂಸಿ ಸೇರಿ ಹಲವು ಪ್ರತಿಪಕ್ಷಗಳು ಸ್ವಾಗತಿಸಿವೆ.

ಇದನ್ನೂ ಓದಿ: Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ; ವೈದ್ಯರು ನೀಡಿದ ಮಾಹಿತಿ ಇಲ್ಲಿದೆ

Published On - 8:20 am, Sun, 23 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ