AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Gujarat Visit: ಗುಜರಾತ್‌ನಲ್ಲಿ ಇಂದು ₹4,400 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೋದಿಯವರು ಗಾಂಧಿನಗರದ 'ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಶನ'ದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಗಿಫ್ಟ್ ಸಿಟಿಗೂ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ

PM Modi Gujarat Visit: ಗುಜರಾತ್‌ನಲ್ಲಿ ಇಂದು ₹4,400 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 12, 2023 | 6:30 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು(ಶುಕ್ರವಾರ) ಗುಜರಾತ್‌ಗೆ (Gujarat) ಭೇಟಿ ನೀಡಲಿದ್ದು, ಸುಮಾರು 4,400 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ 19,000 ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ವಸತಿ ಯೋಜನೆಯಡಿ ನಿರ್ಮಿಸಲಾದ ಮನೆಗಳನ್ನು ವಿತರಿಸಲಿದ್ದಾರೆ. ಮೋದಿಯವರು ಗಾಂಧಿನಗರದ (Gandhi nagar) ‘ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಶನ’ದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಗಿಫ್ಟ್ ಸಿಟಿಗೂ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ. ಗಾಂಧಿನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 2,450 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮೋದಿ ನೆರವೇರಿಸಲಿದ್ದಾರೆ ಎಂದು ಅದು ತಿಳಿಸಿದೆ.

ಇವುಗಳಲ್ಲಿ ನಗರಾಭಿವೃದ್ಧಿ ಇಲಾಖೆ, ನೀರು ಸರಬರಾಜು ಇಲಾಖೆ, ರಸ್ತೆ ಮತ್ತು ಸಾರಿಗೆ ಇಲಾಖೆ ಮತ್ತು ಗಣಿ ಮತ್ತು ಖನಿಜ ಇಲಾಖೆಯ ಯೋಜನೆಗಳು ಸೇರಿವೆ.

ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ ಮತ್ತು ನಗರ) ಯೋಜನೆಯ ಫಲಾನುಭವಿಗಳಿಗೆ ಅವರು ಕೀಗಳನ್ನು ಹಸ್ತಾಂತರಿಸಲಿದ್ದಾರೆ. ಈ ಯೋಜನೆಗಳ ಒಟ್ಟು ವೆಚ್ಚ ಸುಮಾರು 1,950 ಕೋಟಿ ರೂಪಾಯಿ ಎಂದು ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: PM Narendra Modi: ₹5,500 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (GIFT City) ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಅವರು ಅಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳ ಸ್ಥಿತಿಯನ್ನು ಪರಿಶೀಲಿಸುತ್ತಾರೆ. ಅಲ್ಲಿ ಅವರು GIFT IFSC ಯೊಂದಿಗೆ ಸಂವಾದವನ್ನು ನಡೆಸುತ್ತಾರೆ.

‘ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಶನ’ ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಒಕ್ಕೂಟದ 29ನೇ ದ್ವೈವಾರ್ಷಿಕ ಸಮ್ಮೇಳನವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್