AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 7-8 ರಂದು ಛತ್ತೀಸ್‌ಗಢ, ಯುಪಿ, ತೆಲಂಗಾಣ ಮತ್ತು ರಾಜಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

8ರಂದು ಪ್ರಧಾನಿ ವಾರಣಾಸಿಯಿಂದ ತೆಲಂಗಾಣದ ವಾರಂಗಲ್‌ಗೆ ಪ್ರಯಾಣಿಸಲಿದ್ದಾರೆ. ಇಲ್ಲಿ ಅವರು ನಾಗ್ಪುರ-ವಿಜಯವಾಡ ಕಾರಿಡಾರ್‌ನ ಪ್ರಮುಖ ವಿಭಾಗಗಳು ಸೇರಿದಂತೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ

ಜುಲೈ 7-8 ರಂದು ಛತ್ತೀಸ್‌ಗಢ, ಯುಪಿ, ತೆಲಂಗಾಣ ಮತ್ತು ರಾಜಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 04, 2023 | 7:05 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಜುಲೈ 7-8 ರಂದು ಛತ್ತೀಸ್‌ಗಢ (Chhattisgarh), ಉತ್ತರ ಪ್ರದೇಶ, ತೆಲಂಗಾಣ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ರಾಯ್‌ಪುರ್, ಗೋರಖ್‌ಪುರ, ವಾರಣಾಸಿ, ವಾರಂಗಲ್ ಮತ್ತು ಬಿಕಾನೇರ್ – ಐದು ನಗರಗಳಲ್ಲಿ ಸುಮಾರು ಹನ್ನೆರಡು ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಪ್ರವಾಸದ ವೇಳೆ 50,000 ಕೋಟಿ ವೆಚ್ಚದ 50 ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮೋದಿ.  ಜುಲೈ 7 ರಂದು ಪ್ರಧಾನಮಂತ್ರಿಯವರು  ದೆಹಲಿಯಿಂದ ರಾಯಪುರಕ್ಕೆ ಪ್ರಯಾಣಿಸಲಿದ್ದು, ಅಲ್ಲಿ ಶಂಕುಸ್ಥಾಪನೆ ಮತ್ತು ಬಹು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಅವರು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿಯವರು ನಂತರ ಗೋರಖ್‌ಪುರಕ್ಕೆ ಪ್ರಯಾಣಿಸಲಿದ್ದು, ಅಲ್ಲಿ ಗೀತಾ ಪ್ರೆಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 3 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿರುವ ಅವರು ಗೋರಖ್‌ಪುರ ರೈಲು ನಿಲ್ದಾಣದ ಪುನರಾಭಿವೃದ್ಧಿಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಗೋರಖ್‌ಪುರದಿಂದ ಮೋದಿ ವಾರಣಾಸಿಗೆ ಪ್ರಯಾಣಿಸಲಿದ್ದು, ಅಲ್ಲಿ ಬಹುಮುಖ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್​​​ನಿಂದ ಸೋನ್ ನಗರಕ್ಕೆ ಮೀಸಲಾದ ಸರಕು ಸಾಗಣೆ ಕಾರಿಡಾರ್‌ನ ಹೊಸ ಮಾರ್ಗ ಮತ್ತು NH56 (ವಾರಣಾಸಿ – ಜೌನ್‌ಪುರ್) ನ ನಾಲ್ಕು ಲೇನ್ ಅಗಲೀಕರಣವನ್ನು ಪ್ರಧಾನಿ ದೇಶಕ್ಕೆ ಸಮರ್ಪಿಸಲಿದ್ದಾರೆ. ಅದೇ ವೇಳೆ ಮಣಿಕರ್ಣಿಕಾ ಘಾಟ್ ಮತ್ತು ಹರಿಶ್ಚಂದ್ರ ಘಾಟ್ ನವೀಕರಣಕ್ಕೆ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ.

8ರಂದು ಪ್ರಧಾನಿ ವಾರಣಾಸಿಯಿಂದ ತೆಲಂಗಾಣದ ವಾರಂಗಲ್‌ಗೆ ಪ್ರಯಾಣಿಸಲಿದ್ದಾರೆ. ಇಲ್ಲಿ ಅವರು ನಾಗ್ಪುರ-ವಿಜಯವಾಡ ಕಾರಿಡಾರ್‌ನ ಪ್ರಮುಖ ವಿಭಾಗಗಳು ಸೇರಿದಂತೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಕರೀಂನಗರದ ನಾಲ್ಕು ಲೇನಿಂಗ್‌ಗೆ ಶಂಕುಸ್ಥಾಪನೆ ಮಾಡಿದ ನಂತರ ಅವರು ವಾರಂಗಲ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿಬಿಹಾರದಲ್ಲಿ ಜೆಡಿಯು ಪಕ್ಷ ವಿಭಜನೆಯ ಅಂಚಿನಲ್ಲಿದೆ: ಸುಶೀಲ್ ಮೋದಿ

ವಾರಂಗಲ್‌ನಿಂದ ಬಿಕಾನೇರ್‌ಗೆ ಪ್ರಯಾಣಿಸಲಿರುವ ಪ್ರಧಾನಿ ಅಮೃತಸರ ಜಾಮ್‌ನಗರ ಎಕ್ಸ್‌ಪ್ರೆಸ್‌ವೇಯ ವಿವಿಧ ವಿಭಾಗಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಗ್ರೀನ್ ಎನರ್ಜಿ ಕಾರಿಡಾರ್ ಹಂತ-I ಗಾಗಿ ಇಂಟರ್-ಸ್ಟೇಟ್ ಟ್ರಾನ್ಸ್ಮಿಷನ್ ಲೈನ್  ಮತ್ತು ಬಿಕಾನೇರ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಪ್ರಧಾನಮಂತ್ರಿ ಅಡಿಪಾಯ ಹಾಕಲಿದ್ದಾರೆ. ಬಳಿಕ ಬಿಕಾನೇರ್‌ನಲ್ಲಿ ಮೋದಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Tue, 4 July 23

Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್